![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 29, 2022, 11:41 AM IST
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಅಂಗವಾಗಿ ಪೆರಿಯಾದಲ್ಲಿ ನಿರ್ಮಾಣಗೊಳ್ಳುತ್ತಿರುವ ಮೇಲ್ಸೇತುವೆ ಕುಸಿದು ಬಿದ್ದ ಘಟನೆ ನಡೆದಿದೆ.
ಶನಿವಾರ ಮುಂಜಾನೆ ಸುಮಾರು 3 ಗಂಟೆಗೆ ಮೇಲ್ಸೇತುವೆ ಕುಸಿದು ಬಿದ್ದಿದೆ. ಈ ಸಮಯದಲ್ಲಿ ಐದು ಮಂದಿ ಕಾರ್ಮಿಕರು ಮೇಲ್ಸೇತುವೆಯ ಕಾಂಕ್ರೀಟ್ ಕೆಲಸದಲ್ಲಿ ನಿರತರಾಗಿದ್ದರು. ಕಾರ್ಮಿಕನೋರ್ವ ಸಣ್ಣಪುಟ್ಟ ಗಾಯಗೊಂಡಿರುವುದಾಗಿ ಮಾಹಿತಿಯಿದೆ.
ನಿರ್ಮಾಣ ಕಾಮಗಾರಿಯಲ್ಲಿನ ಕುಂದುಕೊರತೆಯಿಂದಾಗಿ ಮೇಲ್ಸೇತುವೆ ಕುಸಿಯಲು ಕಾರಣವೆಂದು ಶಂಕಿಸಲಾಗಿದೆ. ಮೇಲ್ಸೇತುವೆ ಕುಸಿದು ಬಿದ್ದ ಬಗ್ಗೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಮೇಘಾ ಕನ್ಸ್ಟ್ರೇಕ್ಷನ್ ಕಂಪೆನಿ ಚೆಂಗಳದಿಂದ ನೀಲೇಶ್ವರದ ತನಕದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಗುತ್ತಿಗೆ ವಹಿಸಿಕೊಂಡಿದೆ. ಮೂರು ಪಾಳಿಯಲ್ಲಿ 24 ಗಂಟೆಗಳ ಕಾಲ ನಿರ್ಮಾಣ ಕಾರ್ಯ ನಡೆಯುತ್ತಿದೆ. ಮೇಲ್ಸೇತುವೆ ನಿರ್ಮಾಣಕ್ಕೆ ಪಿಲ್ಲರ್ಗಳ ಕಾಮಗಾರಿ ಪೂರ್ಣಗೊಂಡಿದೆ. ಸ್ಲ್ಯಾಬ್ ಕಾಮಗಾರಿ ನಡೆಯುತ್ತಿರುವಂತೆ ಕುಸಿದು ಬಿದ್ದಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.