ದಂತ ವೈದ್ಯ ಡಾ| ಕೃಷ್ಣಮೂರ್ತಿ ಸಾವು: ಐವರ ಬಂಧನ: ಬದಿಯಡ್ಕದಲ್ಲಿ ಹರತಾಳ

ಬಿಗು ಪೊಲೀಸ್‌ ಬಂದೋಬಸ್ತು

Team Udayavani, Nov 12, 2022, 7:00 AM IST

ದಂತ ವೈದ್ಯ ಡಾ| ಕೃಷ್ಣಮೂರ್ತಿ ಸಾವು: ಐವರ ಬಂಧನ: ಬದಿಯಡ್ಕದಲ್ಲಿ ಹರತಾಳ

ಬದಿಯಡ್ಕ: ಇಲ್ಲಿನ ಹಿರಿಯ ದಂತ ವೈದ್ಯ ಡಾ| ಕೃಷ್ಣಮೂರ್ತಿ ಸರ್ಪಂಗಳ (57) ಅವರ ಸಾವಿಗೆ ಸಂಬಂಧಿಸಿದ ಪ್ರಕರಣದಲ್ಲಿ ಐವರನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಇದೇ ಸಂದರ್ಭ ಆರೋಪಿಗಳ ಬಗ್ಗೆ ಎನ್‌ಐಎ ತನಿಖೆ ನಡೆಸಬೇಕೆಂದು ಆಗ್ರಹಿಸಿ ಬದಿಯಡ್ಕ ಪಂಚಾಯತ್‌ ವ್ಯಾಪ್ತಿಯಲ್ಲಿ ಹರತಾಳ ನಡೆಯಿತು. ಘಟನೆ ಹಿನ್ನೆಲೆಯಲ್ಲಿ ಬದಿಯಡ್ಕದಲ್ಲಿ ಬಿಗು ಪೊಲೀಸ್‌ ಬಂದೋಬಸ್ತು ಏರ್ಪಡಿಸಲಾಗಿದೆ.

ಘಟನೆಗೆ ಸಂಬಂಧಿಸಿ ಟಿ.ಎಸ್‌. ಅಲಿ ಪೂಟ್ಟುಕಲ್ಲು, ಕುಂಬಾxಜೆ ಅನ್ನಡ್ಕದ ಮೊಹಮ್ಮದ್‌ ಶಿಹಾಬುದ್ದೀನ್‌, ವಿದ್ಯಾಗಿರಿ ಮುನಿಯೂರಿನ ಉಮ ರುಲ್‌ ಫಾರೂಕ್‌, ಕುಂಬಾxಜೆಯ ಅಶ್ರಫ್‌, ಬದಿಯಡ್ಕ ಚೆನ್ನಾರ್‌ಕಟ್ಟೆಯ ಮುಹಮ್ಮದ್‌ ಹನೀಫ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ತಂಡವೊಂದರ ಬೆದರಿಕೆಯ ಹಿನ್ನೆಲೆಯಲ್ಲಿ ಡಾ| ಕೃಷ್ಣಮೂರ್ತಿ ಸರ್ಪಂಗಳ ಅವರ ಸಾವು ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌ ಬದಿಯಡ್ಕ ಪ್ರಖಂಡ ನೀಡಿದ್ದ ಕರೆಯಂತೆ ಬದಿಯಡ್ಕ ಪಂ. ವ್ಯಾಪ್ತಿಯಲ್ಲಿ ಶುಕ್ರ ವಾರ ಪೂರ್ಣ ಹರತಾಳ ನಡೆಯಿತು. ಇದೇ ಬೇಡಿಕೆಯನ್ನು ಮುಂದಿಟ್ಟು ನ. 10ರಂದು ಹವ್ಯಕ ಸಭಾ ಮತ್ತು ಸ್ಥಳೀಯರು ಪ್ರತಿಭಟನೆ ನಡೆಸಿದ್ದರು.

