ಸಾಹಿತ್ಯ ಜೀವನದ ನಿರಂತರ ಪ್ರಕ್ರಿಯೆ : ಕುಳಮರ್ವ

ಸಿರಿಗನ್ನಡ ಸಾಹಿತ್ಯ ವೇದಿಕೆಯಿಂದ ಏಕದಿನ ಸಾಹಿತ್ಯ ಶಿಬಿರ

Team Udayavani, May 1, 2019, 6:05 AM IST

30KSDE1

ಕಾಸರಗೋಡು: ಸಾಹಿತ್ಯದಿಂದ ಮಾನವನ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಮಾನವನ ಮನಸ್ಸನ್ನು ಸೋಸಿ, ಶುದ್ಧೀಕರಿಸಲು ಸಾಹಿತ್ಯದ ಸಹಕಾರ ಬೇಕು. ಸಾಹಿತ್ಯದಿಂದ ಸಾತ್ವಿಕ ಮನೋಭಾವ ಮೂಡುತ್ತದೆ. ಆದ್ದರಿಂದ ಎಳವೆಯಲ್ಲೇ ಮಕ್ಕಳಿಗೆ ಸಾಹಿತ್ಯದ ದೀಕ್ಷೆಯನ್ನು ನೀಡಬೇಕು. ಸಾಹಿತ್ಯವು ಜೀವನದ ನಿರಂತರ ಪ್ರಕ್ರಿಯೆ ಎಂದು ಹಿರಿಯ ಸಾಹಿತಿ ವಿ.ಬಿ.ಕುಳಮರ್ವ ಹೇಳಿದರು.

ಅವರು ಉಪ್ಪಿನಂಗಡಿಯ ಶ್ರೀ ರಾಮ ಶಾಲೆಯಲ್ಲಿ ಸಿರಿಗನ್ನಡ ಸಾಹಿತ್ಯ ವೇದಿಕೆಯ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ಏಕದಿನ ಸಾಹಿತ್ಯ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಶಾಲೆಯ ವ್ಯವಸ್ಥಾಪಕ ರಾಧಾ ಯು.ಜಿ. ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಿಬಿರದಲ್ಲಿ ವ್ಯಂಗ್ಯಚಿತ್ರ ರಚನೆಯ ಬಗ್ಗೆ ಮಾಹಿತಿ ನೀಡಿದ ವ್ಯಂಗ್ಯಚಿತ್ರಕಾರ ವಿರಾಜ್‌ ಅಡೂರು ಮಾತನಾಡಿ ವ್ಯಂಗ್ಯಚಿತ್ರಗಳು ಗಂಭೀರವಾದ ಸಾಮಾಜಿಕ ಅವ್ಯವಸ್ಥೆಗಳನ್ನು ಸುಲಭವಾಗಿ ಮುಂಚಿತವಾಗಿ ಗ್ರಹಿಸಿಕೊಂಡು ಅದರ ತೊಂದರೆಯನ್ನು ಹಾಸ್ಯದ ರೂಪದಲ್ಲಿ ಹೇಳುತ್ತವೆ. ಆದ್ದರಿಂದಾಗಿ ವ್ಯಂಗ್ಯಚಿತ್ರಗಳು ಜನಪ್ರಿಯವಾಗಿವೆ. ವ್ಯಂಗ್ಯಚಿತ್ರಕಾರನಿಗೆ ಚಿತ್ರರಚನೆಯ ಜತೆಗೆ ಹಾಸ್ಯಪ್ರಜ್ಞೆ, ದೂರಾಲೋಚನೆ, ಚಿತ್ರಗಳಲ್ಲಿ ಶಕ್ತವಾಗಿ ಭಾವನೆಗಳನ್ನು ಅರಳಿಸುವ ಜಾಣ್ಮೆ ಇರಬೇಕು. ಅಡಿಬರಹಗಳಿಲ್ಲದ, ನೋಟದಿಂದಲೇ ಅರ್ಥ ಮಾಡಿಕೊಳ್ಳಲು ಸಾಧ್ಯವಾಗುವ ವ್ಯಂಗ್ಯಚಿತ್ರಗಳನ್ನು ರಚಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.

ಹಾಸ್ಯಗೋಷ್ಠಿಯಲ್ಲಿ ಹಿರಿಯ ಸಾಹಿತಿ ಕಕ್ಕೆಪ್ಪಾಡಿ ಶಂಕರನಾರಾಯಣ ಭಟ್ ಮಾತ ನಾಡಿ ಮಾನವನ ಎಲ್ಲಾ ಜಂಜಾಟಗಳನ್ನೂ ಮರೆಯುವಂತೆ ಮಾಡುವಲ್ಲಿ ಹಾಸ್ಯ ಮನೋಭಾವ ಸಹಕರಿಸುತ್ತದೆ. ಹಾಸ್ಯವು ನಗುವನ್ನು ಸೃಷ್ಟಿಸುವ ಮೂಲಕ ಮಕ್ಕಳಲ್ಲಿ ಮಾನಸಿಕ ಶಕ್ತಿಯ ವೃದ್ಧಿ ಹಾಗೂ ಹಿರಿಯರಲ್ಲಿ ಆತ್ಮಸ್ಥೈರ್ಯದ ವೃದ್ಧಿ ಮಾಡುತ್ತದೆ. ಹಾಸ್ಯದಿಂದ ಸೃಷ್ಟಿಯಾಗುವ ನಗುವಿನಲ್ಲಿ ಆರೋಗ್ಯ ಅಡಗಿದೆ ಎಂದು ಹೇಳಿದರು. ಶಿಬಿರದಲ್ಲಿ ಶಾಲೆಯ ಶಿಕ್ಷಕ ವೃಂದ ಹಾಗೂ ಸಿಬಂದಿ ಸಹಕರಿಸಿದ್ದರು. ಚುಟುಕು ರಚನೆ ಹಾಗೂ ವ್ಯಂಗ್ಯಚಿತ್ರ ರಚನೆ ವಿಭಾಗದಲ್ಲಿ ಒಟ್ಟು ಸುಮಾರು 100ಕ್ಕೂ ಮಿಕ್ಕಿದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.