Pakistanಕ್ಕೆ ದೊಡ್ಡ ಮೊತ್ತದ ಆರ್ಥಿಕ ನೆರವು …ರಾಜನಾಥ್ ಸಿಂಗ್ ಭರ್ಜರಿ ಆಫರ್, ಆದರೆ…
ವಿಶೇಷ ಪ್ಯಾಕೇಜ್ ಮೊತ್ತ ಈಗ 90,000 ಕೋಟಿ ರೂಪಾಯಿಗೆ ತಲುಪಿದೆ...
Team Udayavani, Sep 30, 2024, 1:31 PM IST
ಜಮ್ಮು-ಕಾಶ್ಮೀರ: ಭಾರತದೊಂದಿಗೆ ನೆರೆಯ ದೇಶ ಸೌಹಾರ್ದ ಸಂಬಂಧವನ್ನು ಉಳಿಸಿಕೊಂಡಿದ್ದರೆ, ಪಾಕಿಸ್ತಾನ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ(IAF)ಯಲ್ಲಿ ಮನವಿ ಮಾಡಿದ್ದಕ್ಕಿಂತ ಅಧಿಕ Bailout ಹಣಕಾಸಿನ ನೆರವನ್ನು ಭಾರತ ನೀಡುತ್ತಿತ್ತು ಎಂದು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಮಹತ್ವದ ಆಫರ್ ನೀಡುವ ಹೇಳಿಕೆ ನೀಡಿದ್ದಾರೆ.
ಜಮ್ಮು-ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗ್ಯುರೇಝ್ ಕ್ಷೇತ್ರದಲ್ಲಿ ಚುನಾವಣಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ವೇಳೆ ರಾಜನಾಥ್ ಸಿಂಗ್ ಈ ಹೇಳಿಕೆ ನೀಡಿದ್ದಾರೆ.
ಪಾಕ್ ಗೆ ದೊಡ್ಡ ಆಫರ್:
2014-2015ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು-ಕಾಶ್ಮೀರದ ಅಭಿವೃದ್ಧಿಗಾಗಿ ಘೋಷಿಸಿದ್ದ ವಿಶೇಷ ಪ್ಯಾಕೇಜ್ ಮೊತ್ತ ಈಗ 90,000 ಕೋಟಿ ರೂಪಾಯಿಗೆ ತಲುಪಿದೆ. ಇದು ಪಾಕಿಸ್ತಾನ ಅಂತಾರಾಷ್ಟ್ರೀಯ ಹಣಕಾಸು ನಿಧಿ(IAF) ಬಳಿ ಕೇಳಿರುವುದಕ್ಕಿಂತ ದೊಡ್ಡ ಮೊತ್ತವಾಗಿದೆ ಎಂದು ಸಿಂಗ್ ಹೇಳಿದರು.
ಭಾಷಣದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನಪ್ರಿಯ ಹೇಳಿಕೆಯನ್ನು ಪ್ರಸ್ತಾಪಿಸಿದ ಸಿಂಗ್, ನಾವು ಗೆಳೆಯರನ್ನು ಬದಲಾಯಿಸಬಹುದು, ಆದರೆ ನಮ್ಮ ನೆರೆಹೊರೆಯವರನ್ನು ಬದಲಾಯಿಸಲು ಸಾಧ್ಯವಿಲ್ಲ. ಆ ನಿಟ್ಟಿನಲ್ಲಿ ನಾನು ನನ್ನ ಪಾಕಿಸ್ತಾನಿ ಗೆಳೆಯರಿಗೆ ಹೇಳುತ್ತಿರುವುದೇನೆಂದರೆ ನಮ್ಮ ಸಂಬಂಧ ಯಾಕೆ ಹದಗೆಡುತ್ತಿದೆ? ನಾವು ನೆರೆಹೊರೆಯವರು, ಒಂದು ವೇಳೆ ನಮ್ಮ ಸಂಬಂಧ ಉತ್ತಮವಾಗಿದ್ದಿದ್ದರೆ, ನಾವು ಪಾಕಿಸ್ತಾನಕ್ಕೆ ಐಎಂಎಫ್ ಕೊಟ್ಟಿರುವುದಕ್ಕಿಂತ ಅಧಿಕ ಹಣಕಾಸಿನ ನೆರವು ನೀಡುತ್ತಿದ್ದೇವು ಎಂದು ಹೇಳಿದರು.
ಹಣಕಾಸು ನೆರವನ್ನು ಪಾಕ್ ಭಯೋತ್ಪಾದನೆಗೆ ಬಳಸುತ್ತಿದೆ:
ಭಾರತದ ಸರ್ಕಾರ ಜಮ್ಮು-ಕಾಶ್ಮೀರದ ಅಭಿವೃದ್ಧಿಗಾಗಿ ಹಣಕಾಸು ನೆರವು ನೀಡುತ್ತಿದೆ. ಆದರೆ ಪಾಕಿಸ್ತಾನ ಹಣಕಾಸು ನೆರವನ್ನು ತನ್ನ ದೇಶದಲ್ಲಿ ಭಯೋತ್ಪಾದಕರ ಕಾರ್ಖಾನೆ ನಡೆಸಲು ಬಳಸುತ್ತಿದೆ ಎಂದು ರಾಜನಾಥ್ ಸಿಂಗ್ ಆರೋಪಿಸಿದರು. ಪಾಕಿಸ್ತಾನ ಭಯೋತ್ಪಾದನೆಯನ್ನು ಭಾರತದ ವಿರುದ್ಧ ಒಂದು ಅಸ್ತ್ರವನ್ನಾಗಿ ಬಳಸುತ್ತಿದೆ. ನಾವು ಭಯೋತ್ಪಾದಕ ಕೃತ್ಯಗಳ ಕುರಿತು ತನಿಖೆ ನಡೆಸಿದಾಗಲೆಲ್ಲಾ ಅದರಲ್ಲಿ ಪಾಕಿಸ್ತಾನ ಶಾಮೀಲಾಗಿರುವುದು ಸಾಬೀತಾಗಿರುವುದಾಗಿ ರಾಜನಾಥ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ
Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್ ಖೇರ್ ಫೋಟೊ!
Amit Shah: ಖರ್ಗೆ ಹೇಳಿಕೆಯು ಕಾಂಗ್ರೆಸ್ ನ ಮೋದಿ ದ್ವೇಷ ತೋರಿಸುತ್ತದೆ..: ಸಚಿವ ಅಮಿತ್ ಶಾ
Haryana;ಭಾರತ್ ಜೋಡೋ ಮಾದರಿ ಪ್ರಚಾರ ಇಂದು ಶುರು?
Rajnath Singh; ಸ್ನೇಹ ಇದ್ದಿದ್ದರೆ ಪಾಕ್ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sleep Champion; ನಿದ್ದೆ ಮಾಡಿ 9 ಲಕ್ಷ ರೂ ಗೆದ್ದ ಬೆಂಗಳೂರಿನ ಯುವತಿ
Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ
Toxic Movie: ಯಶ್ ʼಟಾಕ್ಸಿಕ್ʼ ಅಖಾಡಕ್ಕೆ ಖಡಕ್ ಬ್ರಿಟೀಷ್ ನಟ ಎಂಟ್ರಿ
Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ
Udupi: ತಾಲೂಕು ಕಚೇರಿಗಳಲ್ಲಿ 112 ಹುದ್ದೆ ಖಾಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.