Badiyadka: ವಂಚನೆ ಪ್ರಕರಣ: ಕೇಸು ದಾಖಲು


Team Udayavani, Oct 9, 2024, 6:15 AM IST

FRAUD

ಬದಿಯಡ್ಕ: ಕನ್ನಡ ಮ್ಯಾಟ್ರಿಮೊನಿ ಆ್ಯಪ್‌ ಮೂಲಕ ಪರಿಚಯಗೊಂಡ ಇಂಗ್ಲೆಂಡ್‌ನ‌ಲ್ಲಿ ವಾಸಿಸುವ ಯುವತಿ ಕುಂಬ್ಡಾಜೆ ನಿವಾಸಿಯ 5,67,299 ರೂ. ಲಪಟಾಯಿಸಿರುವುದಾಗಿ ದೂರು ನೀಡಲಾಗಿದೆ.

ಇದರಂತೆ ಬದಿಯಡ್ಕ ಪೊಲೀಸರು ಇಂಗ್ಲೆಂಡ್‌ನ‌ಲ್ಲಿ ವಾಸಿಸುವ ಪ್ರಿಯಾಂಕ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ. ಕುಂಬ್ಡಾಜೆ ಮವ್ವಾರು ಪಾವೂರು ನಿವಾಸಿ ಪಿ.ಅಶ್ವಿ‌ನ್‌ ನೀಡಿದ ದೂರಿನಂತೆ ಕೇಸು ದಾಖಲಿಸಲಾಗಿದೆ.

ಅಶ್ವಿ‌ನ್‌ ಕನ್ನಡ ಮ್ಯಾಟ್ರಿಮೊನಿ ಆ್ಯಪ್‌ ಮೂಲಕ ಪ್ರಿಯಾಂಕ ಎಂಬ ಹೆಸರಿನಲ್ಲಿ ಪರಿಚಯಗೊಂಡ ಯುವತಿ ತಾನು ಇಂಗ್ಲೆಂಡ್‌ನ‌ಲ್ಲಿ ವಾಸಿಸುತ್ತಿರುವುದಾಗಿ ತಿಳಿಸಿದ್ಧಳು. ಅನಂತರ ಅವರಿಬ್ಬರು ವಾಟ್ಸಪ್‌ ಮೂಲಕ ಮಾತುಕತೆ ನಡೆಸಿದ್ದರೆನ್ನಲಾಗಿದೆ. ಈ ಮಧ್ಯೆ ಬೆಲೆ ಬಾಳುವ ಸಾಮಗ್ರಿಗಳು ಹಾಗು ಡಾಲರ್‌ ಪಾರ್ಸೆಲ್‌ ಮೂಲಕ ಕಳುಹಿಸಿಕೊಟ್ಟಿರುವುದಾಗಿಯೂ, ಅವು ಲಭಿಸಬೇಕಾದರೆ 5 ಲಕ್ಷ ರೂಪಾಯಿ ಕಳುಹಿಸಿಕೊಡಬೇಕೆಂದು ಪ್ರಿಯಾಂಕ ತಿಳಿಸಿದ್ದಳು. ಅದರಂತೆ 2023 ಡಿ.23 ರಿಂದ 2024 ಜನವರಿ 8 ರ ವರೆಗಿನ ಕಾಲಾವಧಿಯಲಲ್ಲಿ 5,67,299 ರೂ.ಕಳುಹಿಸಿಕೊಟ್ಟಿರುವುದಾಗಿ ಅಶ್ವಿ‌ನ್‌ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಹಣ ಕಳುಹಿಸಿಕೊಟ್ಟ ನಂತರ ಪ್ರಿಯಾಂಕಳ ಕುರಿತು ಯಾವುದೇ ಮಾಹಿತಿ ಲಭಿಸಿಲ್ಲ. ಆಕೆ ಕಳುಹಿಸಿದ್ದಾಳೆನ್ನಲಾದ ಯಾವುದೇ ಸಾಮಗ್ರಿಗಳು ಲಭಿಸಿಲ್ಲ. ಇದರಿಂದ ವಂಚನೆಗೀಡಾಗಿರುವುದಾಗಿ ತಿಳಿದ ಅಶ್ವಿ‌ನ್‌ ಬದಿಯಡ್ಕ ಪೊಲೀಸರಿಗೆ ದೂರು ನೀಡಿದ್ದಾರೆ.

