ಉತ್ತಮ ಸಂಸ್ಕಾರದಿಂದ ಉನ್ನತಿ ಸಾಧ್ಯ: ಡಾ| ಬೇ.ಸಿ. ಗೋಪಾಲಕೃಷ್ಣ ಭಟ್‌


Team Udayavani, Mar 20, 2018, 10:50 AM IST

GopalaKrishna-Bhat-19-3.jpg

ಕುಂಬಳೆ: ಉತ್ತಮ ಗುಣನಡತೆ, ಜ್ಞಾನದಿಂದ ಜೀವನದಲ್ಲಿ ಉನ್ನತಿ ಸಾಧ್ಯ. ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಲ್ಲುವ ಸಾಮಾರ್ಥ್ಯ ಕೆಲವೇ ಜನರಿಗೆ ಇರುತ್ತದೆ. ಇದರಲ್ಲಿ ನಾರಾಯಣ ರಾವ್‌ ಅವರು ತಮ್ಮ ಹಾಸ್ಯ ಪ್ರಜ್ಞೆಯಿಂದಲೇ ಇಂತಹ ಸವಾಲುಗಳನ್ನು ಎದುರಿಸಿ ವಿಜಯಿಯಾಗಿದ್ದಾರೆ ಎಂದು ಹಿರಿಯ ಸಾಹಿತಿ ನಿವೃತ್ತ ಪ್ರಾಂಶುಪಾಲರಾದ ಡಾ| ಬೇ.ಸಿ. ಗೋಪಾಲಕೃಷ್ಣ ಭಟ್‌ ನುಡಿದರು. ಪೈವಳಿಕೆನಗರ ಸರಕಾರಿ ಹೈಯರ್‌ ಸೆಕೆಂಡರಿ ವಿದ್ಯಾಲಯದಿಂದ ನಿವೃತ್ತರಾಗುತ್ತಿರುವ ಹೈ‌ಯರ್‌ ಸೆಕೆಂಡರಿ ವಿಭಾಗದ ನಾರಾಯಣ ರಾವ್‌ ಅವರನ್ನು ಅಭಿನಂದಿಸಿ ಮಾತನಾಡಿದರು.

ಕುಂಬಳೆಯ ಹೋಲಿ ಫ್ಯಾಮಿಲಿ ಶಾಲೆ ಹಾಗೂ ಏತಡ್ಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು ಪೂರೈಸಿ, ಅಗ‌ಲ್ಪಾಡಿ ಹೆ„ಸ್ಕೂಲಿನಲ್ಲಿ ಪ್ರೌಢ ಶಿಕ್ಷಣ ಪಡೆದು, ಕಾಸರಗೋಡು ಸರಕಾರಿ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದರು. ಅಧ್ಯಾಪನ ವೃತ್ತಿಯತ್ತ ಆಕರ್ಷಿತರಾದ ಅವರು ಕಲ್ಲಿಕೋಟೆ ವಿಶ್ವವಿದ್ಯಾಲಯದ ಶಿಕ್ಷಕ ತರಬೇತಿ ಕೇಂದ್ರದಲ್ಲಿ ತರಬೇತಿ ಪೂರ್ಣಗೊಳಿಸಿ ಕುಂಡಂಕುಳಿ ಶಾಲೆಯಲ್ಲಿ ತಾತ್ಕಾಲಿಕ ಶಿಕ್ಷಕರಾಗಿ ತಮ್ಮ ಔದ್ಯೋಗಿಕ ಜೀವನಕ್ಕೆ ಕಾಲಿರಿಸಿದರು. ಮುಂದೆ ಪಾಂಡಿ, ಅಡೂರು, ಅಂಗಡಿಮೊಗರು ಶಾಲೆಗಳಲ್ಲಿ ತಾತ್ಕಾಲಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿ 1998ರಲ್ಲಿ ಪಡ್ರೆ ಹೆ„ಸ್ಕೂಲಲ್ಲಿ ಶಿಕ್ಷಕರಾಗಿ ಸರಕಾರಿ ಸೇವೆಗೆ ಪಾದಾರ್ಪಣೆ ಮಾಡಿದರು. 2006ರಲ್ಲಿ ಅದೇ ಶಾಲೆಯಲ್ಲಿ ಇಲಾಖಾ ವರ್ಗಾವಣೆಯ ಮುಖಾಂತರ ಹೈಯರ್‌ ಸೆಕೆಂಡರಿ ವಿಭಾಗದ ಉಪನ್ಯಾಸಕರಾಗಿ ಭಡ್ತಿ ಹೊಂದಿ 2013ರಲ್ಲಿ ಪೈವಳಿಕೆ ನಗರ ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಗೆ ವರ್ಗಾವಣೆಗೊಂಡರು. ಓದು ಮತ್ತು ಯಕ್ಷಗಾನದಲ್ಲಿ ವಿಶೇಷ ಒಲವು ಹೊಂದಿರುವ ನಾರಾಯಣ ರಾವ್‌ ಡಿ.ಪಿ.ಇ.ಪಿ.ಯಿಂದ ತೊಡಗಿ ಎಸ್‌.ಎಸ್‌.ಎ. ವರೆಗೆ ಕನ್ನಡ ಪಠ್ಯಪುಸ್ತಕ ಸಮಿತಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಪೂರ್ವ ಸೇವೆ ಸಲ್ಲಿಸಿದರು. ಪಡ್ರೆ ಶಾಲೆಯಲ್ಲಿ ಸುಮಾರು 5 ವರ್ಷಗಳ ಕಾಲ ಪ್ರಭಾರ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿರುವರು. 

