ಕಾಸರಗೋಡು ಲೋಕಸಭೆ ಕ್ಷೇತ್ರದಲ್ಲಿ ಶೇ. 80.57 ಮತದಾನ


Team Udayavani, Apr 26, 2019, 6:10 AM IST

election

ಕಾಸರಗೋಡು: 17ನೇ ಲೋಕಸಭೆ ಚುನಾವಣೆ ನಡೆದ ವೇಳೆ ಕಾಸರಗೋಡು ಲೋಕಸಭೆ ಕ್ಷೇತ್ರದಲ್ಲಿ ಒಟ್ಟು ಶೇ. 80.57 ಮತದಾನ ನಡೆದಿದೆ.

7 ವಿಧಾನಸಭೆ ಕ್ಷೇತ್ರಗಳು ಸೇರಿರುವ ಕಾಸರ ಗೋಡು ಲೋಕಸಭೆ ಕ್ಷೇತ್ರದಲ್ಲಿರುವ ಒಟ್ಟು 13,60,827 ಮತದಾತರಲ್ಲಿ 10,96,470 ಮಂದಿ ಮತಚಲಾವಣೆ ನಡೆಸಿದ್ದಾರೆ. ಇವರಲ್ಲಿ 5,07,594 ಮಂದಿ ಪುರುಷರು, 5,88,875 ಮಹಿಳೆಯರು, ಒಬ್ಬ ಟ್ರಾನ್ಸ್‌ ಜೆಂಡರ್‌ ಮತದಾನ ಮಾಡಿದ್ದಾರೆ.

6,56,433 ಮಂದಿ ಪುರುಷರು, 7,04,392 ಮಹಿಳೆಯರು ಮತದಾತರ ಪಟ್ಟಿಯಲ್ಲಿದ್ದಾರೆ. ಮತದಾನ ನಡೆಸಿದವರಲ್ಲಿ ಮಹಿಳೆಯರು ಅಗ್ರ ಸ್ಥಾನದಲ್ಲಿದ್ದಾರೆ. 2014ರಲ್ಲಿ ನಡೆದಿದ್ದ ಲೋಕಸಭೆ ಚುನಾವಣೆಯಲ್ಲಿನ ಮತದಾನವನ್ನು ಹೋಲಿಸಿದರೆ, ಈ ಬಾರಿ ಮತದಾನ ನಡೆಸಿದವರ ಸಂಖ್ಯೆಯಲ್ಲಿ ಹೆಚ್ಚಳವುಂಟಾಗಿದೆ. ಕಳೆದ ಬಾರಿ ಶೇ. 78.49 ಮತದಾನ ಕಾಸರಗೋಡು ಲೋಕಸಭೆ ಕ್ಷೇತ್ರದಲ್ಲಿ ನಡೆದಿತ್ತು. ಪಯ್ಯೂನ್ನೂರು ಲೋಕಸಭೆ ಕ್ಷೇತ್ರದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮತದಾನ ನಡೆದಿದೆ. ಇಲ್ಲಿ ಶೇ. 83.31 ಮತ ಚಲಾವಣೆಯಾಗಿದೆ. ಇಲ್ಲಿ ಒಟ್ಟು ಇರುವ 1,75,116 ಮತದಾರರಲ್ಲಿ 1,50,358 ಮಂದಿ ಮತದಾನ ಮಾಡಿದ್ದಾರೆ. ಮಂಜೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾನ ನಡೆದಿದೆ. ಇಲ್ಲಿ ಶೇ. 75.87 ಮತದಾನ ಜರಗಿದೆ. ಕಾಸರಗೋಡು ವಿಧಾನಸಭೆ ಕ್ಷೇತ್ರದಲ್ಲಿ ಶೇ. 76.32, ಉದುಮದಲ್ಲಿ ಶೇ. 79.33, ಕಾಂಞಂಗಾಡ್‌ನ‌ಲ್ಲಿ ಶೇ. 81.06, ತೃಕ್ಕ‌ರಿಪುರದಲ್ಲಿ ಶೇ. 83.46, ಕಲ್ಯಾಶೆÏàರಿಯಲ್ಲಿ ಶೇ. 83.06 ಮತದಾನ ನಡೆದಿದೆ.

1,317 ಮತಗಟ್ಟೆಗಳಲ್ಲಿ ಮತದಾನ ನಡೆದಿದೆ. ಬೆಳಗ್ಗೆ 7 ರಿಂದ ಸಂಜೆ 6 ಗಂಟೆ ವರೆಗೆ ಸಾಧಾರಣ ಗತಿಯಲ್ಲಿ ಮತಚಲಾವಣೆ ಪ್ರಕ್ರಿಯೆ ಜರುಗಿತ್ತು. ಕೆಲವೆಡೆ ನಂತರವೂ ಬೇರೆ ಬೇರೆ ಕಾರಣಗಳಿಂದ ಮತದಾನ ರಾತ್ರಿ ವರೆಗೂ ಮುಂದುವರಿದಿತ್ತು. ಚುನಾವಣ ಕರ್ತವ್ಯಕ್ಕೆ 3,827 ಸರಕಾರಿ ಸಿಬಂದಿಯನ್ನು, 668 ರಿಸರ್ವ್‌ ಸಿಬಂದಿಯನ್ನು ನೇಮಿಸಲಾಗಿತ್ತು. ಸಂರಕ್ಷಣೆ ನಿಟ್ಟಿನಲ್ಲಿ 2641 ಪೊಲೀಸರನ್ನು ನೇಮಕ ಮಾಡಲಾಗಿತ್ತು.

ಪಡನ್ನಕ್ಕಾಡ್‌ ಸ್ಟ್ರಾಂಗ್‌ ರೂಂ
ಪಡನ್ನಕ್ಕಾಡ್‌ ನೆಹರೂ ಕಲಾ-ವಿಜ್ಞಾನ ಕಾಲೇಜು ಜಿಲ್ಲೆಯ ಮತಗಣನೆ ಕೇಂದ್ರವಾಗಿದೆ. ಇಲ್ಲಿನ 15 ಸ್ಟ್ರಾಂಗ್‌ ರೂಂಗಳಲ್ಲಿ 1,317 ಮತಗಟ್ಟೆಗಳ ವಿವಿಪ್ಯಾಟ್‌ ಸಹಿತದ ಮತಯಂತ್ರಗಳನ್ನು ದಾಸ್ತಾನು ಇರಿಸಲಾಗಿದೆ. ಸ್ಟ್ರಾಂಗ್‌ ರೂಂ ಗಳಿಗೆ ಸೀಲ್‌ ಹಾಕಿ ಕೀಲಿಕೈ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಮತಗಣನೆ ಮೇ 23ರಂದು ನಡೆಯಲಿದ್ದು, ಅಲ್ಲಿ ವರೆಗೆ ಸುರಕ್ಷೆ ವ್ಯವಸ್ಥೆಗಳು ಮುಂದುವರಿಯಲಿವೆ.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.