ಕಲಾವಿದರ ಕುಂಚದಲ್ಲಿ ಮೂಡಿದ ಜಾಗೃತಿಯ ಚಿತ್ತಾರ


Team Udayavani, Apr 8, 2018, 7:15 AM IST

6mjs3.jpg

ಮಂಜೇಶ್ವರ: ಗಡಿನಾಡಿನಲ್ಲಿ ವ್ಯಾಪಕಗೊಳ್ಳುತ್ತಿರುವ ಅಮಲು ಪದಾರ್ಥ ಮಾಫಿಯಾಗಳ ವಿರುದ್ಧ ಜನಜಾಗೃತಿ ಮೂಡಿಸಲು ಯುವಪಡೆ ರಂಗಕ್ಕಿಳಿದಿದೆ.  ಮಂಜೇಶ್ವರದ ಜನಮೈತ್ರಿ ಪೊಲೀಸರ  ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಈ ಅಭಿಯಾನಕ್ಕೆ ಭಾರೀ ಜನಬೆಂಬಲ ದೊರೆತಿದೆ.
 
ಶಾಲಾ ಕಾಲೇಜುಗಳನ್ನು, ಕ್ಲಬ್‌ ಗಳನ್ನು  ಕೇಂದ್ರಿಕರಿಸಿಕೊಂಡು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊ ಳ್ಳಲಾಗಿದ್ದು, ಹೊಸಂಗಡಿ ಪೇಟೆಯಲ್ಲಿ ಜರುಗಿದ ಮ್ಯಾರಥಾನ್‌ ಅಭೂತಪೂರ್ವ ಯಶಸ್ಸನ್ನು ಕಂಡಿತು. ಸುಮಾರು 500ಕ್ಕೂ ಮಿಕ್ಕಿದ ಯುವಕರು ಈ ಓಟದಲ್ಲಿ ಭಾಗಿಯಾಗಿ ಅಮಲು ಪದಾರ್ಥಗಳ ವಿರುದ್ಧ ಪ್ರತಿಜ್ಜೆ ಕೈಗೊಂಡರು.

ಉಪ್ಪಳ ಮಣ್ಣಂಗುಳಿ ಮೈದಾನದಲ್ಲಿ ನಡೆಯುತ್ತಿರುವ ಬಿಚ್ಚು ಬಾಯ್ಸ ಆರ್ಟ್ಸ್ ಮತ್ತು ನ್ಪೋರ್ಟ್ಸ್ ಕ್ಲಬ್ಬಿನ ಪ್ರಿಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾಟದ ವೇದಿಕೆಯು ಮಾದಕವಸ್ತುಗಳ ವಿರುದ್ಧದ ಚಿತ್ರಲಹರಿ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು. ಮಂಜೇಶ್ವರದ ಜನಮೈತ್ರಿ ಪೊಲೀಸರು ವಿವಿಧ ಸಂಘಟನೆಗಳ ಜೊತೆಗೂಡಿ ಹಮ್ಮಿಕೊಂಡ ಈ ಕಾರ್ಯಕ್ರಮದಲ್ಲಿ  ಕಾಸರಗೋಡು ಜಿಲ್ಲೆಯ ಹತ್ತಕ್ಕೂ ಮಿಕ್ಕಿದ ಕಲಾವಿದರು ಪಾಲ್ಗೊಂಡರು.

ಅಂತಾರಾಷ್ಟ್ರೀಯ ಖ್ಯಾತಿಯ ವಿಕಲಚೇತನ ಕಲಾವಿದ ಗಣೇಶ್‌ ಕುಮಾರ್‌ ಕುಂಞಮಂಗಳಂ ಬಾಯಿಯ ಮೂಲಕ ಚಿತ್ರ ರಚಿಸುವ ಮೂಲಕ ಚಿತ್ರಲಹರಿಗೆ ಚಾಲನೆಯನ್ನು ನೀಡಿದರು. ಬಾಯಿಯಲ್ಲಿ ಬ್ರಶ್‌ ಇಟ್ಟು ಮಾದಕ‌ದ್ರವ್ಯ ಬಳಕೆಯಿಂದಾಗುವ  ಮಾರಕತೆಯ ಕುರಿತು ಕ್ಷಣಾರ್ಧದಲ್ಲಿ ಅವರು ರಚಿಸಿದ ಚಿತ್ರ ಎಲ್ಲರನ್ನೂ ದಿಗೂ¾ಢಗೊಳಿಸಿತು.
 
ಕಾಸರಗೋಡು ಜಿಲ್ಲೆಯ ಸುಪ್ರಸಿದ್ಧ ಚಿತ್ರಕಲಾವಿದರಾದ ಅಶೋಕನ್‌ ಇ.ವಿ, ನಾರಾಯಣ ಮಾಸ್ತರ್‌, ಬಾಬು ಮೇಕಾಡನ್‌, ಸುರೇಶ್‌ ಎಂ, ಶಿವನ್‌ ಕೈಲಾಶ್‌ಮ ಮೋಹನಚಂದ್ರನ್‌,ಕೆಆರ್‌ ಸಿ ತಾಯನ್ನೂರ್‌, ಶಿಶುಪಾಲನ್‌ ಮಾಯಿಚ್ಚ ತಮ್ಮ ಕಲ್ಪನೆಯ ಚಿತ್ತಾರಕ್ಕೆ ಸೃಷ್ಟಿ ನೀಡಿದರು. ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನೆರೆದ ಯುವಕ್ರೀಡಾಳುಗಳು ಈ ಅದ್ಭುತ ಕ್ಷಣಗಳಿಗೆ ಸಾಕ್ಷಿಯಾದರು. ಕವಿ ವಿನೋದ್‌ ಕುಮಾರ್‌ ಪರಂಬಳ ಕಾವ್ಯವಾಚನಗೈದರು.

