ಭೂಕುಸಿತಕ್ಕೆ ಮಾನವ ಹಸ್ತಕ್ಷೇಪವೇ ಕಾರಣ: ಭೂ ವಿಜ್ಞಾನಿಗಳ ಅಭಿಪ್ರಾಯ


Team Udayavani, Sep 11, 2019, 5:15 AM IST

t-49

ಬ್ರಹ್ಮಗಿರಿ ಬೆಟ್ಟಗಳಲ್ಲಿ ಕಾಣಿಸಿಕೊಂಡಿರುವ ಬಿರುಕನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಸಂಭವಿಸಿರುವ ಭೂಕುಸಿತಕ್ಕೆ ಮಾನವ ಹಸ್ತಕ್ಷೇಪ ಹಾಗೂ ಅವೈಜ್ಞಾನಿಕ ಕಾಮಗಾರಿಗಳೇ ಕಾರಣ ಎಂದು ಭೂ ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ಆಗಸ್ಟ್‌ ತಿಂಗಳ ಭಾರೀ ಮಳೆಗೆ ಭಾಗಮಂಡಲ ಸಮೀಪದ ಕೋರಂಗಾಲ, ವೀರಾಜಪೇಟೆ ಸಮೀಪದ ತೋರಾ ಗ್ರಾಮಗಳಲ್ಲಿ ಭೂಕುಸಿತ ಸಂಭವಿಸಿ 15 ಮಂದಿ ಭೂ ಸಮಾಧಿಯಾಗಿದ್ದರೆ, ವೀರಾಜ ಪೇಟೆಯ ಮಲೆತಿರಿಕೆ ಬೆಟ್ಟ ಹಾಗೂ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟಗಳಲ್ಲಿ ಭಾರೀ ಬಿರುಕು ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು. ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರ ಸೂಚನೆಯಂತೆ ಪರಿಶೀಲನೆ ನಡೆಸಿದ ಭೂ ಸರ್ವೇಕ್ಷಣಾ ಇಲಾಖೆಯ ವಿಜ್ಞಾನಿಗಳಾದ ಸುನಂದನ್‌ ಬಸು ಮತ್ತು ಕಪಿಲ್‌ಸಿಂಗ್‌ ಅವರು ಸ್ಥಳ ಪರಿಶೀಲಿಸಿ 27 ಪುಟಗಳ ವರದಿಯನ್ನು ಜಿಲ್ಲಾಡಳಿತಕ್ಕೆ ಒಪ್ಪಿಸಿದ್ದಾರೆ.