ಅಭಿನಂದನ ಸಮಾರಂಭವನ್ನು ಪ್ರಾಂಶುಪಾಲೆ ವಿಶಾಲಾಕ್ಷಿ ಉದ್ಘಾಟಿಸಿದರು. ಮುಖ್ಯೋಪಾಧ್ಯಾಯಿನಿ ಶ್ಯಾಮಲಾ ಪಿ. ಅಧ್ಯಕ್ಷತೆ ವಹಿಸಿದರು. ಇದೇ ಸಂದರ್ಭದಲ್ಲಿ ಪೈವಳಿಕೆ ನಗರ ಶಾಲೆಯಲ್ಲಿ ಕಳೆದ 14 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು ಕಲ್ಲಿಕೋಟೆಗೆ ವರ್ಗಾವಣೆಗೊಳ್ಳುತ್ತಿರುವ ಶಿಕ್ಷಕ ಸುನೀಶ್‌ ಕುಮಾರ್‌ ತಡತ್ತಿಲ್‌ ಅವರನ್ನು ಸಮಾರಂಭದಲ್ಲಿ ಶಾಲು ಹೊದೆಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. 


ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹೀಂ ಪಾವಲುಕೋಡಿ, ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಪಿ. ಅಬ್ದುಲ್ಲ ಹಾಜಿ, ನಿವೃತ್ತ ಶಿಕ್ಷಣ ಉಪನಿರ್ದೇಶಕರಾದ ಶ್ರೀನಿವಾಸ ಕೆ., ನಿವೃತ್ತ ಶಿಕ್ಷಕ ರತ್ನಕುಮಾರ್‌, ಮಾಜಿ ಪಿಟಿಎ ಅಧ್ಯಕ್ಷ ಲಾರೆನ್ಸ್‌ ಡಿ’ಸೋಜ ಶುಭಾಶಂಸನೆಗೈದರು. ಪಿಟಿಎ ಉಪಾಧ್ಯಕ್ಷರಾದ ರಮೇಶ್‌ ಪೈವಳಿಕೆ, ಕ್ರೆಸೆಂಟ್‌ ನ್ಪೋರ್ಟ್ಸ್ ಕ್ಲಬ್‌ನ ಅಬ್ದುಲ್‌ ರಹಿಮಾನ್‌, ವೆಂಕಟರಮಣ ನಾಯಕ್‌, ಕುಞಿಕೃಷ್ಣನ್‌ ಉಪಸ್ಥಿತರಿದ್ದರು. ಶ್ರದ್ಧಾ ಎನ್‌. ಭಟ್‌ ಪ್ರಾರ್ಥನೆ ಹಾಡಿದರು. ಹೈಯರ್‌ ಸೆಕೆಂಡರಿ ವಿಭಾಗದ ವಿಶ್ವನಾಥ ಕುಂಬಳೆ ಸ್ವಾಗತಿಸಿದರು, ಎಸ್‌ಆರ್‌ಜಿ ಸಂಚಾಲಕ ರವೀಂದ್ರನಾಥ್‌ ಕೆ.ಆರ್‌. ವಂದಿಸಿದರು. ಶಾಲಾ ನೌಕರರ ಸಂಘದ ಕಷ್ಣಮೂರ್ತಿ ಎಂ.ಎಸ್‌.
ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

Untitled-1

Kasaragod ಅಪರಾಧ ಸುದ್ದಿಗಳು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.