ಕಲಾವಿದರು ಸೃಷ್ಟಿಸಿದ ಕುಂಚಗಳು ಮಾದಕವಸ್ತು ಬಳಕೆಯ ವಿರುದ್ಧ  ಸಂದೇಶವನ್ನು ನೀಡುವ ವರ್ಣಮಯ ಚಿತ್ತಾರವಾಗಿತ್ತು. ಪ್ರತಿಯೊಂದು ವರ್ಣಚಿತ್ರ ಅರ್ಥಗರ್ಭಿತ ಹಾಗೂ ಸಂದೇಶಭರಿತವಾಗಿತ್ತು.ಕ್ರಿಕೆಟ್‌ ಮೈದಾನದಲ್ಲಿ ಕ್ರಿಕೆಟ್‌ ಜೊತೆಗೆ ಕಲಾವಿದರ ಚಿತ್ರರಚನೆ ಕಲಾ-ಕ್ರೀಡೆಗಳ ಜುಗಲ್‌ಬಂದಿಯಾಗಿತ್ತು.

ಕಾಸರಗೋಡು ಜಿಲ್ಲಾಧಿಕಾರಿ ಜೀವನ್‌ ಬಾಬು ಚಿತ್ರಲಹರಿ ಹಾಗೂ ಎಂಪಿಎಲ್‌ ಕ್ರಿಕೆಟ್‌ ಪಂದ್ಯಾಟಕ್ಕೆ ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು ಅಮಲು ಪದಾರ್ಥಗಳ ಬಳಕೆ ಕ್ಷಣಿಕ ಸುಖಕ್ಕಾಗಿ ಇಡೀ ಜೀವನವನ್ನೇ ನಾಶಮಾಡುವ ಪ್ರಕ್ರಿಯೆಯಾಗಿದೆ, ಸಮಾಜದಲ್ಲಿ ಕ್ರಿಮಿನಲ್‌ಗ‌ಳಾಗಿ ಮಾರ್ಪಾಡಾಗುವ ಮೊದಲೇ ಮಾದಕದ್ರವ್ಯ ವ್ಯಸನಿಗಳನ್ನು ಸರಿದಾರಿಗೆ ತರುವ ಪ್ರಯತ್ನ ಆಗಬೇಕಾಗಿದೆ ಎಂದು ಅವರು ಹೇಳಿದರು.

ಕಾಸರಗೋಡು ಜಿಲ್ಲಾ ಪಂಂಚಾಯಯ್‌ಅಭಿವೃದ್ಧಿ  ಸ್ಥಾಯೀ ಅಧ್ಯಕ್ಷ ರು ಅಧ್ಯಕ್ಷತೆ ವಹಿಸಿದ್ದರು. ಗೋಲ್ಡನ್‌ ರಹ್ಮಾನ್‌ ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಕರಾವಳಿ ಠಾಣೆಯ ಇನ್ಸ್‌ಪೆಕ್ಟರ್‌  ಅಜಿ.ಜಿ.ನಾಥ್‌ಮ ಸಬ್‌ ಇನ್ಸ್‌ಪೆಕ್ಟರ್‌ ಪ್ರಮೋದ್‌,ವಿಮುಕ್ತಿ ಜಿಲ್ಲಾ ಕೋರ್ಡಿನೇಟರ್‌ ರಘುನಾಥನ್‌,ಮಂಜೇಶ್ವರ ಎಸ್‌ಐ ರವೀಂದ್ರನ್‌, ಮಂಗಲ್ಪಾಡಿ ಗ್ರಾಮ ಪಂಚಾಯತು ಸ್ಥಾಯೀ ಸಮಿತಿ ಅಧ್ಯಕ್ಷ ಮುಸ್ತಫಾ, ಸಂಘಟಕ ಶಶಿಧರನ್‌,ಮುಂತಾದವರು ಉಪಸ್ಥಿತರಿದ್ದರು.

ಮಾದಕವಸ್ತುಗಳ ವಿರುದ್ಧದ ಸಂದೇಶದೊಂದಿಗೆ ಹಮ್ಮಿಕೊಳ್ಳಲಾದ ಎಂಪಿಎಲ್‌ ಕ್ರಿಕೆಟ್‌ ಪಂದ್ಯಾಟವನ್ನು ಕಾಸರಗೋಡು ಜಿಲ್ಲಾಧಿಕಾರಿ ಉದ್ಘಾಟಿಸಿದರು. ಕ್ರಿಕೆಟ್‌ ಆಡುವ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಿದ ಅವರು ಬಾಲನ್ನು ಬೌಂಡರಿಗಟ್ಟಿದರು.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

Untitled-1

Kasaragod ಅಪರಾಧ ಸುದ್ದಿಗಳು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.