![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 5, 2022, 12:33 PM IST
ಬೆಂಗಳೂರು : ರಾಜ್ಯ ಸರ್ಕಾರ ವಿವಾದಗಳನ್ನು ಸೃಷ್ಟಿ ಮಾಡುವಲ್ಲಿ ಮುಂಚೂಣಿಯಲ್ಲಿದ್ದು, ಯಾವುದೇ ವಿವಾದದಲ್ಲಿ ಯಶಸ್ಸು ಸಿಗುತ್ತಿಲ್ಲ, ಹಾಗಾಗಿ ಈಗ ಹಿಜಾಬ್ ವಿವಾದ ಶುರು ಆಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ ಎಂ ಇಬ್ರಾಹಿಂ ಹೇಳಿಕೆ ನೀಡಿದ್ದಾರೆ.
ಹಿಜಾಬ್ ಬಹಳ ವರ್ಷದಿಂದ ನಡೆದುಕೊಂಡು ಬಂದಿದೆ. ಮೈಸೂರು ಮಹಾರಾಜ ಕಾಲದಿಂದಲೂ ಜಾರಿಯಲ್ಲಿದೆ.ಹೆಣ್ಣುಮಕ್ಕಳು ತೆರಳುವ ಚಕ್ಕಡಿ ಗಾಡಿಗೂ ಪರದೆ ಹಾಕಿರುವ ಇತಿಹಾಸ ಇದೆ. ಇದು ಕೋವಿಡ್ ಸಮಯದಲ್ಲಿ ಹಾಕಿಕೊಳ್ಳುವಂತೆ ಆಗಿದ್ದು, ನಾನು ಹಾಕೊಂಡಿದ್ದೇನೆ,
ಸಿಎಂ ಬೊಮ್ಮಾಯಿ ಕೂಡ ಹಿಜಾಬ್ ಹಾಕಿಕೊಂಡಿದ್ದಾರೆ. ಆ ಪ್ರಿನ್ಸಿಪಲ್ ಪಾಠ ಮಾಡುವವನು, ಅವರಿಗೆ ಬುದ್ದಿ ಇದೆಯಾ ಎಂದು ಪ್ರಶ್ನಿಸಿದರು.
ಈ ಹಿಂದೆ ಪೋಲಿಸರಿಗೂ ಸಮವಸ್ತ್ರ ಹಾಕಿಸಿ ಬಿಟ್ಟರು, ಎಲ್ಲಿಗೆ ತೆಗೆದುಕೊಂಡು ಹೋಗುತ್ತಾ ಇದ್ದೀರಿ, ಅಧಿಕಾರಿಗಳಿಗೆ ಹೇಳುತ್ತಾ ಇದ್ದೇನೆ,
ಹುಷಾರ್,ಬಿಜೆಪಿ ಇದೇ ಕೊನೆ ಬಾರಿ ಗಾಳಿ ಬದಲಾಗುತ್ತಾ ಇದೆ. ಅವರ ಮುಖ ನೋಡೋಕೆ ನೀವೇಕೆ ಕಾಲೇಜ್ ಗೆ ಹೋಗೋದು ವಿದ್ಯೆ ಕಲಿಯೋಕೋ ಬ್ಯೂಟಿ ನೋಡೋಕೋ ಎಂದು ಪ್ರಶ್ನಿಸಿದರು.
ಅನೇಕರು ಹಿಜಾಬ್ ಹಾಕೊಲ್ಲ, ಅವರಿಗೆ ನಾವು ಒತ್ತಡ ಹಾಕಿದ್ದೇವಾ? ಹೀಗಾಗಿ ನಾನು ಸರ್ಕಾರ ಶೀಘ್ರವಾಗಿ ನಿರ್ಧಾರ ಮಾಡಬೇಕು. ಇದನ್ನ ಕೂಡಲೇ ಕಮಿಷನರ್ ಹೈಕೋರ್ಟ್ ಆದೇಶ ಬರುವವರೆಗೂ ಸೂಕ್ತ ಕ್ರಮ ಕೈಗೊಳ್ಳ ಬೇಕು. ದೇಶದ ಮರ್ಯಾದೇ ಎಲ್ಲಿಗೆ ಹೋಗುತ್ತಾ ಇದೆ ಎಂದರು.
ಉತ್ತರಕರ್ನಾಟಕದಲ್ಲಿ ಹೆಂಗಸರು ತಲೆ ಮೇಲೆ ಸೆರಗು ಹಾಕ್ತಾರೆ.ಮಾರ್ವಾಡಿಗಳ ಹೆಣ್ಮಕ್ಕಳು ಸೆರಗು ಹಾಕ್ತಾರೆ. ಕೋರ್ಟ್ ಕೇಸ್ ತೀರ್ಪು ಬರುವವರೆಗೆ ಯಥಾಸ್ಥಿತಿ ಕಾಪಾಡಬೇಕಿತ್ತು ಆದರೆ ಸರ್ಕಾರ ಹಾಗೆ ಮಾಡಿಲ್ಲ. ಸರ್ಕಾರ ಹಿಜಾಬ್ ವಿವಾದ ಆಗಲು ಬಿಡಬಾರದು ಎಂದರು.
ಶಿಕ್ಷಣ ಸಚಿವರು ಮತ್ತು ಸಿಎಂ ಅವರಿಗೆ ಮನವಿ ಮಾಡ್ತೇನೆ.ಸಮಸ್ಯೆ ಬಗೆಹರಿಸಬೇಕು. ಕೋರ್ಟ್ ಆದೇಶ ಬರುವ ತನಕ ಯಥಾಸ್ಥಿತಿ ಕಾಪಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.