ನ. 8ರಂದು ಮಧ್ಯಾಹ್ನದಿಂದ ಡಾ| ಕೃಷ್ಣಮೂರ್ತಿ ಸರ್ಪಂಗಳ ನಾಪತ್ತೆ ಯಾಗಿದ್ದರು. ಅವರ ಪತ್ನಿ ನೀಡಿದ ದೂರಿನಂತೆ ಬದಿಯಡ್ಕ ಪೊಲೀಸರು ಕೇಸು ದಾಖಲಿಸಿದ್ದರು. ಕುಂದಾಪುರ ಸಮೀಪದ ಹಟ್ಟಿಯಂಗಡಿ ಗ್ರಾಮದ ಕಾಡು ಅಜ್ಜಿಮನೆ ಎಂಬಲ್ಲಿ ರೈಲು ಹಳಿ ಯಲ್ಲಿ ಮೃತದೇಹ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹವನ್ನು ಬದಿಯಡ್ಕದ ಸ್ವಗೃಹಕ್ಕೆ ತಂದು ಶುಕ್ರವಾರ ಬೆಳಗ್ಗೆ ಮನೆ ಹಿತ್ತಿಲಿನಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು.

ಬದಿಯಡ್ಕದಲ್ಲಿ ಹರತಾಳ
ಡಾ| ಕೃಷ್ಣಮೂರ್ತಿ ಅವರ ಸಾವಿನ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿ ವಿಹಿಂಪ ಬದಿಯಡ್ಕ ಪ್ರಖಂಡ ಸಮಿತಿ ಕರೆ ನೀಡಿದ ಬದಿಯಡ್ಕ ಪಂ. ವ್ಯಾಪ್ತಿಯ ಹರತಾಳ ಯಶಸ್ವಿಯಾಗಿದೆ. ಬದಿ ಯಡ್ಕ ಪೇಟೆಯಲ್ಲಿ ಬೃಹತ್‌ ಮೆರ ವಣಿಗೆ ನಡೆಯಿತು. ವಿಹಿಂಪ ಪ್ರಮುಖರು ನೇತೃತ್ವ ವಹಿಸಿದ್ದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶರಣ್‌ ಪಂಪ್‌ವೆಲ್‌ ಪ್ರಕರಣದಲ್ಲಿ ಭಾಗಿಯಾದ ಎಲ್ಲರನ್ನು ಬಂಧಿಸ ಬೇಕು. ತನಿಖೆಯನ್ನು ಎನ್‌ಐಎ ಹಸ್ತಾಂತರಿಸ ಬೇಕೆಂದು ಆಗ್ರಹಿಸಿದರು.

30 ವರ್ಷಗಳಿಂದ ವೈದ್ಯ ವೃತ್ತಿ
ಸುಮಾರು 30 ವರ್ಷಗಳಿಂದ ಡಾ| ಕೃಷ್ಣಮೂರ್ತಿ ವೈದ್ಯ ವೃತ್ತಿ ನಡೆಸುತ್ತಿದ್ದರು. ಅವರ ಪುತ್ರಿ ವರ್ಷಾ ಎಂಬಿಬಿಎಸ್‌ ಬಳಿಕ ಉನ್ನತ ಶಿಕ್ಷಣ ಪಡೆಯಲು ತಯಾರಿ ನಡೆಸುತ್ತಿದ್ದಾರೆ. ಡಾ| ಕೃಷ್ಣಮೂರ್ತಿ ಪತ್ನಿ, ಪುತ್ರಿ, ತಂದೆ ಡಾ| ಎಸ್‌.ಎಸ್‌. ಭಟ್‌ ಮತ್ತು ತಾಯಿ ಭಾರತಿ ಅವರನ್ನು ಅಗಲಿದ್ದಾರೆ.