ಹಾನಿಗೀಡಾದ ಚಂದ್ರಗಿರಿ ರಸ್ತೆ : ವ್ಯಾಪಕ ಪ್ರತಿಭಟನೆ
ಕಾಸರಗೋಡು: ಕಾಸರಗೋಡು ಕಾಂಞಂಗಾಡ್‌ ರಾಜ್ಯ ರಸ್ತೆಯಲ್ಲಿ ಚಂದ್ರಗಿರಿ ಸೇತುವೆ ಬಳಿ ಇಂಟರ್‌ಲಾಕ್‌ ನಡೆಸಿ ದುರಸ್ತಿಗೊಳಿಸಿದ ರಸ್ತೆ ಮತ್ತೆ ಹಾನಿಗೀಡಾಗಿದ್ದು, ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದೆ. ರಸ್ತೆ ಕಾಮಗಾರಿಯಲ್ಲಿ ನಡೆದ ಲೋಪದೋಷವೇ ಮತ್ತೆ ಹಾನಿಗೀಡಾಗಲು ಕಾರಣವೆಂದು ಆರೋಪಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಮುಸ್ಲಿಂ ಯೂತ್‌ ಲೀಗ್‌ ಕಾಸರಗೋಡು ಮುನಿಸಿಪಲ್‌ ಕಮಿಟಿ ನೇತೃತ್ವದಲ್ಲಿ ಕಾರ್ಯಕರ್ತರು ಲೋಕೋಪಯೋಗಿ ಇಲಾಖೆಯ ಎಕ್ಸಿಕ್ಯೂಟೀವ್‌ ಎಂಜಿನಿಯರ್‌ ಕಚೇರಿಗೆ ಮುತ್ತಿಗೆ ಹಾಕಿದರು. ಬಳಿಕ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ತೆರವುಗೊಳಿಸಿದರು.

ಕಾಸರಗೋಡು ಪ್ರಸ್‌ ಕ್ಲಬ್‌ ಜಂಕ್ಷನ್‌ನಿಂದ ಚಂದ್ರಗಿರಿ ರಸ್ತೆಯಲ್ಲಿ 25 ಲಕ್ಷ ರೂ. ಖರ್ಚು ಮಾಡಿ ಇತ್ತೀಚೆಗಷ್ಟೇ ಇಂಟರ್‌ಲಾಕ್‌ ಅಳವಡಿಸಲಾಗಿತ್ತು. ಆದರೆ ಕೆಲಸ ಮುಗಿದು ಕೆಲವೇ ಗಂಟೆಗಳೊಳಗೆ ರಸ್ತೆ ಹಾನಿಗೀಡಾಗಿದೆ. ವಾಹನಗಳು ಸಂಚರಿಸತೊಡಗಿದಾಗ ಒಂದು ಭಾಗದಲ್ಲಿ ಇಂಟರ್‌ಲಾಕ್‌ ಹೂತುಹೋಗಿದ್ದು, ಮತ್ತೂಂದು ಭಾಗದಲ್ಲಿ ಅಲುಗಾಡತೊಡಗಿದೆ. ಘನ ವಾಹನಗಳು ಸಂಚರಿಸಿದುದೇ ಇಂಟರ್‌ಲಾಕ್‌ ಹಾನಿಗೀಡಾಗಲು ಕಾರಣವೆಂದು ಸಂಬಂಧಪಟ್ಟವರು ಹೇಳುತ್ತಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಹಾನಿಗೀಡಾದ ರಸ್ತೆಯನ್ನು ಮತ್ತೆ ದುರಸ್ತಿಗೊಳಿಸಲಾಗುತ್ತಿದೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Arrested: ಪತ್ನಿಯ ಕೊ*ಲೆಗೆ ಯತ್ನ; ಪತಿಯ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

ಕಾಸರಗೋಡು ರೈಲು ನಿಲ್ದಾಣದ ಕನ್ನಡ ನಾಮಫಲಕ ಮತ್ತೆ ಅಳವಡಿಕೆಗೆ ಆಗ್ರಹ

Kasaragod ರೈಲು ನಿಲ್ದಾಣದ ಕನ್ನಡ ನಾಮಫಲಕ ಮತ್ತೆ ಅಳವಡಿಕೆಗೆ ಆಗ್ರಹ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.