![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 14, 2020, 5:51 PM IST
ಮುಂಬೈ: ಬಾಲಿವುಡ್ ನ ಯುವ ಪ್ರತಿಭಾವಂತ ನಟ, ಟಿವಿ ಸೀರಿಯಲ್ ಮೂಲಕ ವೃತ್ತಿ ಆರಂಭಿಸಿದ್ದ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣಾಗಿರುವುದು ಬಾಲಿವುಡ್ ಗೆ ಆಘಾತಕಾರಿ ಸುದ್ದಿಯಾಗಿದೆ. ಏತನ್ಮಧ್ಯೆ ಸುಶಾಂತ್ ಮಾನಸಿಕ ಒತ್ತಡ(ಡಿಪ್ರೆಶನ್)ದಿಂದ ಆತ್ಮಹತ್ಯೆಗೆ ಶರಣಾಗಿರುವುದಾಗಿ ಪ್ರಾಥಮಿಕ ವರದಿ ತಿಳಿಸಿದೆ.
ಯುವ ಪ್ರತಿಭೆಯ ನಟ ಸುಶಾಂತ್ ಸಿಂಗ್ ಸಹ ನಟಿಯಾಗಿದ್ದ ಅಂಕಿತಾ ಲೋಖಾಂಡೆಯನ್ನು ಸುಮಾರು ಆರು ವರ್ಷಗಳ ಕಾಲ ಪ್ರೀತಿಸಿದ್ದರು. ಆದರೆ 2016ರಲ್ಲಿ ಇಬ್ಬರ ಸಂಬಂಧದಲ್ಲಿ ಬಿರುಕು ಕಾಣಿಸಿಕೊಂಡ ಪರಿಣಾಮ ಬೇರೆ, ಬೇರೆಯಾಗಿದ್ದರು.
ಸುಶಾಂತ್ ಸಿಂಗ್ ಹಾಗೂ ರಿಯಾ ಚಕ್ರವರ್ತಿ ಜತೆ, ಜತೆಯಾಗಿ ಸುತ್ತಾಡುವ ಮೂಲಕ ಇಬ್ಬರ ನಡುವಿನ ರಿಲೇಷನ್ ಶಿಪ್ ಬಗ್ಗೆ ಗಾಸಿಪ್ ಹರಿದಾಡತೊಡಗಿತ್ತು. ಚಿಚೋರೆ ಸಿನಿಮಾದ ಯಶಸ್ಸಿನ ನಂತರ ಸುಶಾಂತ್ ಇಂಡಸ್ಟ್ರಿಯಲ್ಲಿ ಹೆಚ್ಚು ಸದ್ದು ಮಾಡಲಿಲ್ಲ. ಆದರೆ ಮಾಧ್ಯಮಗಳ ವರದಿ ಪ್ರಕಾರ, ಸುಶಾಂತ್ ಮತ್ತು ರಿಯಾ ಜೋಡಿ ನಡುವಿನ ಸಂಬಂಧ ಮತ್ತಷ್ಟು ಗಟ್ಟಿಯಾಗತೊಡಗಿತ್ತು.
ಸುಶಾಂತ್ ಕೂಡಾ ರಿಯಾಳ ಚೆಂದನೆಯ ಫೋಟೋವನ್ನು ಇನ್ಸ್ ಸ್ಟಾಗ್ರಾಂ ಸ್ಟೋರಿಯಲ್ಲಿ ಹಾಕಿಕೊಳ್ಳುವ ಮೂಲಕ ತಮ್ಮ ಲವ್ ಅಫೇರ್ ಅನ್ನು ಪರೋಕ್ಷವಾಗಿ ತಿಳಿಸಿದ್ದರು. “ಮೇರಿ ಜಿಲೇಬಿ@ರಿಯಾಚಕ್ರವರ್ತಿ” ಎಂದು ಕ್ಯಾಪ್ಶನ್ ಕೊಟ್ಟಿದ್ದರು.
ಬಾಂದ್ರಾದ ಅಪಾರ್ಟ್ ಮೆಂಟ್ ನಲ್ಲಿ ರಿಯಾ ಹಾಗೂ ಸುಶಾಂತ್ ಒಟ್ಟಿಗೆ ವಾಸಿಸುತ್ತಿದ್ದರು ಎಂದು ಉನ್ನತ ಮಟ್ಟದ ಮೂಲಗಳು ತಿಳಿಸಿರುವುದಾಗಿ ವರದಿ ಹೇಳಿದೆ. ಸುಶಾಂತ್ ಆತ್ಮಹತ್ಯೆ ಮಾಡಿಕೊಳ್ಳುವ ನಾಲ್ಕು ದಿನದ ಮೊದಲು ರಿಯಾ ಅಪಾರ್ಟ್ ಮೆಂಟ್ ನಿಂದ ಹೊರನಡೆದಿದ್ದಳು ಎಂದು ಹೇಳಲಾಗುತ್ತಿದೆ. ಬಂಗಾಳಿ ಕುಟುಂಬದ ರಿಯಾ ಚಕ್ರವರ್ತಿ ಜಿನಿಸಿದ್ದು ಬೆಂಗಳೂರಿನಲ್ಲಿ. ಈಕೆ ಅಂಬಾಲಾ ಕಂಟೋನ್ಮೆಂಟ್ ನ ಆರ್ಮಿ ಪಬ್ಲಿಕ್ ಸ್ಕೂಲ್ ನಲ್ಲಿ ವಿದ್ಯಾಭ್ಯಾಸ ಪಡೆದಿದ್ದಳು. 2013ರಲ್ಲಿ ತೆರೆಕಂಡಿದ್ದ ಬಾಲಿವುಡ್ ನ ಮೇರೆ ಡ್ಯಾಡಿ ಕಿ ಮಾರುತಿ ಸಿನಿಮಾದಲ್ಲಿ ನಟಿಸಿದ್ದಳು.
ಇಬ್ಬರ ನಡುವೆ ಜಗಳ ನಡೆದಿದ್ದರಬಹುದು, ಇದರಿಂದಾಗಿ ಸುಶಾಂತ್ ಮಾನಸಿಕ ಒತ್ತಡಕ್ಕೆ ಒಳಗಾಗಿರಬೇಕೆಂದು ವಿಶ್ಲೇಷಿಸಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ಯಾವುದೇ ಸೂಸೈಡ್ ನೋಟ್ ಸಿಕ್ಕಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.