ವಿಶ್ವಸಂಸ್ಥೆ ವಿಫ‌ಲವಾಗುತ್ತಿರುವುದೇಕೆ?-ಹಿರೋಶಿಮಾ ಜಿ7 ಶೃಂಗದಲ್ಲಿ PM ಮೋದಿ ಖಡಕ್‌ ಪ್ರಶ್ನೆ

ವಿಶ್ವಸಂಸ್ಥೆಯ ಸುಧಾರಣೆಗೆ ಮತ್ತೆ ಆಗ್ರಹ

Team Udayavani, May 22, 2023, 7:36 AM IST

MODI UNO

ಹಿರೋಶಿಮಾ: ವಿಶ್ವಸಂಸ್ಥೆಯಲ್ಲಿ ಸುಧಾರಣೆ ಆಗಬೇಕೆಂಬ ತನ್ನ ಹಲವು ವರ್ಷಗಳ ಬೇಡಿಕೆಯನ್ನು ಭಾರತ ಮತ್ತೂಮ್ಮೆ ಮುಂದಿಟ್ಟಿದೆ. ವಿಶ್ವಸಂಸ್ಥೆ ಹಾಗೂ ಭದ್ರತಾ ಮಂಡಳಿಯು ಪ್ರಸ್ತುತ ಜಗತ್ತಿನ ವಾಸ್ತವಗಳನ್ನು ಅರಿಯುವಲ್ಲಿ ವಿಫ‌ಲವಾದರೆ, ಅವುಗಳು ಕೇವಲ “ಟಾಕ್‌ ಶಾಪ್‌'(ಮಾತಲ್ಲಷ್ಟೇ) ಆಗಿ ಉಳಿಯಲಿದೆ ಎಂದು ಮೋದಿ ಖಡಕ್ಕಾಗಿ ನುಡಿದಿದ್ದಾರೆ.

ಜಪಾನ್‌ನ ಹಿರೋಶಿಮಾದಲ್ಲಿ ನಡೆದ ಜಿ7 ರಾಷ್ಟ್ರಗಳ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಈ ಮಾತುಗಳನ್ನಾಡಿದ್ದಾರೆ. ನಾವೇಕೆ ಶಾಂತಿ, ಸ್ಥಿರತೆ ಬಗ್ಗೆ ಬೇರೆ ವೇದಿಕೆಗಳಲ್ಲಿ ಮಾತಾಡಬೇಕು? ಶಾಂತಿ ಸ್ಥಾಪನೆಗೆಂದೇ ರೂಪುಗೊಂಡ ವಿಶ್ವಸಂಸ್ಥೆಗೆ ಸಂಘರ್ಷಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲವೇಕೆ? ಭಯೋತ್ಪಾದನೆಯ ವ್ಯಾಖ್ಯಾನವನ್ನೂ ವಿಶ್ವಸಂಸ್ಥೆ ಒಪ್ಪಿಕೊಳ್ಳಲು ಸಿದ್ಧವಿಲ್ಲವೇಕೆ ಎಂದೂ ಮೋದಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಆತ್ಮಾವಲೋಕನ ಮಾಡಿಕೊಂಡರೆ ಒಂದು ವಿಷಯವಂತೂ ಸ್ಪಷ್ಟವಾಗುತ್ತದೆ. ಕಳೆದ ಶತಮಾನದಲ್ಲಿ ನಿರ್ಮಿಸಲಾದ ಈ ಸಂಸ್ಥೆಯ 21ನೇ ಶತಮಾನದ ವ್ಯವಸ್ಥೆಗೆ ಪೂರಕವಾಗಿಲ್ಲ. ವಿಶ್ವಸಂಸ್ಥೆಯು ಪ್ರಸ್ತುತ ವಾಸ್ತವಗಳನ್ನು ಪ್ರತಿಬಿಂಬಿಸುತ್ತಿಲ್ಲ. ಹೀಗಾಗಿ, ಇದರಲ್ಲಿ ಸುಧಾರಣೆ ತರಬೇಕಾದ ಅಗತ್ಯವಿದೆ ಎಂದು ಮೋದಿ ಪ್ರತಿಪಾದಿಸಿದ್ದಾರೆ.

ಒಗ್ಗಟ್ಟಾಗಿ ಧ್ವನಿಯೆತ್ತಿ:
ಇದೇ ವೇಳೆ, ದೇಶ-ದೇಶಗಳ ನಡುವಿನ ಯಾವುದೇ ವಿವಾದ, ಸಂಘರ್ಷಗಳಿಗೆ ಮಾತುಕತೆಯೊಂದೇ ಪರಿಹಾರ. ಮಾತುಕತೆಯ ಮೂಲಕ ಶಾಂತಿಯುತವಾಗಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಆದರೆ, ಯಥಾಸ್ಥಿತಿಯನ್ನು ಬದಲಿಸಲು ಯಾವುದೇ ಪ್ರಯತ್ನ ನಡೆದರೂ, ಅದರ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಧ್ವನಿಯೆತ್ತಬೇಕು ಎಂದೂ ಮೋದಿ ಕರೆ ನೀಡಿದ್ದಾರೆ.

