ಉತ್ತರಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 12 ರೂ. ಇಳಿಕೆ: ಯೋಗಿ
ರಾಜ್ಯ ಸರ್ಕಾರಗಳು ಕೂಡಾ ವ್ಯಾಟ್ ಕಡಿತಗೊಳಿಸುವಂತೆ ಮನವಿ ಮಾಡಿತ್ತು.
Team Udayavani, Nov 4, 2021, 1:31 PM IST
ಲಕ್ನೋ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಬೆನ್ನಲ್ಲೇ ಉತ್ತರಪ್ರದೇಶ ಸರ್ಕಾರ ಕೂಡಾ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿತಗೊಳಿಸುವ ಮೂಲಕ ಪ್ರತಿ ಲೀಟರ್ ಗೆ 12 ರೂಪಾಯಿ ಇಳಿಕೆಯಾದಂತಾಗಿದೆ ವರದಿ ತಿಳಿಸಿದೆ.
ಇದನ್ನೂ ಓದಿ:ಮೆಲ್ಬೋರ್ನ್ ರೆನಿಗೇಡ್ಸ್ ಸೇರಿದ ಚಾಂದ್: ಬಿಬಿಎಲ್ ಆಡುತ್ತಿರುವ ಮೊದಲ ಭಾರತೀಯ ಆಟಗಾರ
ಕೇಂದ್ರ ಸರ್ಕಾರದ ಮನವಿಯಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಕಡಿತಗೊಳಿಸಿರುವುದಾಗಿ ಮುಖ್ಯಮಂತ್ರಿ ಕಚೇರಿ ಗುರುವಾರ(ನವೆಂಬರ್ 04) ತಿಳಿಸಿದೆ. ಉತ್ತರಪ್ರದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್ ಬೆಲೆಯನ್ನು 12 ರೂಪಾಯಿಯಷ್ಟು ಕಡಿತಗೊಳಿಸಲಾಗಿದೆ ಎಂದು ವಿವರಿಸಿದೆ.
ಸತತವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿರುವ ನಡುವೆ ಕೇಂದ್ರ ಸರ್ಕಾರ ಬುಧವಾರ ದೀಪಾವಳಿ ಕೊಡುಗೆಯಾಗಿ ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು, ಪೆಟ್ರೋಲ್ ಬೆಲೆ ಲೀಟರ್ ಗೆ 5 ರೂಪಾಯಿ ಹಾಗೂ ಡೀಸೆಲ್ ಮೇಲೆ 10 ರೂ. ಅಬಕಾರಿ ಸುಂಕ ಕಡಿತಗೊಳಿಸಿ, ರಾಜ್ಯ ಸರ್ಕಾರಗಳು ಕೂಡಾ ವ್ಯಾಟ್ ಕಡಿತಗೊಳಿಸುವಂತೆ ಮನವಿ ಮಾಡಿತ್ತು.
ಉತ್ತರಪ್ರದೇಶ ಸರ್ಕಾರ ಪೆಟ್ರೋಲ್ ಲೀಟರ್ ಗೆ 7 ರೂಪಾಯಿ ಹಾಗೂ ಡೀಸೆಲ್ ಗೆ 2 ರೂಪಾಯಿಯಷ್ಟು ವ್ಯಾಟ್ ಕಡಿತಗೊಳಿಸುವ ನಿರ್ಧಾರ ತೆಗೆದುಕೊಂಡಿದೆ. ಇದೀಗ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವ್ಯಾಟ್ ಕಡಿತದಿಂದಾಗಿ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 12 ರೂಪಾಯಿ ಇಳಿಕೆಯಾದಂತಾಗಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನವನೀತ್ ಸೆಹಗಾಲ್ ಪಿಟಿಐಗೆ ತಿಳಿಸಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯ ನಿರ್ಧಾರಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ ರಾಜ್ಯದಲ್ಲಿಯೂ ವ್ಯಾಟ್ ಇಳಿಕೆ ಮಾಡಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
31 Naxal ಎನ್ಕೌಂಟರ್ಗೆ 1,500 ಮಂದಿ 25 ಕಿ.ಮೀ. ಟ್ರೆಕ್!
Maharashtra; ಅಹ್ಮದ್ನಗರ ಇನ್ನು ಮುಂದೆ ‘ಅಹಿಲ್ಯಾನಗರ’
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ
Hubbali: ಅಪಾರ್ಟ್ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.