ವ್ಯಾಪಕ ಚರ್ಚೆ
ಡಾ| ಕೃಷ್ಣಮೂರ್ತಿ ಅವರ ನಾಪತ್ತೆ, ಸಾವು ಪ್ರಕರಣ ಬದಿಯಡ್ಕದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಅವರು ಎಂದಿನಂತೆ ನ. 8ರಂದು ಬೆಳಗ್ಗೆ ಆಸ್ಪತ್ರೆಗೆ ತೆರಳಿದ್ದರು. 11 ಗಂಟೆಗೆ ತಪಾಸಣೆಗೆಂದು ಮುಸ್ಲಿಂ ಮಹಿಳೆಯೊಬ್ಬಳು ಆಸ್ಪತ್ರೆಗೆ ಬಂದಿದ್ದಳು. ಆಕೆಯ ಜತೆ ಅನುಚಿತವಾಗಿ ವರ್ತಿಸಿದ್ದಾರೆಂದು ಆರೋಪಿಸಿ ತಂಡವೊಂದು ಬೆದರಿಸಿ ಹಲ್ಲೆಗೆ ಯತ್ನಿಸಿತ್ತು. ಮಹಿಳೆ ನೀಡಿದ ದೂರಿನಂತೆ ಪೊಲೀಸರು ಕೇಸು ದಾಖಲಿಸಿದ್ದರು. ಆ ಬಳಿಕ ಡಾ| ಕೃಷ್ಣಮೂರ್ತಿ ನಾಪತ್ತೆಯಾಗಿದ್ದರು.

ಕೊಲೆ ಬೆದರಿಕೆ, ಹಣದ ಬೇಡಿಕೆ
ಡಾ| ಕೃಷ್ಣಮೂರ್ತಿ ಅವರಿಗೆ ಕ್ಲಿನಿಕ್‌ನಲ್ಲಿ ಮಂಗಳವಾರ ತಂಡವೊಂದು ಕೊಲೆ ಬೆದರಿಕೆ ಒಡ್ಡಿತ್ತು. ಅಲ್ಲದೆ 10 ಲಕ್ಷ ರೂ. ಹಣದ ಬೇಡಿಕೆ ಒಡ್ಡ ಲಾಗಿತ್ತೆಂದು ತಿಳಿದು ಬಂದಿದೆ. ಇದಕ್ಕೂ ಮೊದಲು ವೈದ್ಯರಿಂದ ಕ್ಷಮೆ ಯಾಚಿಸುವ ನಾಟಕವಾಡಿ ಅವರು ಮಾನಸಿಕವಾಗಿ ಕುಗ್ಗುವಂತೆ ಮಾಡಲಾಗಿತ್ತು. ಡಾ| ಕೃಷ್ಣಮೂರ್ತಿ ಇದರಿಂದ ಸಂಪೂರ್ಣ ಕ್ಷೋಭೆ ಗೊಳಗಾಗಿದ್ದರು ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ.

ಕುಂದಾಪುರ: ವಿವಿಧೆಡೆ ಸಿಸಿಟಿವಿ ಪರಿಶೀಲನೆ
ಕುಂದಾಪುರ: ಡಾ| ಕೃಷ್ಣಮೂರ್ತಿ ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರ ಗ್ರಾಮಾಂತರ ಪೊಲೀಸರು ಕೂಡ ತನಿಖೆ ಮುಂದುವರಿಸಿದ್ದಾರೆ. ಕುಂದಾಪುರಕ್ಕೆ ಅವರು ಹೇಗೆ ಬಂದಿರಬಹುದು ಅನ್ನುವ ಬಗ್ಗೆ ಇಲ್ಲಿನ ಪೊಲೀಸರು ಪತ್ತೆಹಚ್ಚಲು ಮುಂದಾಗಿದ್ದಾರೆ. ಮೂಡ್ಲಕಟ್ಟೆಯ ರೈಲು ನಿಲ್ದಾಣ, ಕುಂದಾಪುರದ ಬಸ್‌ ನಿಲ್ದಾಣಗಳಲ್ಲಿ, ಶಾಸ್ತ್ರಿ ಸರ್ಕಲ್‌, ಕೊಲ್ಲೂರು, ತಲ್ಲೂರು ಜಂಕ್ಷನ್‌ ಸಹಿತ ವಿವಿಧೆಡೆಗಳಲ್ಲಿರುವ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿ, ಯಾವುದಾದರೂ ಸುಳಿವು ಸಿಗಬಹುದೇ ಎಂಬ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

 

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

6

Arrested: ಪತ್ನಿಯ ಕೊ*ಲೆಗೆ ಯತ್ನ; ಪತಿಯ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.