ಉಕ್ರೇನ್‌ ಮೇಲಿನ ರಷ್ಯಾದ ಆಕ್ರಮಣ, ಚೀನಾದ ವಿಸ್ತರಣಾವಾದದ ಹಿನ್ನೆಲೆಯಲ್ಲಿ ಮೋದಿ ಅವರ ಈ ಮಾತುಗಳು ಮಹತ್ವ ಪಡೆದಿವೆ. ಉಕ್ರೇನ್‌ ಹಾಗೂ ರಷ್ಯಾ ಯುದ್ಧದ ಕುರಿತು ಪ್ರಸ್ತಾಪಿಸಿದ ಮೋದಿ, “ಉಕ್ರೇನ್‌ನಲ್ಲಿನ ಇಂದಿನ ಸ್ಥಿತಿಯನ್ನು ನಾವು ಮಾನವತೆಗೆ, ಮಾನವೀಯ ಮೌಲ್ಯಕ್ಕೆ ಸಂಬಂಧಿಸಿದ ವಿಚಾರವಾಗಿ ನೋಡಬೇಕೇ ಹೊರತು ರಾಜಕೀಯ ಅಥವಾ ಆರ್ಥಿಕತೆಯ ವಿಚಾರವಾಗಿ ನೋಡಬಾರದು. ಎಲ್ಲ ದೇಶಗಳೂ ಅಂತಾರಾಷ್ಟ್ರೀಯ ಕಾನೂನು, ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬೇಕು’ ಎಂದಿದ್ದಾರೆ.

ಜಂಟಿ ಹೇಳಿಕೆಗೆ ಚೀನಾ ಅಸಹನೆ:
ಹಿರೋಶಿಮಾದಲ್ಲಿ ಜಿ7 ರಾಷ್ಟ್ರಗಳ ಜಂಟಿ ಹೇಳಿಕೆಯ ವಿರುದ್ಧ ಚೀನಾ ರಾಜತಾಂತ್ರಿಕ ಪ್ರತಿಭಟನೆಯನ್ನು ವ್ಯಕ್ತಪಡಿಸಿದೆ. ತೈವಾನ್‌, ಪೂರ್ವ ಮತ್ತು ದಕ್ಷಿಣ ಚೀನಾ ಸಮುದ್ರದಲ್ಲಿ ಚೀನಾದ ವಿಸ್ತರಣಾವಾದದ ವಿರುದ್ಧ ಜಿ7 ರಾಷ್ಟ್ರಗಳು ಜಂಟಿ ಹೇಳಿಕೆ ಬಿಡುಗಡೆ ಮಾಡುತ್ತಿದ್ದಂತೆ, ಚೀನಾ ಕೆರಳಿ ಕೆಂಡವಾಗಿದೆ. ನಮ್ಮ ಆಂತರಿಕ ವಿಚಾರದಲ್ಲಿ ಯಾರೂ ಮೂಗು ತೂರಿಸಬಾರದು ಎಂದು ಎಚ್ಚರಿಕೆಯನ್ನೂ ನೀಡಿದೆ.

ಸುನಕ್‌-ಮೋದಿ ಮಾತುಕತೆ:
ಯುಕೆ ಪ್ರಧಾನಿ ರಿಷಿ ಸುನಕ್‌ ಮತ್ತು ಪ್ರಧಾನಿ ಮೋದಿ ನಡುವೆ ದ್ವಿಪಕ್ಷೀಯ ಮಾತುಕತೆ ನಡೆದಿದ್ದು, ಉಭಯ ದೇಶಗಳ ನಡುವಿನ ಮುಕ್ತ ವ್ಯಾಪಾರ ಒಪ್ಪಂದದ ಪ್ರಗತಿ ಪರಿಶೀಲನೆಯನ್ನೂ ನಡೆಸಿದ್ದಾರೆ.

