“ಜೀವನ ಪದ್ಧತಿ ಹಿರಿಮೆಯಿಂದ ಭಾರತ ವಿಶ್ವಗುರು’


Team Udayavani, Apr 4, 2019, 6:30 AM IST

jeevana-paddati

ಮಾನ್ಯ: ಭಾರತೀಯ ಸಂಸ್ಕೃತಿ, ಜೀವನ ಪದ್ಧತಿಯ ಹಿರಿಮೆ ಜಾಗತಿಕ ಗುರುವಾಗುವಲ್ಲಿ ಬೆನ್ನೆಲುಬಾಗಿದೆ. ಈ ನಿಟ್ಟಿನಲ್ಲಿ ಅಂತಹ ಸಂಸ್ಕೃತಿಯನ್ನು ಮುನ್ನಡೆಸುವಲ್ಲಿ ಯುವ ಸಮೂಹ ಕಾರ್ಯಪ್ರವೃತ್ತರಾಗುವಲ್ಲಿ ವಹಿಸುವ ಶ್ರದ್ಧೆಗೆ ಬೆಂಬಲ ನೀಡಲು ಇಲ್ಲಿಯ ವೈವಿಧ್ಯ ಆರಾಧನೆ, ಆಚರಣೆಗಳು ಪ್ರಧಾನ ಪಾತ್ರ ವಹಿಸುತ್ತವೆ ಎಂದು ಸಾಮಾಜಿಕ ಕಾರ್ಯಕರ್ತ ಜಗದೀಶ ಪ್ರತಾಪನಗರ ಅವರು ತಿಳಿಸಿದರು.

ಮಾನ್ಯ ಸಮೀಪದ ಮುಂಡೋಡು ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ಆಶ್ರಯ ದಲ್ಲಿ ಆಯೋಜಿಸಲಾಗಿದ್ದ ಒತ್ತೆಕೋಲ ಯಾ ಕೆಂಡಸೇವೆಯ ಅಂಗವಾಗಿ ಸ್ಥಳೀಯ ಶ್ರೀ ಮೂಕಾಂಬಿಕಾ ಆರ್ಟ್ಸ್ ಮತ್ತು ನ್ಪೋರ್ಟ್ಸ್ ಕ್ಲಬ್‌ನ 33ನೇ ವಾರ್ಷಿಕ ಉತ್ಸವದ ಧಾರ್ಮಿಕ ಸಭೆಯಲ್ಲಿ ಉಪನ್ಯಾಸಗೈದು ಅವರು ಮಾತನಾಡಿದರು.

