![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 13, 2021, 4:06 PM IST
ಬೆಂಗಳೂರು : 2.84 ಕೋಟಿ ರೂಪಾಯಿ ಅವ್ಯವಾಹಾರದ ಆರೋಪದಲ್ಲಿ ಮಾಜಿ ಸಚಿವ, ಬಿಜೆಪಿ ನಾಯಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.
ಇಂಡ್ ಸಿಂಡ್ ಕಂಪನಿಯೊಂದಿಗೆ ನಿವೇಶನ ಖರೀದಿ ವಿಚಾರಕ್ಕೆ ಸಂಬಂಧಿಸಿ ಕೃಷ್ಣ ಎಂಬುವವರು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ವಿರುದ್ಧ ದೂರು ನೀಡಿದ್ದರು. 4 ನೇ ಎಪಿಎಂಸಿ ನ್ಯಾಯಾಲಯ ದೂರು ದಾಖಲಿಸಿ, ತನಿಖೆ ಕೈ ಕೊಳ್ಳುವಂತೆ ಸೂಚಿಸಿತ್ತು.
ಕಟ್ಟಾ ಪ್ರತಿಕ್ರಿಯೆ
ಮಾಧ್ಯಮಗಳಲ್ಲಿ ನನ್ನ ವಿರುದ್ಧ ಪ್ರಸಾರವಾಗಿರುವ ಸುದ್ಧಿ ಸತ್ಯಕ್ಕೆ ದೂರವಾದದ್ದು. ರಾಜಕೀಯ ದುರುದ್ದೇಶದಿಂದ ಕೃಷ್ಣ ಎನ್ನುವವರು ನನ್ನ ವಿರುದ್ಧ ಆಧಾರ ರಹಿತ ಆರೋಪವನ್ನು ಮಾಡುತ್ತಿದ್ದಾರೆ. ರಾಜಕೀಯವಾಗಿ ನನ್ನನ್ನು ಮುಗಿಸಲು ವಿರೋಧಿಗಳ ಕುತಂತ್ರದಿಂದ ಈ ರೀತಿಯ ಸುಳ್ಳು ಆರೋಪಗಳನ್ನು ಹೊರಿಸಿ ನನ್ನ ವಿರುದ್ಧ ದೂರನ್ನು ನೀಡಲಾಗಿದೆ.
ಇಂಡ್ ಸಿಂಡ್ ಕಂಪನಿಯ ಬಗ್ಗೆ ಮಾಹಿತಿಯಿದೆ, ಆದರೆ ಕಂಪನಿಯ ಜೊತೆ ಎಂದಿಗೂ ನಾನೂ ವ್ಯವಹಾರ ನಡೆಸಿಲ್ಲ. ಹೀಗಿರುವಾಗ ಕಂಪನಿಗೆ ವಂಚಿಸುವ ಪ್ರಶ್ನೆಯೇ ಇಲ್ಲ. ನನಗೆ ನ್ಯಾಯಾಲಯದಲ್ಲಿ ನಂಬಿಕೆಯಿದ್ದು ರಾಜಕೀಯ ಪಿತೂರಿಯಿಂದ ನನ್ನ ವಿರುದ್ಧ ದಾಖಲಾಗಿರುವ ಎಫ್.ಐ.ಆರ್ ನ್ನು ಪ್ರಶ್ನಿಸುವ ಮೂಲಕ ನ್ಯಾಯಲಯದಲ್ಲಿ ಕಾನೂನು ಹೋರಾಟ ನಡೆಸುತ್ತೇನೆ ಎಂದು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸಾಮಾಜಿಕ ತಾಣದಲ್ಲಿ ಬರೆದುಕೊಂಡಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.