heavy rain; ಕಾಸರಗೋಡು ಜಿಲ್ಲೆ: ಇಂದು ಶಾಲೆಗೆ ರಜೆ

ಶಾಲಾ ಆವರಣದಲ್ಲಿ ಮರ ಬಿದ್ದು ವಿದ್ಯಾರ್ಥಿನಿ ಸಾವು

Team Udayavani, Jul 4, 2023, 6:55 AM IST

heavy rain; ಕಾಸರಗೋಡು ಜಿಲ್ಲೆ: ಇಂದು ಶಾಲೆಗೆ ರಜೆ

ಕಾಸರಗೋಡು: ಜಿಲ್ಲೆಯಾದ್ಯಂತ ಸೋಮವಾರ ಉತ್ತಮ ಮಳೆಯಾಗಿದೆ. ರವಿವಾರದಿಂದ ಬಿರುಸಾಗಿ ಸುರಿಯುತ್ತಿರುವ ಮಳೆ ಸೋಮವಾರವೂ ಮುಂದುವರಿದಿದೆ.

ರವಿವಾರ ರಾತ್ರಿ ಎಡೆಬಿಡದೆ ಸುರಿದಿದ್ದು, ಸೋಮ ವಾರ ಬೆಳಗ್ಗಿನಿಂದ ಮತ್ತಷ್ಟು ಬಿರುಸು ಗೊಂಡಿದೆ. ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಜಿಲ್ಲೆಯಲ್ಲಿ ಆರೆಂಜ್‌ ಅಲರ್ಟ್‌ ಇದ್ದು, ಮುನ್ನಚ್ಚರಿಕೆ ಕ್ರಮ ವಾಗಿ ಜಿಲ್ಲಾಡಳಿತವು ಜು. 4ರಂದು ಅಂಗನವಾಡಿಯಿಂದ ಎಸೆಸೆಲ್ಸಿ ತನಕದ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿದೆ.

ಪೂರ್ತಿ ಕೇರಳ ರಾಜ್ಯದಲ್ಲಿ ಭಾರೀ ಮಳೆ ಸುರಿಯುವ ಸಂಭವ ಇರುವು ದಾಗಿ ಹವಾಮಾನ ಇಲಾಖೆ ತಿಳಿಸಿದ್ದು, ಸಮುದ್ರ ಪ್ರಕ್ಷುಬ್ಧವಾಗಿರಲಿದೆ.

ರಭಸ ವಾಗಿ ಗಾಳಿ ಕೂಡ ಬೀಸುವ ಸಾಧ್ಯತೆ ಇದ್ದು, ಅಪಾಯಗಳನ್ನು ಎದುರಿಸಲು ಸಜ್ಜಾಗಿರುವಂತೆ ಹವಾಮಾನ ಇಲಾಖೆ ರಾಜ್ಯಕ್ಕೆ ಸೂಚನೆ ರವಾನಿಸಿದೆ. ಗುರು ವಾರದ ಬಳಿಕ ಮಳೆ ಪ್ರಮಾಣ ನಿಧಾನಕ್ಕೆ ಕಡಿಮೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಕೂಡ್ಲು: 12 ಸೆಂ.ಮೀ. ಮಳೆ
ಕೇರಳ ರಾಜ್ಯದಲ್ಲಿಯೇ ಅತ್ಯಧಿಕ ಮಳೆ ಕಾಸರಗೋಡು ಜಿಲ್ಲೆಯ ಕೂಡ್ಲುವಿನಲ್ಲಿ (12 ಸೆಂ.ಮೀ.) ಸುರಿದಿದೆ.

ಶಾಲಾ ಆವರಣದಲ್ಲಿ ಮರ ಬಿದ್ದು ವಿದ್ಯಾರ್ಥಿನಿ ಸಾವು
ಕುಂಬಳೆ: ಸೋಮವಾರ ಸಂಜೆ ಬೀಸಿದ ಗಾಳಿ ಮಳೆಗೆ ಅಂಗಡಿಮೊಗರು ಸರಕಾರಿ ಹೈಯರ್‌ ಸೆಕೆಂಡರಿ ಶಾಲೆ ಪರಿಸರದಲ್ಲಿದ್ದ ಮರವೊಂದು ಮೈಮೇಲೆ ಬಿದ್ದು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.

6ನೇ ತರಗತಿ ವಿದ್ಯಾರ್ಥಿನಿ ಪರ್ಲಾಡ ಬಿ.ಎಂ. ಯೂಸುಫ್‌ ಅವರ ಪುತ್ರಿ ಆಯಿಷತ್‌ ಮಿನ್ಹಾ (11) ಮೃತ ಬಾಲಕಿ. ಸಂಜೆ 4ಕ್ಕೆ ಶಾಲೆ ಬಿಡುವ ವೇಳೆಗೆ ಜೋರಾಗಿ ಬೀಸಿದ ಗಾಳಿ ಮಳೆಗೆ ಬೃಹತ್‌ ಮರ ಉರುಳಿದ್ದು, ಅದೇ ದಾರಿಯಾಗಿ ಸಹಪಾಠಿಯ ಜತೆ ನಡೆದು ಹೋಗುತ್ತಿದ್ದ ಬಾಲಕಿಯ ಮೇಲೆಯೇ ಬಿದ್ದಿತ್ತು.

ರಿಫಾನಾ ಎಂಬ ವಿದ್ಯಾರ್ಥಿನಿಯೂ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾ ಗಿದೆ. ಶಾಲಾ ಅವರಣದಲ್ಲಿ ಹಲವು ಮರಗಳಿದ್ದು ಅವುಗಳ ಸಮೀಪವೇ ವಿದ್ಯುತ್‌ ತಂತಿಗಳೂ ಹಾದು ಹೋಗಿವೆ. ಅದೃಷ್ಟವಶಾತ್‌ ಮರದ ಕೊಂಬೆಗಳು ಅದರ ಮೇಲೆ ಬೀಳದ ಕಾರಣ ಸಂಭಾವ್ಯ ದುರಂತ ತಪ್ಪಿದೆ. ಈ ವೇಳೆ ಕಂಬದಲ್ಲಿ ವಿದ್ಯುತ್‌ ಪ್ರವಹಿಸುತ್ತಿದ್ದುದನ್ನು ನೋಡಿದ ಅಧ್ಯಾಪಕರು ಕೆಇಬಿಗೆ ಮಾಹಿತಿ ನೀಡಿದ್ದು, ವಿದ್ಯುತ್‌ ಪ್ರವಾಹವನ್ನು ಕಡಿತಗೊಳಿಸಿದರು. ಬಿ.ಎಂ. ಯೂಸುಫ್‌ ಅವರ ಮೂವರು ಮಕ್ಕಳಲ್ಲಿ ಆಯಿಷತ್‌ ಕೊನೆಯವಳಾಗಿದ್ದಳು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Arrested: ಪತ್ನಿಯ ಕೊ*ಲೆಗೆ ಯತ್ನ; ಪತಿಯ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

ಕಾಸರಗೋಡು ರೈಲು ನಿಲ್ದಾಣದ ಕನ್ನಡ ನಾಮಫಲಕ ಮತ್ತೆ ಅಳವಡಿಕೆಗೆ ಆಗ್ರಹ

Kasaragod ರೈಲು ನಿಲ್ದಾಣದ ಕನ್ನಡ ನಾಮಫಲಕ ಮತ್ತೆ ಅಳವಡಿಕೆಗೆ ಆಗ್ರಹ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.