6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ
Team Udayavani, Mar 28, 2024, 6:33 PM IST
ಕಾಸರಗೋಡು: ಬಾಡಿಗೆ ಮನೆಯಲ್ಲಿ ಬಚ್ಚಿಡಲಾಗಿದ್ದ, ಕೇಂದ್ರ ನಿಷೇಧಿಸಿದ 2000 ರೂ. ಮೌಲ್ಯದ 6.69 ಕೋಟಿ ರೂ. ವಶಪಡಿಸಿದ ಪ್ರಕರಣದಲ್ಲಿ ಕೇಂದ್ರ ಏಜೆನ್ಸಿ ತನಿಖೆ ಆರಂಭಗೊಂಡಿದೆ.
ಕೇರಳ ಪೊಲೀಸರು ಆರಂಭದಲ್ಲಿ ನಡೆಸಿದ ತನಿಖೆಯಿಂದ ಹೆಚ್ಚಿನ ಪ್ರಗತಿ ಸಾಧ್ಯವಾಗದ ಕಾರಣದಿಂದ ಕೇಂದ್ರ ಏಜೆನ್ಸಿ ಈ ಪ್ರಕರಣವನ್ನು ಕೈಗೆತ್ತಿಕೊಂಡಿದೆ.
ಹೊಸದುರ್ಗ ಅಂಬಲತ್ತರ ಪಾರಪ್ಪಳ್ಳಿ ಗುರುಪುರದ ಬಾಡಿಗೆ ಮನೆಯಲ್ಲಿ ನೋಟುಗಳ ಬೃಹತ್ ದಾಸ್ತಾನು ಪತ್ತೆಯಾಗಿತ್ತು. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿತ್ತು. ಬಂಧಿತರಿಬ್ಬರು ಈ ಹಿಂದೆ 1000 ರೂ. ಮುಖಬೆಲೆಯ ಕರೆನ್ಸಿಗಳನ್ನು ವಿತರಿಸಿದ್ದಾಗಿ ತನಿಖೆಯಿಂದ ತಿಳಿದು ಬಂದಿತ್ತು. ಆದರೆ ಈ ನೋಟುಗಳನ್ನು ಎಲ್ಲಿ ಮುದ್ರಿಸಲಾಗಿದೆ, ಇದರ ಹಿಂದಿರುವ ವ್ಯಕ್ತಿಗಳು ಯಾರು ಎಂಬ ಬಗ್ಗೆ ಇನ್ನೂ ತಿಳಿದು ಬಂದಿಲ್ಲ. ಕಲ್ಲಿಕೋಟೆ, ಮಲಪ್ಪುರ ನಿವಾಸಿಗಳು ಇದರ ಹಿಂದಿದ್ದಾರೆಂದು ಆರೋಪಿಗಳು ಹೇಳಿಕೆ ನೀಡಿದ್ದರು. ಬಂಧಿತರು ಕರೆನ್ಸಿ ವಿತರಕರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.