ವೀರಾಜಪೇಟೆಯ ಮಲೆತಿರಿಕೆ ಬೆಟ್ಟದಲ್ಲಿ ಮನೆಗಳ ನಿರ್ಮಾಣದ ಸಂದರ್ಭ ಯಾವುದೇ ತಡೆಗಳನ್ನು ನಿರ್ಮಿಸದೆ ಯದ್ವಾತದ್ವಾ ಮನೆ ಗಳನ್ನು ನಿರ್ಮಿಸಲಾಗಿದ್ದು, ಇದರಿಂದಾಗಿ ಬೆಟ್ಟದಲ್ಲಿ ಬಿರುಕು ಮತ್ತು ಕುಸಿತ ಸಂಭವಿಸಿದೆ. ಈ ಬೆಟ್ಟದಲ್ಲಿ ಬಿರುಕುಗಳನ್ನು ಅಗತ್ಯ ಸಾಮಗ್ರಿಗ ಳನ್ನು ಬಳಸಿ ಮುಚ್ಚಬೇಕಾಗಿದ್ದು, ಇದರಿಂದ ಆ ಸ್ಥಳದ ತೇವಾಂಶ ಕಡಿಮೆ
ಯಾಗಲಿದೆ. ಮಳೆಗಾಲ ಮುಗಿವ ತನಕ ಆ ಪ್ರದೇಶದ ಕೆಲವು ಮನೆಗಳನ್ನು ತೆರವುಗೊಳಿಸುವುದು ಅನಿವಾರ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ವರದಿಯಲ್ಲೇನಿದೆ?
ಭೂಕುಸಿತ ಮತ್ತು ಭೂಮಿಯಲ್ಲಿನ ಬಿರುಕಿಗೆ ಮಾನವ ಹಸ್ತಕ್ಷೇಪವೇ ಪ್ರಮುಖ ಕಾರಣ ಎಂದು ವರದಿ ಉಲ್ಲೇಖೀಸಿದೆ. ಅದರಲ್ಲೂ ಅರಣ್ಯ ಇಲಾಖೆಯ ಅವೈಜ್ಞಾನಿಕ ಇಂಗುಗುಂಡಿ ನಿರ್ಮಾಣ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಬಿರುಕಿಗೆ ಕಾರಣ ಎಂದು ಬೊಟ್ಟು ಮಾಡಲಾಗಿದ್ದು, ವೀರಾಜಪೇಟೆಯ ತೋರ ಗ್ರಾಮದಲ್ಲಿ ಭೂಕುಸಿತಕ್ಕೆ ಅಲ್ಲಿನ ಕಲ್ಲುಗಣಿಗಾರಿಕೆ, ವೀರಾಜಪೇಟೆಯ ಮಲೆತಿರಿಕೆ ಬೆಟ್ಟದ ಬಿರುಕಿಗೆ ಬೆಟ್ಟದಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿರುವ ಮನೆಗಳು ಕಾರಣ ಎಂದು ಗುರುತಿಸಲಾಗಿದೆ.

ಇಂಗು ಗುಂಡಿಗಳನ್ನು ಕಂದಕದ ರೀತಿಯಲ್ಲಿ ಕೊರೆದಿರುವ ಕಾರಣ ಮಳೆ ನೀರು ಸರಾಗವಾಗಿ ಹರಿಯುವುದಕ್ಕೆ ತಡೆಯುಂಟಾಗಿ ಆ ನೀರು ಭೂಮಿಯೊಳಗೆ ಅತಿಯಾಗಿ ಇಂಗಿ ಬಿರುಕು ಉಂಟಾಗಿದೆ ಎಂದು ವಿಶ್ಲೇಷಿಸಲಾಗಿದ್ದರೆ, ರಸ್ತೆ ವಿಸ್ತರಣೆ ಸಂದರ್ಭ ಇಳಿಜಾರನ್ನು ಸಮತಟ್ಟುಗೊಳಿಸುವ ಸಂದರ್ಭವೂ ಬೆಟ್ಟಕ್ಕೆ ಧಕ್ಕೆಯಾಗಿರುವುದು ಬಿರುಕಿಗೆ ಕಾರಣ ಎನ್ನಲಾಗಿದೆ.

ಕೋರಂಗಾಗಲ ಗ್ರಾಮದಲ್ಲಿನ ಭೂಕುಸಿತಕ್ಕೆ ಅಲ್ಲಿ ಮನೆಗಳನ್ನು ನಿರ್ಮಿಸುವ ಸಂದರ್ಭ ಇಳಿಜಾರು ಪ್ರದೇಶವನ್ನು ಸಮತಟ್ಟು ಮಾಡಿರುವುದು ಕಾರಣವೆಂದು ಬೊಟ್ಟು ಮಾಡಲಾಗಿದ್ದು, ಇಂತಹ ತೀರಾ ಇಳಿಜಾರು ಪ್ರದೇಶದಲ್ಲಿ ಭೂಮಿಯನ್ನು ಗಟ್ಟಿಗೊಳಿಸಬಲ್ಲ ಸಸ್ಯಗಳನ್ನು ಸಮೃದ್ಧವಾಗಿ ಬೆಳೆಸಬೇಕು ಎಂದು ಸಲಹೆ ಮಾಡಲಾಗಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.