ಕಾಸರಗೋಡಿನಲ್ಲೂ 25 ರೂ.ಗೆ ಊಟ

ಹಸಿವು ರಹಿತ ರಾಜ್ಯ ಯೋಜನೆ

Team Udayavani, Feb 29, 2020, 6:23 AM IST

meals

ಸಾಂದರ್ಭಿಕ ಚಿತ್ರ

ಕಾಸರಗೋಡು: ರಾಜ್ಯ ಸರಕಾರ ಮುಂಗಡಪತ್ರದಲ್ಲಿ ಘೋಷಿಸಿರುವ “ಹಸಿವು ರಹಿತ ರಾಜ್ಯ ಯೋಜನೆ’ಯ ಅಂಗವಾಗಿ ಇನ್ನು ಮುಂದೆ ಕಾಸರಗೋಡಿನಲ್ಲೂ 25 ರೂ.ಗೆ ಮಧ್ಯಾಹ್ನ ಭೋಜನ ಲಭಿಸಲಿದೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2020-21ನೇ ವರ್ಷದ ಕುಟುಂಬಶ್ರೀ ಜಿಲ್ಲಾ ಕ್ರಿಯಾ ಯೋಜನೆ ಪ್ರಸ್ತುತಿ ಸಭೆಯಲ್ಲಿ ಈ ವಿಚಾರವನ್ನು ಪ್ರಕಟಿಸಲಾಯಿತು. ಮಧ್ಯಾಹ್ನ ಭೋಜನ ಯೋಜನೆಗಾಗಿ 38 ಗ್ರಾ.ಪಂ.ಗಳು, ಮೂರು ನಗರಸಭೆಗಳು ಸೇರಿದಂತೆ 41 ಕಡೆ ಹೊಟೇಲ್‌ಗ‌ಳನ್ನು ತೆರೆಯಲಾಗುವುದು ಎಂದು ಕ್ರಿಯಾಯೋಜನೆ ಮಂಡಿಸಿದ ಕುಟುಂಬಶ್ರೀ ಜಿಲ್ಲಾ ಸಮಿತಿ ಸಂಚಾಲಕ ಟಿ.ಟಿ. ಸುರೇಂದ್ರನ್‌ ತಿಳಿಸಿದರು.

ಕುಟುಂಬಶ್ರೀ ಚಟುವಟಿಕೆಗಳಿಗೆ ಅಗತ್ಯವಿರುವ ತರಬೇತಿ ನೀಡಿ ಮಾ. 15ರ ಮುಂಚಿತವಾಗಿ ನೂತನ ಆಹಾರ ಕೇಂದ್ರಗಳನ್ನು ಆರಂಭಿಸಲಾಗುವುದು. ಈ ಮೂಲಕ ಸುಮಾರು 200 ಮಂದಿಗೆ ಉದ್ಯೋಗ ಲಭಿಸಲಿದೆ. ಯೋಜನೆಗೆ ಮೂಲ ಸೌಲಭ್ಯಗಳನ್ನು ಸ್ಥಳೀಯಡಳಿತ ಸಂಸ್ಥೆಗಳು ಒದಗಿಸಲಿವೆ ಎಂದರು.

10 ಸಾವಿರ ಉದ್ಯೋಗ ಸೃಷ್ಟಿ
ಕುಟುಂಬಶ್ರೀ ನೇತೃತ್ವದಲ್ಲಿ ಜಿಲ್ಲೆಯಲ್ಲಿ 10 ಸಾವಿರ ಉದ್ಯೋಗಗಳನ್ನು ಸೃಷ್ಟಿಸುವ ಯೋಜನೆ ಜಾರಿಗೊ ಳ್ಳಲಿದೆ. ಇದಕ್ಕಾಗಿ ಜಿಲ್ಲೆಯಾದ್ಯಂತ ಒಂದು ಸಾವಿರ ಕೃಷಿಕ ಗುಂಪುಗಳನ್ನು ರಚಿಸಲಾಗುವುದು. ತರಕಾರಿ, ಹಣ್ಣುಗಳ ಉತ್ಪಾದನೆಗೆ ಆದ್ಯತೆ ನೀಡಿ, ಉತ್ಪಾದನೆ ಸಾಮರ್ಥ್ಯ ಹೆಚ್ಚಿಸಲಾಗುವುದು ಎಂದರು.

ಕುಟುಂಬಶ್ರೀಯ ಉತ್ಪನ್ನಗಳನ್ನು ಮನೆ ಮನೆಗೆ ತಲಪಿಸುವ “ಮನೆಯಲ್ಲೊಂದು ಕುಟುಂಬಶ್ರೀ ಉತ್ಪನ್ನ’ ಎಂಬ ಯೋಜನೆ ಅನುಷ್ಠಾನಗೊಳಿಸಲಾಗುವುದು. ಇದಕ್ಕಾಗಿ ಒಂದು ಸಾವಿರ ಸೇಲ್ಸ್‌ ಎಕ್ಸಿಕ್ಯೂಟಿವ್‌ಗಳನ್ನು ನೇಮಿಸಲಾಗುವುದು ಎಂದರು. ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಸಭೆಯನ್ನು ಉದ್ಘಾಟಿಸಿದರು. ಕುಟುಂಬಶ್ರೀ ಸಹಾಯಕ ಜಿಲ್ಲಾ ಸಮಿತಿ ಸಂಚಾಲಕರಾದ ಸಿ. ಹರಿದಾಸನ್‌, ಪ್ರಕಾಶನ್‌ ಪಾಲಾಳಿ, ಜೋಸೆಫ್‌ ಪೆರುಂಗಿಲ್‌, ಡಿಡಿಯುಜಿಕೆವೈ ಜಿಲ್ಲಾ ಯೋಜನೆ ಪ್ರಬಂಧಕಿ ರೇಷ್ಮಾ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.