![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 12, 2021, 2:09 PM IST
ವಿಜಯಪುರ : ವರದಿ ನೀಡಲು ಗಡುವು ನೀಡದೇ ಪಂಚಮಸಾಲಿ ಸೇರಿದಂತೆ ಇತರೆ ಸಮುದಾಯಗಳ ಮೀಸಲು ನೀಡುವ ವಿಷಯವಾಗಿ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿ ರಚಿಸಿರುವುದು ಕಣ್ಣೊರೆಸುವ ತಂತ್ರ. ಇದಕ್ಕೆ ನಮ್ಮ ಸಹಮತವಿಲ್ಲ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಸೇರಿದಂತೆ ವಿವಿಧ ಸಮುದಾಯಕ್ಕೆ ಮೀಸಲಾತಿ ಅಧ್ಯಯನಕ್ಕೆ ಸರ್ಕಾರ ನಿವೃತ್ತ ನ್ಯಾಯಾಧೀಶರ ಸಮಿತಿ ರಚಿಸಿದ್ದು, ಕಾಲಮಿತಿ ನೀಡಬೇಕು. ಕಾಲಮಿತಿ ಇಲ್ಲದ ಸಮಿತಿ ಕಾಟಾಚಾರದ, ಟಿ.ಎ-ಡಿ.ಎ. ನೀಡಲು ಮಾತ್ರ ಸಮಿತಿ ಸೀಮಿತವಾದ ನೇಮಕ ಎನ್ನುವಂತಾಗುತ್ತದೆ.
ಗಡುವು ನೀಡದೇ ಸಮಿತಿ ರಚಿಸಿರುವುದು ಕೇವಲ ರಾಜಕೀಯ ಸ್ಟಂಟ್. ಬ್ರಾಹ್ಮಣರಿಗೆ ಕೇಂದ್ರ ಸರ್ಕಾರ ಶೇ10 ರಷ್ಟು ಮೀಸಲಾತಿ ಘೋಷಣೆ ಮಾಡಿದೆ. ಕರ್ನಾಟಕದಲ್ಲಿ ಅದು ಜಾರಿಯಾಗಿಲ್ಲ ಎಂದು ಹರಿಹಾಯ್ದರು. ಸಿಎಂ ಅವರ ಅಧಿಕಾರ ವ್ಯಾಪ್ತಿಯಲ್ಲಿ ಬರುವ ಜಾತಿಗಳಿಗೆ ಮೀಸಲಾತಿ ನೀಡಬೇಕು. ಎಸ್ಸಿ-ಎಸ್ಟಿ ಸಮುದಾಯಗಳ ಮೀಸಲ ಪ್ರಮಾಣ ಹೆಚ್ಚಳ ಕುರಿತು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಬೇಕು. ಈ ವಿಚಾರವಾಗಿ ಸ್ಪಷ್ಟನೆ ನೀಡುವುದಾಗಿ ಸಿ.ಎಂ. ಹೇಳಿದ್ದರು.
ಆದರೆ ಸದನದಲ್ಲಿ ಸಿ.ಎಂ. ಬದಲಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದರು. ಈ ಕುರಿತು ಸೋಮವಾರ ಸದನದಲ್ಲಿ ಸಿಎಂ ಎದುರೇ ಮತ್ತೆ ಪ್ರಸ್ತಾಪ ಮಾಡುತ್ತೇನೆ. ಮೀಸಲಾತಿ ನೀಡಲು ಎಷ್ಟು ಸಮಯ ಬೇಕು ಎಂದು ಸಿಎಂ ಯಡಿಯೂರಪ್ಪ ಹೇಳಲಿ. ಒಂದು ವರ್ಷದಲ್ಲಿ ಆಗುತ್ತೋ ಎರಡು ವರ್ಷದ ಆಗತ್ತೋ ಅಥವಾ ಒಂದು ಶತಮಾನ ಬೇಕಾಗಬಹುದು ಎಂಬುದನ್ನು ಸ್ಪಷ್ಟಪಡಿಸಲಿ ಎಂದ ಯತ್ನಾಳ ವ್ಯಂಗ್ಯವಾಡಿದರು.
ಸರ್ಕಾರದ ಸ್ಪಷ್ಟ ನಿರ್ಧಾರ ಬಹಿರಂಗವಾಗಲಿ. ಈ ವಿಚಾರವಾಗಿ ಸಿಎಂ ಅವರು ಸ್ಪಷ್ಟ ಉತ್ತರ ನೀಡದಿದ್ದರೆ ಸೋಮವಾರ ಅಧಿವೇಶನದಲ್ಲಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.