ಮೋದಿ ಕಾಲು ಮುಟ್ಟಿ ನಮಸ್ಕರಿಸಿದ ಪಪುವಾ ನ್ಯೂಗಿನಿ ಪ್ರಧಾನಿ!
ಜಪಾನ್‌ ಪ್ರವಾಸ ಮುಗಿಸಿದ ಪ್ರಧಾನಿ ಮೋದಿಯವರು ಭಾನುವಾರ ಸಂಜೆ ಪಪುವಾ ನ್ಯೂಗಿನಿಗೆ ತಲುಪಿದ್ದಾರೆ. ವಿಶೇಷವೆಂದರೆ, ವಿಮಾನ ನಿಲ್ದಾಣದಲ್ಲಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ ಪಪುವಾ ನ್ಯೂಗಿನಿ ಪ್ರಧಾನಿ ಜೇಮ್ಸ್‌ ಮರಾಪೆ ಅವರು ಮೋದಿಯವರ ಕಾಲು ಮುಟ್ಟಿ ನಮಸ್ಕರಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಪ್ರಧಾನಿ ಮೋದಿಯವರು ಈ ಪುಟ್ಟ ದೇಶಕ್ಕೆ ಭೇಟಿ ನೀಡುತ್ತಿರುವ ಭಾರತದ ಮೊದಲ ಪ್ರಧಾನಿಯಾಗಿದ್ದಾರೆ.

ಮೋದಿ ಆಟೋಗ್ರಾಫ್ ಕೇಳಿದ ಬೈಡೆನ್‌!
ಶನಿವಾರ ಕ್ವಾಡ್‌ ಶೃಂಗದ ವೇಳೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರು ಪ್ರಧಾನಿ ಮೋದಿಯವರತ್ತ ದೌಡಾಯಿಸಿ ಬಂದು ಆಲಿಂಗಿಸಿಕೊಂಡ ವಿಡಿಯೋ ಎಲ್ಲೆಡೆ ಹರಿದಾಡಿತ್ತು. ಆದರೆ, ಅಲ್ಲಿ ಉಭಯ ನಾಯಕರ ನಡುವೆ ನಡೆದಿದ್ದ ಲಘು, ಹಾಸ್ಯಭರಿತ ಮಾತುಕತೆಯ ವಿವರ ಈಗ ಹೊರಬಿದ್ದಿದೆ. ಮುಂದಿನ ತಿಂಗಳು ಮೋದಿ ಅಮೆರಿಕ ಪ್ರವಾಸ ಮಾಡಲಿದ್ದು, ಈಗಾಗಲೇ ಅವರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಈ ಕುರಿತು ಪ್ರಸ್ತಾಪಿಸಿದ ಬೈಡೆನ್‌, “ನಿಮ್ಮ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ಕೊಡಿ ಎಂದು ಸಾವಿರಾರು ಮಂದಿ ಕೇಳಿಕೊಳ್ಳುತ್ತಿದ್ದಾರೆ. ಅವರನ್ನೆಲ್ಲ ನಿಭಾಯಿಸುವುದೇ ನನಗೆ ದೊಡ್ಡ ಸವಾಲಾಗಿದೆ. ಅಷ್ಟೊಂದು ಜನರನ್ನು ನೀವಾದರೂ ಹೇಗೆ ನಿಭಾಯಿಸುತ್ತೀರಿ’ ಎಂದು ಪ್ರಶ್ನಿಸುತ್ತಾರೆ. ಆಗ ಅಲ್ಲೇ ಇದ್ದ ಆಸ್ಟ್ರೇಲಿಯಾ ಪ್ರಧಾನಿ ಆಲ್ಬನೀಸ್‌, “ಮಾರ್ಚ್‌ನಲ್ಲಿ ಭಾರತ-ಆಸ್ಟ್ರೇಲಿಯಾ ಟೆಸ್ಟ್‌ ಪಂದ್ಯ ವೀಕ್ಷಣೆಗೆಂದು ಗುಜರಾತ್‌ನ ನರೇಂದ್ರ ಮೋದಿ ಸ್ಟೇಡಿಯಂಗೆ ತೆರಳಿದ್ದಾಗ 90 ಸಾವಿರಕ್ಕೂ ಅಧಿಕ ಮಂದಿ ಮೋದಿಯವರನ್ನು ಸ್ವಾಗತಿಸಿದ್ದರು’ ಎಂದು ಹೇಳುತ್ತಾರೆ. ಇದನ್ನು ಕೇಳಿದ ಬೈಡೆನ್‌, “ಅಬ್ಟಾ, ಹಾಗಿದ್ದರೆ ನನಗೂ ನಿಮ್ಮದೊಂದು ಆಟೋಗ್ರಾಫ್ ಬೇಕಿತ್ತು’ ಎನ್ನುತ್ತಾರೆ. ಆಗ ಮೋದಿ ಮತ್ತು ಆಲ್ಬನೀಸ್‌ ಇಬ್ಬರೂ ಗೊಳ್ಳನೆ ನಗುತ್ತಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.