February; ಚೊಚ್ಚಲ ಎಂಡೋಸಲ್ಫಾನ್‌ ಪುನರ್ವಸತಿ ಗ್ರಾಮ ಮೊದಲ ಹಂತದ ಉದ್ಘಾಟನೆ

ಅಗತ್ಯ ಚಿಕಿತ್ಸಕರ ಹುದ್ದೆಗಳನ್ನು ಗುರುತಿಸಿ ಜಿಲ್ಲಾ ಪಂಚಾಯತ್‌ ಸಹಕಾರದೊಂದಿಗೆ ನೇಮಕ

Team Udayavani, Jan 14, 2024, 11:26 PM IST

February; ಚೊಚ್ಚಲ ಎಂಡೋಸಲ್ಫಾನ್‌ ಪುನರ್ವಸತಿ ಗ್ರಾಮ ಮೊದಲ ಹಂತದ ಉದ್ಘಾಟನೆ

ಕಾಸರಗೋಡು: ಮುಳಿಯಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಎಂಡೋಸಲ್ಫಾನ್‌ ಪುನರ್ವಸತಿ ಗ್ರಾಮದ ಮೊದಲ ಹಂತದ ಕಾಮಗಾರಿ ಜನವರಿ 31ರೊಳಗೆ ಪೂರ್ಣಗೊಳ್ಳಲಿದೆ ಎಂದು ಸಾಮಾಜಿಕ ನ್ಯಾಯ ಇಲಾಖೆ ನಿರ್ದೇಶಕ ಎಚ್‌. ದಿನೇಶನ್‌ ತಿಳಿಸಿದ್ದಾರೆ.

ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಎಂಡೋಸಲ್ಫಾನ್‌ ಪುನರ್ವಸತಿ ಗ್ರಾಮ ನಿರ್ಮಾಣದ ಪ್ರಗತಿ ಪರಿಶೀಲನ ಸಭೆಯಲ್ಲಿ ಅವರು ಮಾತನಾಡಿದರು. ಫೆಬ್ರವರಿ ಎರಡನೇ ವಾರದೊಳಗೆ ಚಿಕಿತ್ಸಾ ವಿಧಾನಗಳಿಗೆ ಅಗತ್ಯ ಸೌಕರ್ಯ ಹಾಗೂ ಪೀಠೊಪಕರಣಗಳನ್ನು ಸಿದ್ಧಪಡಿಸಿ ಪೂರ್ಣ ಪ್ರಮಾಣದಲ್ಲಿ ಕಾರ್ಯಗತಗೊಳಿಸಿ ಉದ್ಘಾಟನೆಗೆ ಸಿದ್ಧಗೊಳಿಸಲಾಗುವುದು ಎಂದರು.

ಅಗತ್ಯ ಚಿಕಿತ್ಸಕರ ಹುದ್ದೆ ಗಳನ್ನು ಗುರುತಿಸಿ ಜಿಲ್ಲಾ ಪಂಚಾಯತ್‌ ಸಹಕಾರದೊಂದಿಗೆ ನೇಮಕ ಮಾಡಲಾಗುವುದು ಎಂದರು.

ಕ್ಲಿನಿಕಲ್‌ ಸೈಕಾಲಜಿ ಮತ್ತು ಹೈಡ್ರೋಥೆರಫಿ ಬ್ಲಾಕ್‌ಗಳ ನಿರ್ಮಾಣವು ಮೊದಲ ಹಂತದಲ್ಲಿ ಪೂರ್ಣಗೊಳ್ಳಲಿದ್ದು, ಇದು 5 ಕೋಟಿ ರೂ. ಹೂಡಿಕೆಯಲ್ಲಿ ಪೂರ್ಣಗೊಳ್ಳಲಿದೆ. ಎರಡನೇ ಹಂತದ ಪ್ರಸ್ತಾವನೆಯನ್ನು ಪರಿಶೀಲಿಸ ಲಾಗುತ್ತಿದೆ ಎಂದವರು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ  ಅಧ್ಯಕ್ಷತೆ ವಹಿಸಿದ್ದು ಹೆಚ್ಚಿನ ಚಿಕಿತ್ಸಾ ಸೌಲಭ್ಯಗಳನ್ನು ಸ್ಥಾಪಿಸುವ ಬಗ್ಗೆ ಪರಿಶೀ ಲಿಸಲಾಗುವುದೆಂದು ತಿಳಿಸಿದರು. ಸಾಮಾಜಿಕ ನ್ಯಾಯ ಇಲಾಖೆಯ ಹೆಚ್ಚುವರಿ ನಿರ್ದೇಶಕ ಎಸ್‌.ಜಲಜಾ, ನಿಷ್ಮಾರ್‌ ಕಾರ್ಯನಿರ್ವಾಹಕ ನಿರ್ದೇಶಕ ಸಿ. ಚಂದ್ರಬಾಬು ಹಾಗೂ ಜಿಲ್ಲಾ ಸಾಮಾಜಿಕ ನ್ಯಾಯ ಅಧಿಕಾರಿ ಆರ್ಯ ಪಿ.ರಾಜ್‌ ಮಾತನಾಡಿದರು. ಕೇರಳ ಸಾಮಾಜಿಕ ಭದ್ರತಾ ಆಯೋಗದ ಪ್ರತಿನಿಧಿಗಳು, ಯುಎಲ್‌ಸಿಎಲ್‌ ಪ್ರತಿನಿಧಿಗಳು ಭಾಗವಹಿಸಿದ್ದರು.

