![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jan 8, 2024, 11:25 PM IST
ಕಾಸರಗೋಡು: ತಾಯಿ ಜತೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಡನೀರು ಕಳರಿಯ ಎನ್.ಅರವಿಂದಾಕ್ಷನ್-ಸುಚಿತ್ರಾ ದಂಪತಿ ಪುತ್ರ, ಪೆರಿಯಡ್ಕದ ಪೀಸ್ ಇಂಟರ್ನ್ಯಾಶನಲ್ ಇಂಗ್ಲಿಷ್ ಮೀಡಿಯಂ ಶಾಲೆಯ ಯು.ಕೆ.ಜಿ. ವಿದ್ಯಾರ್ಥಿ ಅನ್ಶಿತ್ತ್ (6) ಸಾವಿಗೀಡಾದ ಘಟನೆ ನಡೆದಿದೆ.
ಡಿ. 28ರಂದು ಎಡನೀರು – ನೆಲ್ಲಿಕಟ್ಟೆ ಮಧ್ಯೆ ರಸ್ತೆ ಬದಿ ನಡೆದು ಹೋಗುತ್ತಿದ್ದಾಗ ವೇಗದಲ್ಲಿ ಬಂದ ಬೈಕ್ ಢಿಕ್ಕಿ ಹೊಡೆದು ತಾಯಿ ಮತ್ತು ಮಗ ಗಂಭೀರ ಗಾಯಗೊಂಡಿದ್ದರು. ಸುಚಿತ್ರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೈಕ್ ಚಲಾಯಿಸಿದ ವಿಟ್ಲ ನಿವಾಸಿ ಕೃಷ್ಣಪ್ರಸಾದ್ (22) ವಿರುದ್ಧ ವಿದ್ಯಾನಗರ ಪೊಲೀಸರು ಕೇಸು ದಾಖಲಿಸಿದ್ದಾರೆ. ಬೈಕನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.