ಚನ್ನಪಟ್ಟಣ ಗೊಂಬೆಗೆ ವಿಶ್ವ ಮಾನ್ಯತೆ : ಆನ್‌ಲೈನ್‌ ಮೂಲಕ ವಿಶ್ವಕ್ಕೆ ಪರಿಚಯ


Team Udayavani, Feb 28, 2021, 6:50 AM IST

ಚನ್ನಪಟ್ಟಣ ಗೊಂಬೆಗೆ ವಿಶ್ವ ಮಾನ್ಯತೆ : ಆನ್‌ಲೈನ್‌ ಮೂಲಕ ವಿಶ್ವಕ್ಕೆ ಪರಿಚಯ

ಚನ್ನಪಟ್ಟಣ: ಪಾರಂಪರಿಕ ಗೊಂಬೆ ಉದ್ಯಮದಲ್ಲಿ ಹೊಸ ಆಲೋಚನೆ, ಹೊಸತನವನ್ನು ಅಳವಡಿಸಿಕೊಂಡು ವಿಶ್ವದ ಮಕ್ಕಳನ್ನು ಸೆಳೆಯುವ ಗೊಂಬೆಗಳನ್ನು ಆವಿಷ್ಕರಿಸುವಂತೆ ಪ್ರಧಾನಿ ಮೋದಿ ಗೊಂಬೆ ತಯಾರಕರಿಗೆ ಸಲಹೆ ನೀಡಿದ್ದಾರೆ.
ಆತ್ಮನಿರ್ಭರ ಭಾರತ ಯೋಜನೆಯಡಿ ಶನಿವಾರ ಆರಂಭವಾದ “ದಿ ಇಂಡಿಯಾ ಟಾಯ್ಸ್ ಫೇರ್‌ 2021′ ವರ್ಚುವಲ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮೋದಿ, ಚನ್ನಪಟ್ಟಣವೂ ಸೇರಿದಂತೆ ದೇಶದ ಗೊಂಬೆ ತಯಾರಕರಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ.

ಚನ್ನಪಟ್ಟಣದ ಗೊಂಬೆಗಳನ್ನು ಕೇವಲ ಆ ಕ್ಷೇತ್ರ, ರಾಜ್ಯ, ರಾಷ್ಟ್ರಕ್ಕೆ ಸೀಮಿತಗೊಳಿಸದೆ ವಿಶ್ವಕ್ಕೆ ಪರಿಚಯಿಸುವ ಕೆಲಸವನ್ನು ಸರಕಾರ ಮಾಡಲಿದೆ ಎಂದು ಭರವಸೆ ನೀಡಿರುವ ಮೋದಿ, ಈ ನಿಟ್ಟಿನಲ್ಲಿ ಬೆಂಗಳೂರಿನ ಐಟಿ ಉದ್ಯಮಿಗಳು ಮತ್ತು ಸ್ಟಾರ್ಟ್‌ ಅಪ್‌ಗ್ಳ ಜತೆ ಕರಕುಶಲಕರ್ಮಿಗಳಿಗೆ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲು ರಾಜ್ಯ ಸರಕಾರದ ಜತೆ ಚರ್ಚಿಸಿ ಮುನ್ನಡೆಯುತ್ತೇವೆ. ಕೇಂದ್ರ ಸರಕಾರ ಈ ವಿಚಾರದಲ್ಲಿ ಖುದ್ದು ನಿಗಾ ವಹಿಸಲಿದೆ ಎಂದಿದ್ದಾರೆ.

ಸ್ಪರ್ಧೆ ಆಯೋಜಿಸಿ
ಚನ್ನಪಟ್ಟಣದಲ್ಲಿ ಗೊಂಬೆ ಉದ್ಯಮದಲ್ಲಿ ತೊಡಗಿರುವ 2 ಸಾವಿರ ಮಂದಿಗೆ ಒಂದು ಸ್ಪರ್ಧೆ ಆಯೋಜಿಸಬೇಕು. ಯಾರು ಹೊಸ ವಿಧಾನದಲ್ಲಿ ಗೊಂಬೆ ಉತ್ಪಾದನೆ ಮಾಡುತ್ತಾರೆಯೋ ಅವರಿಗೆ ಬಹುಮಾನ ನೀಡುವ ಮೂಲಕ ಹೊಸ ಪ್ರಯತ್ನಗಳು ಮಾರುಕಟ್ಟೆಗೆ ಬರುವಂತೆ ಮಾಡಿ ಎಂದು ಮೋದಿ ಸಲಹೆ ನೀಡಿದರು.

ಹೊಸ ಗೊಂಬೆಗಳ ಆವಿಷ್ಕಾರ
ಗೊಂಬೆ ಉದ್ಯಮವನ್ನು ಇ-ಮಾರುಕಟ್ಟೆ ಮುಖಾಂತರ ವಿಶ್ವಕ್ಕೆ ತಲುಪಿಸಬೇಕೆನ್ನುವ ಆಲೋಚನೆಯನ್ನು ಮಾಡಿದ್ದೀರಾ ಎಂದು ಪ್ರಧಾನಿ ಪ್ರಶ್ನಿಸಿದರು. ಹೊಸ ಮಾದರಿಯ ಗೊಂಬೆಗಳ ಆವಿಷ್ಕಾರ ಆಗಬೇಕಿದೆ ಎಂದು ಹುರಿದುಂಬಿಸಿದರು.

ಹೊಸ ಆವಿಷ್ಕಾರ ಮಾಡುತ್ತೇವೆ
ಚನ್ನಪಟ್ಟಣದ ಗೊಂಬೆಗಳ ಬಗ್ಗೆ ಪ್ರಧಾನಿಗೆ ವಿವರ ನೀಡಿದ ಪ್ರತಿನಿಧಿ ಕೌಸರ್‌ ಪಾಷಾ, ಚನ್ನಪಟ್ಟಣದಲ್ಲಿ ಸುಮಾರು 2 ಸಾವಿರ ಕರಕುಶಲ ಕರ್ಮಿಗಳು 200 ವರ್ಷಗಳಿಂದ ಗೊಂಬೆ ತಯಾರಿಯಲ್ಲಿ ತೊಡಗಿದ್ದಾರೆ. ಈ ಬೊಂಬೆಗಳು ರಾಸಾಯನಿಕಗಳನ್ನು ಬಳಸದೆ ತಯಾರಾಗುತ್ತವೆ. ಶೇ. 80ರಷ್ಟು ಮಂದಿ ಪುರುಷರು, ಶೇ. 20ರಷ್ಟು ಮಹಿಳೆಯರು ಈ ಉದ್ಯಮದಲ್ಲಿದ್ದಾರೆ. ಈಗ ಕೇಂದ್ರ ಸರಕಾರ ನಮ್ಮ ಬೆಂಬಲಕ್ಕೆ ನಿಂತಿರುವುದು ಹೊಸ ಭರವಸೆ ಮೂಡಿಸಿದೆ ಎಂದರು.

ಟಾಪ್ ನ್ಯೂಸ್

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.