ಮಂಗಳೂರಿನ ಖ್ಯಾತ ವೈದ್ಯ ಡಾ| ಭರತ್‌ ಕುಮಾರ್‌ ಮುಂಡೋಡು ಅಧ್ಯಕ್ಷತೆ ವಹಿಸಿದ್ದ ಸಮಾರಂಭವನ್ನು ಭಾರತೀಯ ಮಜ್ದೂರ್‌ ಸಂಘದ ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಮುರಳೀಧರನ್‌ ಉದ್ಘಾಟಿಸಿದರು. ಬದಿಯಡ್ಕ ಗ್ರಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಶ್ಯಾಮ್‌ ಪ್ರಸಾದ್‌ ಮಾನ್ಯ, ವೇಣು ಗೋಪಾಲ ರಾವ್‌ ಮುಂಡೋಡು ಉಪಸ್ಥಿತ ರಿದ್ದು ಶುಭಹಾರೈಸಿದರು. ಸಮಾರಂಭದಲ್ಲಿ ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ಮುಂಡೋಡು ಇದರ ಅಧ್ಯಕ್ಷ ಭಾಸ್ಕರ ಮುಂಡೋಡು, ನಿವೃತ್ತ ಸೇನಾ ಸುಬೇದಾರ್‌ ಈಶ್ವರ ಭಟ್‌ ಕಾಕುಂಜೆ, ಸಮಾಜ ಸೇವಕಿ ಸಾವಿತ್ರಿ ಎನ್‌. ರಾವ್‌ ಮುಂಡೋಡು, ಹಿರಿಯ ಯಕ್ಷಗಾನ ಕಲಾವಿದ ಈಶ್ವರ ರಾವ್‌ ಮುಂಡೋಡು, ಭಜನ ಸಾಹಿತಿ ಪರಮೇಶ್ವರ ನಾಯ್ಕ ಅರ್ತಲೆ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ಮೂಕಾಂ ಬಿಕಾ ಆರ್ಟ್ಸ್ ಮತ್ತು ನ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ಪದ್ಮನಾಭ ರಾವ್‌ ಸ್ವಾಗತಿಸಿ, ಜತೆ ಕಾರ್ಯದರ್ಶಿ ಸಂತೋಷ್‌ ಕುಮಾರ್‌ ವಂದಿಸಿದರು. ಚಂದ್ರಹಾಸ ಮಾಸ್ತರ್‌ ಪಿ.ಎಂ. ಮುಂಡೋಡು ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ ಮುಂಡೋಡು ಶ್ರೀ ಮೂಕಾಂಬಿಕಾ ದೇವಿಯ ಸನ್ನಿಧಿಯಲ್ಲಿ ಪ್ರಾರ್ಥನೆ, ಮೇಲರಿ ಕೂಡಿಸುವುದು ನೆರವೇರಿತು. ಸಂಜೆ ಮುಂಡೋಡು ತರವಾಡು ಭಂಡಾರ ಮನೆಯಿಂದ ಶ್ರೀ ದೈವದ ಭಂಡಾರ ಆಗಮನ, ರಾತ್ರಿ 8ಕ್ಕೆ ತೊಡಂಙಲ್‌, ಮೇಲೇರಿಗೆ ಅಗ್ನಿ ಸ್ಪರ್ಷ ನಡೆಯಿತು. ರಾತ್ರಿ 11 ರಿಂದ ಶ್ರೀ ದೈವದ ಕುಳಿಚ್ಚಾಟ, ಮುಂಜಾನೆ ಶ್ರೀ ವಿಷ್ಣುಮೂರ್ತಿ ದೈವದ ಕೆಂಡಸೇವೆ ಮತ್ತು ಪ್ರಸಾದ ವಿತರಣೆ ನಡೆಯಿತು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ ಪ್ರಸಿದ್ಧ ಗಾಯಕ ಡಾ| ಕಿರಣ್‌ ಕುಮಾರ್‌ ಪುತ್ತೂರು ಅವರ ಗಾನಸಿರಿ ತಂಡದವರಿಂದ ಸುಮಧುರ ಗೀತಾಂಜಲಿ ಭಕ್ತಿ-ಭಾವ-ಜಾನಪದ ಗೀತೆಗಳ ಪ್ರಸ್ತುತಿ ನಡೆಯಿತು.

ಸನಾತನ ಸಂಸ್ಕೃತಿಯ ಬೇರುಗಳು ಇಲ್ಲಿಯ ಆಚರಣೆ, ಆರಾಧನಾ ಕ್ರಮಗಳಲ್ಲಿ ನಿಕ್ಷಿಪ್ತವಾಗಿದ್ದು, ಧರ್ಮಾಚರಣೆಯ ಪಾಲನೆಯ ಮೂಲಕ ಬದುಕಿನ ಸಾರ್ಥಕ್ಯವನ್ನು ಕಂಡುಕೊಳ್ಳಲಾಗುತ್ತಿದೆ. ರಾಷ್ಟ್ರದ ಪರಮ ವೈಭವದ ಸ್ಥಾಪನೆಗೆ ಪ್ರಸ್ತುತ ಕಾಲಘಟ್ಟ ಸರ್ವ ಸನ್ನದ್ಧªವಾಗಿದ್ದು, ಭರತ ಖಂಡದ ಜನಮಾನಸದಲ್ಲಿ ಭರವಸೆಯ ಧೀಶಕ್ತಿ ಮೈಗೂಡಲಿ .
-ಜಗದೀಶ ಪ್ರತಾಪನಗರ

ಟಾಪ್ ನ್ಯೂಸ್

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

9

Actor Suriya: ತಾಯಿ ಮಾಡಿದ 25 ಸಾವಿರ ರೂ. ಸಾಲ ತೀರಿಸಲು ಸಿನಿಮಾ ರಂಗಕ್ಕೆ ಬಂದ ಸೂರ್ಯ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

8

KSRTC ನಿಲ್ದಾಣ-ಲಾಲ್‌ಭಾಗ್‌ ರಸ್ತೆ ಫುಟ್‌ಪಾತ್‌ ಇಲ್ಲದೆ ಪಾದಚಾರಿಗಳ ಪರದಾಟ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

7

Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ

9

Actor Suriya: ತಾಯಿ ಮಾಡಿದ 25 ಸಾವಿರ ರೂ. ಸಾಲ ತೀರಿಸಲು ಸಿನಿಮಾ ರಂಗಕ್ಕೆ ಬಂದ ಸೂರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.