![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Apr 25, 2024, 1:06 AM IST
ಬೈಕ್ ಅಪಘಾತ: ಗಾಯಾಳು ಸಾವು
ಕಾಸರಗೋಡು: ಎರ್ನಾಕುಳಂನಲ್ಲಿ ಡಿ. 17ರಂದು ಬೈಕ್ ಢಿಕ್ಕಿ ಹೊಡೆದು ಗಾಯಗೊಂಡು ಗಂಭೀರ ಸ್ಥಿತಿಯಲ್ಲಿ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೆಂಗಳ ತೈವಳಪ್ಪಿನ ಸಿ.ವಿ.ಅಬೂಬಕರ್ ಅವರ ಪುತ್ರ ಸಿ.ವಿ.ಶಫೀಕ್ (22) ಸಾವಿಗೀಡಾದರು. 2023ರ ಡಿ. 17ರಂದು ಇವರು ಸಂಚರಿಸುತ್ತಿದ್ದ ಬೈಕ್ಗೆ ಇನ್ನೊಂದು ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು.
ನಾಪತ್ತೆಯಾದ ಬಾಲಕಿ ಮುಂಬಯಿಯಲ್ಲಿ ಪತ್ತೆ
ಮಂಜೇಶ್ವರ: ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಿಂದ ಎ. 19 ರಂದು ನಾಪತ್ತೆಯಾಗಿದ್ದ 17ರ ಹರೆಯದ ಬಾಲಕಿಯನ್ನು ಮುಂಬಯಿಯಿಂದ ಪತ್ತೆ ಹಚ್ಚಲಾಗಿದೆ.
ಸೈಬರ್ ಸೆಲ್ನ ಸಹಾಯದೊಂದಿಗೆ ಬಾಲಕಿಯನ್ನು ಮುಂಬಯಿಯಿಂದ ಪತ್ತೆಹಚ್ಚಲಾಗಿದ್ದು, ಪೊಲೀಸರು ಆಕೆಯನ್ನು ಮಂಜೇಶ್ವರ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಆಕೆಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು.
ಬಾಲಕಿಗೆ ಲೈಂಗಿಕ ಕಿರುಕುಳ: ಬಂಧನ
ಕಾಸರಗೋಡು: ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಕಲ್ಲಿಕೋಟೆ ನಾದಾಪುರಂ ನಿವಾಸಿ ಎನ್.ಯಾಹಿಯಾ (28)ನನ್ನು ಚಂದೇರ ಪೊಲೀಸರು ಬಂಧಿಸಿದ್ದಾರೆ.
ನೀಲೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಲಕಿಯನ್ನು ಕಳೆದ ವರ್ಷ ಕಾರಿನಲ್ಲಿ ಅಪಹರಿಸಿ ಲೈಂಗಿಕ ಕಿರುಕುಳ ನೀಡಲಾಗಿತ್ತೆಂದು ಪೊಲೀಸರಿಗೆ ದೂರು ನೀಡಲಾಗಿತ್ತು.
ಶಾಲಾ ಬಸ್ ಢಿಕ್ಕಿ: ಗಾಯಾಳು ಯುವಕನ ಸಾವು
ಕುಂಬಳೆ: ಶಾಲಾ ಬಸ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೂರಂಬೈಲು ನಿವಾಸಿ ಅನಿಲ್ ಕುಮಾರ್ ಅವರ ಪುತ್ರ ಅವಿನಾಶ್ (21) ಮೃತಪಟ್ಟರು. ಎ. 19ರಂದು ಇವರು ಸಂಚರಿಸುತ್ತಿದ್ದ ಬೈಕ್ಗೆ ಉದಯಗಿರಿಯಲ್ಲಿ ಬಸ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು.
ಆಡುಗಳನ್ನು ಕೊಂದ ಬೀದಿ ನಾಯಿಗಳು
ಕಾಸರಗೋಡು: ನಗರದ ನೆಲ್ಲಿಕುಂಜೆಯ ಶಾಹಿಲಾ ಅವರ ಲ್ಲಿ ಎರಡು ಆಡುಗಳನ್ನು ಬೀದಿ ನಾಯಿಗಳು ಕಚ್ಚಿ ಕೊಂದು ಹಾಕಿದ ಘಟನೆ ನಡೆದಿದೆ.
You seem to have an Ad Blocker on.
To continue reading, please turn it off or whitelist Udayavani.