ಎಂಡೋಸಲ್ಫಾನ್‌
ಪುನರ್ವಸತಿ ಗ್ರಾಮಕ್ಕೆ ಭೇಟಿ
ನಿರ್ಮಾಣ ಹಂತದಲ್ಲಿರುವ ಮುಳಿಯಾರು ಎಂಡೋಸಲ್ಫಾನ್‌ ಪುನರ್ವಸತಿ ಗ್ರಾಮಕ್ಕೆ ಸಾಮಾಜಿಕ ನ್ಯಾಯ ಇಲಾಖೆ ನಿರ್ದೇಶಕ ಎಚ್‌. ದಿನೇಶನ್‌, ಸಾಮಾಜಿಕ ನ್ಯಾಯ ಹೆಚ್ಚುವರಿ ನಿರ್ದೇಶಕಿ ಎಸ್‌. ಜಲಜಾ, ಜಿಲ್ಲಾ ಸಾಮಾಜಿಕ ನ್ಯಾಯ ಅಧಿಕಾರಿ ಆರ್ಯ ಪಿ. ರಾಜ್‌, ಕೆಎಸ್‌ಎಸ್‌ಎ ಪ್ರತಿನಿಧಿಗಳು ಮತ್ತು ನಿಷ್ಮಾರ್‌ ಪ್ರತಿನಿಧಿಗಳು ಭೇಟಿ ನೀಡಿದರು.

ಆಯ್ದ ಕುಟುಂಬಗಳಿಗೆ ಮನೆ ವಿತರಣೆ
1980ರಿಂದ 1999ರ ವರೆಗೆ ಕಾಸರಗೋಡು ಜಿಲ್ಲೆಯ ವಿವಿಧೆಡೆ ಸರಕಾರಿ ಗೇರು ತೋಟಗಳಿಗೆ ಹೆಲಿಕಾಪ್ಟರ್‌ ಮೂಲಕ ಎಂಡೋಸಲ್ಫಾನ್‌ ಸಿಂಪಡಿಸಿದ ಪರಿಣಾಮವಾಗಿ ನೂರಾರು ಮಂದಿ ಸಾವಿಗೀಡಾಗಿದ್ದರು, ಹಲವು ಪೀಳಿಗೆಗಳ ಸಾವಿರಾರು ಮಂದಿ ವಿವಿಧ ರೋಗಗಳಿಗೆ ತುತ್ತಾಗಿ ನರಕಯಾತನೆ ಅನುಭವಿಸುತ್ತಿದ್ದಾರೆ. ಇಂಥವರಿಗೆ ಪುನರ್ವಸತಿ ಕಲ್ಪಿಸಲು ಸುಮಾರು 100ರಷ್ಟು ಮನೆಗಳನ್ನು ನಿರ್ಮಿಸುವ ಯೋಜನೆ ಇದಾಗಿದ್ದು, ಆ ಮನೆಗಳ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಪ್ರಥಮ ಹಂತದ ಉದ್ಘಾಟನೆ ಮುಂದಿನ ತಿಂಗಳು ನಡೆಯಲಿದೆ. ಆಯ್ದ ಎಂಡೋಪೀಡಿತರಿಗೆ ಈ ಮನೆಗಳನ್ನು ವಿತರಿಸಲಾಗುವುದು. ಜಿಲ್ಲೆಯಲ್ಲಿ ಪ್ರಥಮವಾಗಿ ಇಂತಹ ಪುನರ್ವಸತಿ ಕಾಮಗಾರಿ ನಡೆದಿದೆ. ಎಂಡೋಪೀಡಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂತ್ರಸ್ತರಿಗೆ ಡೇಕೇರ್‌ ಕೇಂದ್ರಗಳು ಇವೆ; ಆದರೆ ಪೂರ್ಣ ಪ್ರಮಾಣದ ಪುನರ್ವಸತಿ ಗ್ರಾಮದ ಪರಿಕಲ್ಪನೆ ಇದೇ ಮೊದಲನೆಯದು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Arrested: ಪತ್ನಿಯ ಕೊ*ಲೆಗೆ ಯತ್ನ; ಪತಿಯ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

ಕಾಸರಗೋಡು ರೈಲು ನಿಲ್ದಾಣದ ಕನ್ನಡ ನಾಮಫಲಕ ಮತ್ತೆ ಅಳವಡಿಕೆಗೆ ಆಗ್ರಹ

Kasaragod ರೈಲು ನಿಲ್ದಾಣದ ಕನ್ನಡ ನಾಮಫಲಕ ಮತ್ತೆ ಅಳವಡಿಕೆಗೆ ಆಗ್ರಹ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.