ಬಿರುಸಿನ ಗಾಳಿ ಮಳೆ- ಕಾಸರಗೋಡು ಜಿಲ್ಲೆಯ ಹಲವೆಡೆ ವ್ಯಾಪಕ ಹಾನಿ


Team Udayavani, Jun 28, 2024, 2:29 PM IST

ಬಿರುಸಿನ ಗಾಳಿ ಮಳೆ- ಕಾಸರಗೋಡು ಜಿಲ್ಲೆಯ ಹಲವೆಡೆ ವ್ಯಾಪಕ ಹಾನಿ

ಕುಂಬಳೆ: ಬಿರುಸಿನ ಗಾಳಿ ಮಳೆಗೆ ಕಾಸರಗೋಡು ಜಿಲ್ಲೆಯಾದ್ಯಂತ ವ್ಯಾಪಕ ಹಾನಿಯಾಗಿದೆ. ಕಾರಡ್ಕ ಪಂಚಾಯತ್‌ ವ್ಯಾಪ್ತಿಯ ಪುಂಡಿಕಾಯಿಯಲ್ಲಿ ಬಯಲುಗದ್ದೆಯ ಪಕ್ಕದ ಗುಡ್ಡ ಕುಸಿದು ತೋಟ ಜಲಾವೃತಗೊಂಡಿದೆ. ಬಯಲಿನ
ಮಧ್ಯಭಾಗದ ಗೋಪಾಲ ಮಣಿಯಾಣಿ ಅವರ ಮನೆ ಪಕ್ಕದ ಗುಡ್ಡ ಕುಸಿದು ತೋಡಿಗೆ ಬಿದ್ದು ನೀರು ತೋಟದ ಮಧ್ಯೆ
ಹರಿಯುತ್ತಿದೆ. ನಾರಾಯಣ ಬಲ್ಲಾಳ್‌ ,ಬಾಲಕೃಷ್ಣ ಮಾಸ್ಟರ್‌ ಅವರ ತೋಟಕ್ಕೆ ತೋಡಿನ ನೀರು ಹರಿದು ಕೃಷಿ ನಾಶವಾಗಿದೆ.

ಅಂಗಡಿ ಮೊಗರು ಶಾಲೆ ಬಳಿ ರಸ್ತೆಗೆ ಮಣ್ಣು ಜರಿದು ಬಿದ್ದು ಸಂಚಾರಕ್ಕೆ ತೊಡಕಾಗಿದೆ. ಇನ್ನಷ್ಟು ಮಣ್ಣು ಕುಸಿದು ಬೀಳುವ ಸಾಧ್ಯತೆ ಇದ್ದು ಸ್ಥಳೀಯರು ಆತಂಕದಲ್ಲಿದ್ದಾರೆ.

ಚೆರ್ಕಳ ಚಟ್ಟಂಚಾಲು ಹೆದ್ದಾರಿಯ ಮೂರು ಕಡೆಗಳಲ್ಲಿ ಗುಡ್ಡ ಜರಿದು ಬಿದ್ದಿದೆ. ಕುಂಬಳೆ ಮೊಗ್ರಾಲ್‌ ಕಡವತ್‌ ತಗ್ಗು ಪ್ರ‌ದೇಶಕ್ಕೆ ಪ್ರತಿ ವರ್ಷದಂತೆ ಈ ಬಾರಿಯೂ ನೀರು ನುಗ್ಗಿ ಸ್ಥಳೀಯ ಮನೆಗಳಿಗೆ ನೀರು ನುಗ್ಗಿದೆ. ಇಲ್ಲಿ ಹೆಚ್ಚಿನ ಮನೆಯವರು ಭಯದಿಂದಲೇ
ಕಾಲ ಕಳೆಯುವಂತಾಗಿದೆ. ಕೊಯಿಪ್ಪಾಡಿ ರಸ್ತೆಯ ರೈಲ್ವೇ ಅಂಡರ್‌ ಪ್ಯಾಸೇಜ್‌ನಲ್ಲಿ ನೀರು ತುಂಬಿ ವಾಹನ ಸಂಚಾರಕ್ಕೆ
ತೊಡಕಾಗಿದೆ.

ಕಡಲ್ಕೊರೆತ
ಮಂಗಲ್ಪಾಡಿ ಪಂಚಾಯತ್‌ನ ಪೆರಿಂಗಡಿಯಲ್ಲಿ ಕಡಲ್ಕೊರೆತದಿಂದ ಇಲ್ಲಿನ ರಸ್ತೆ ಬದಿ ಮತ್ತು ಕೆಲವು ತೆಂಗಿನ ಮರಗಳು ಸಮುದ್ರ ಪಾಲಾಗಿದೆ. ಅಲ್ಲದೆ ಕೆಲವು ಮನೆಗಳು ಕಡಲು ಪಾಲಾಗುವ ಭೀತಿಯಲ್ಲಿದೆ. ಕುಂಬಳೆ ಪೆರ್ವಾಡು ಕಡುಪ್ಪುರ ಎಂಬಲ್ಲಿ ಸಮುದ್ರ
ಕೊರೆತದಿಂದ ಹಲವಾರು ಮನೆಗಳು ಅಪಾಯದಂಚಿನಲ್ಲಿವೆ. ಇಲ್ಲಿ ಲಕ್ಷಗಟ್ಟಲೆ ವ್ಯಯಿಸಿ ನಿರ್ಮಿಸಿದ ತಡೆಗೋಡೆ ನೀರು ಪಾಲಾಗಿದೆ. ಮಂಗಲ್ಪಾಡಿಯ ಮೇಲಿನ ಸೋಂಕಾಲು ಪ್ರತಾಪ ನಗರ ರಸ್ತೆಗೆ ಪಕ್ಷದ ಚರಂಡಿಯ ನೀರು ಹರಿದು ಹೊಳೆಯಂತಾಗಿದೆ. ಇದರಿಂದ ಸಂಚಾರಕ್ಕೆ ಅಡ್ಡಿಯಾಗಿದೆ. ಇದೇ ರೀತಿ ಧಾರಾಕಾರ ಮಳೆ ಸುರಿದಲ್ಲಿ ಇನ್ನಷ್ಟು ಅನಾಹುತಗಳು
ಸಂಭವಿಸಲಿವೆ. ಜಿಲ್ಲಾಡಳಿತ ಸಂಭಾವ್ಯ ದುರಂತ ಸ್ಥಳಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಂಡಿದೆ.

ಟಾಪ್ ನ್ಯೂಸ್

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

Madikeri ವಿರಾಜಪೇಟೆ: ಡೆಂಗ್ಯೂ ಪ್ರಕರಣ ಹೆಚ್ಚಳ

7-kodagu

Madikeri: ಜು.1 ರಿಂದ ಭಾರಿ ವಾಹನಗಳ ಸಂಚಾರ ನಿಷೇಧ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Davanagere; Protest by BJP Zilla Raitamorcha condemning the price hike

Davanagere; ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾದಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.