Kasaragod: ಸಚಿತಾ ರೈ ವಿರುದ್ಧ ಮತ್ತೊಂದು ಕೇಸು ದಾಖಲು
Team Udayavani, Oct 14, 2024, 10:00 PM IST
ಕಾಸರಗೋಡು: ಉದ್ಯೋಗ ದೊರಕಿಸಿಕೊಡುವುದಾಗಿ ಭರವಸೆ ನೀಡಿ ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಪೈವಳಿಕೆ ಕಾಡೂರಿನ ಮೋಕ್ಷಿತ್ ಶೆಟ್ಟಿ ಅವರು ನೀಡಿದ ದೂರಿನಂತೆ ಮಾಜಿ ಡಿವೈಎಫ್ಐ ನೇತಾರೆ, ಬಾಡೂರು ಎಎಲ್ಪಿ ಶಾಲೆ ಅಧ್ಯಾಪಕಿ ಶೇಣಿ ಬಲ್ತಕಲ್ಲುವಿನ ಸಚಿತಾ ರೈ (27) ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಕರ್ನಾಟಕದ ಅಬಕಾರಿ ಇಲಾಖೆಯಲ್ಲಿ ಉದ್ಯೋಗ ಭರವಸೆ ನೀಡಿ 1 ಲಕ್ಷ ರೂ. ಪಡೆದು ವಂಚಿಸಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು. 2023 ಅಕ್ಟೋಬರ್, ನವೆಂಬರ್ ತಿಂಗಳಲ್ಲಿ ಹಣ ನೀಡಿರುವುದಾಗಿ ಮೋಕ್ಷಿತ್ ಶೆಟ್ಟಿ ದೂರಿನಲ್ಲಿ ತಿಳಿಸಿದ್ದಾರೆ. ಇದರೊಂದಿಗೆ ಕೇರಳದಲ್ಲಿ ಸಚಿತಾ ರೈ ವಿರುದ್ಧ ದಾಖಲಿಸಿದ ಕೇಸುಗಳ ಸಂಖ್ಯೆ ಐದಕ್ಕೇರಿದೆ. ಮಂಜೇಶ್ವರ, ಕುಂಬಳೆ ಠಾಣೆಗಳಲ್ಲಿ ತಲಾ ಒಂದರಂತೆಯೂ, ಬದಿಯಡ್ಕ ಠಾಣೆಯಲ್ಲಿ ಮೂರು ಕೇಸುಗಳು ದಾಖಲಾಗಿವೆ. ಸಚಿತಾ ವಿರುದ್ಧ ಉಪ್ಪಿನಂಗಡಿಯಲ್ಲೂ ಒಂದು ಪ್ರಕರಣ ದಾಖಲಾಗಿದೆ.
ಪೊಲೀಸ್ ಅಧಿಕಾರಿ ಸೋಗಿನಲ್ಲಿ ಬಂದು ಹಣ ಪಡೆದರು
ಬದಿಯಡ್ಕ: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಬದಿಯಡ್ಕ ಪೇಟೆಯಲ್ಲಿ ಲಾಟರಿ ಟಿಕೆಟ್ ಮಾರಾಟ ಮಾಡುವ ಪಡಿಯಡ್ಪು ನಿವಾಸಿ ಶಿವಪ್ಪ ನಾಯ್ಕ ಅವರ ಪತ್ನಿ ಶಾಂತಾ ಅವರಿಂದ 2,000 ರೂ. ಪಡೆದು ಪರಾರಿಯಾದ ಘಟನೆ ನಡೆದಿದೆ. ಈ ಬಗ್ಗೆ ಬದಿಯಡ್ಕ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಇದೇ ರೀತಿ ನೀರ್ಚಾಲು ಪೇಟೆಯಲ್ಲೂ ಲಾಟರಿ ವ್ಯಾಪಾರಿಯ ಕೈಯಿಂದ 1,250 ರೂ. ಹಣ ಪಡೆದು ಪರಾರಿಯಾಗಿದ್ದ ಘಟನೆಗೆ ಸಂಬಂಧಿಸಿ ಪೊಲೀಸರು ಮಂಜೇಶ್ವರ ನಿವಾಸಿಯನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
America: ಕ್ರಿಕೆಟ್ ದಂತಕತೆ ಸಚಿನ್ ತೆಂಡುಲ್ಕರ್ಗೆ ಜೆರ್ಸಿ ಗೌರವ
Aranthodu; ರಬ್ಬರ್ ಆ್ಯಸಿಡ್ ಸೇವಿಸಿದ್ದ ವ್ಯಕ್ತಿ ಸಾ*ವು
High Court: ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ: ಮಧ್ಯಾಂತರ ತಡೆ
Pakistan-England Test: ಇಂಗ್ಲೆಂಡ್ ತಂಡಕ್ಕೆ ಮರಳಿದ ಬೆನ್ ಸ್ಟೋಕ್ಸ್
High Court: ಎಚ್ಡಿಕೆ ವಿರುದ್ಧದ ಎಫ್ಐಆರ್ ವಿಚಾರಣೆ ಅ. 21ಕ್ಕೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.