Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


Team Udayavani, Jul 15, 2024, 12:09 AM IST

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಜೀಪು ಢಿಕ್ಕಿ ಹೊಡೆಸಿ ಕೊಲೆಗೆ ಯತ್ನ; ದೂರು
ಕಾಸರಗೋಡು: ಮೀಟರ್‌ ಬದಲಾಯಿಸಲು ಬಂದ ಕೆಎಸ್‌ಇಬಿ ನೌಕರನಿಗೆ ವಾಹನ ಢಿಕ್ಕಿ ಹೊಡೆಸಿ ಕೊಲೆಗೈಯ್ಯಲು ಯತ್ನಿಸಿದ ಘಟನೆ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.

ಗುತ್ತಿಗೆ ಕಾರ್ಮಿಕನಾದ ತಯೆನಿಯ ಅರುಣ್‌ ಕುಮಾರ್‌ (33) ಅವರಿಗೆ ನಲ್ಲೋಂಪುಳ ಮಾರಿಪುರತ್ತ್ ಜೋಸೆಫ್‌ ಅವರ ಮನೆಗೆ ಬರುತ್ತಿದ್ದಂತೆ ಜೀಪು ಢಿಕ್ಕಿ ಹೊಡೆಸಿ, ಜಾಕಿ ಲಿವರ್‌ನಿಂದ ಇರಿದು ಕೊಲೆಗೆ ಯತ್ನಿಸಿದ್ದಾಗಿ ದೂರಲಾಗಿದೆ.

ಗಾಯಾಳುವನ್ನು ಕಾಂಞಂಗಾಡ್‌ನ‌ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಟ್ಟಾರಿಕ್ಕಲ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು ಪ್ರಕರಣ ದಾಖಲಿಸಲಾಗಿದೆ.

ಜ್ವರದಿಂದ ಬಾಲಕನ ಸಾವು
ಕಾಸರಗೋಡು: ಜ್ವರ ಬಾಧಿಸಿ 2 ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೋವಿಕ್ಕಾನ ನಿವಾಸಿ ಬಿ.ಕೆ. ನಾಜುದ್ದೀನ್‌ ಅವರ ಪುತ್ರ ಮಿಸ್ಬಾಹ್‌ (13) ಮೃತಪಟ್ಟಿದ್ದಾರೆ.ಎರ್ನಾಕುಳಂನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಬಾಲಕ ಕುವೈಟ್‌ನ ಜಾಬ್ರಿಯ ಇಂಡಿಯನ್‌ ಸ್ಕೂಲ್‌ನಲ್ಲಿ 8ನೇ ತರಗತಿ ವಿದ್ಯಾರ್ಥಿ.

ಕುಂಬಳೆಯಿಂದ ಕಾಣೆಯಾದ ಬಾಲಕ ತಿರೂರಿನಲ್ಲಿ ಪತ್ತೆ
ಕುಂಬಳೆ: ಪ್ಲಸ್‌ ವನ್‌ಗೆ ಸೀಟು ಲಭಿಸದ ಕಾರಣಕ್ಕೆ ಊರುಬಿಟ್ಟ ಕುಂಬಳೆ ಠಾಣೆ ವ್ಯಾಪ್ತಿಯ 15ರ ಹರೆಯದ ಬಾಲಕನನ್ನು ತಿರೂರಿನಲ್ಲಿ ಪತ್ತೆಹಚ್ಚಲಾಗಿದೆ.

ಬಾಲಕ ಜು. 12ರಂದು ಮಧ್ಯಾಹ್ನ ನಾಪತ್ತೆಯಾಗಿರು ವುದಾಗಿ ಮನೆಯವರು ಕುಂಬಳೆ ಪೊಲೀಸರಿಗೆ ದೂರು ನೀಡಿದ್ದರು. ತಿರೂರಿನಲ್ಲಿ ಅಪರಿಚಿತ ಬಾಲಕನನ್ನು ಕಂಡ ರಿಕ್ಷಾ ಚಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ವಿಚಾರಿಸಿದಾಗ ಪ್ಲಸ್‌ ವನ್‌ಗೆ ಸೀಟು ಸಿಗದ ಕಾರಣ ಊರು ಬಿಟ್ಟಿರುವುದಾಗಿ ಹೇಳಿದ್ದ. ಆತನನ್ನು ಕುಂಬಳೆಗೆ ಕರೆತರಲಾಗಿದೆ.

ಗಾಂಜಾ ಸಹಿತ ಸೆರೆ
ಕಾಸರಗೋಡು: ಇಲ್ಲಿನ ರೈಲು ನಿಲ್ದಾಣ ಪರಿಸರದಿಂದ 19.5 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡ ಪೊಲೀಸರು ಬೇಕಲದ ಅಶ್ರಫ್‌ ಟಿ.ಎ. (43) ನನ್ನು ಬಂಧಿಸಿದ್ದಾರೆ.

ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ ಹೊಡೆದು
ಅಣ್ಣನ ಸಾವು, ತಮ್ಮನಿಗೆ ಗಂಭೀರ ಗಾಯ
ಬದಿಯಡ್ಕ: ನಿಯಂತ್ರಣ ಕಳೆದುಕೊಂಡ ಕಾರು ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಮಗುಚಿ ಬಿದ್ದ ಪರಿಣಾಮ ಮಾವಿನಕಟ್ಟೆ ಮಸೀದಿ ಬಳಿಯ ನಿವಾಸಿ ಅಬ್ದುಲ್ಲ ಅವರ ಪುತ್ರ ಕಲಂದರ್‌ ಸಮ್ಮಾಸ್‌ (21) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಹೋದರ ಮೊದೀನ್‌ ಸರ್ವಾಸ್‌ (19) ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಕರ ಮನೆಗೆ ಹೋಗಿದ್ದ ಸಹೋದರರು ಮರಳುವಾಗ ರಾತ್ರಿ 10ಕ್ಕೆ ಮಾವಿನಕಟ್ಟೆಯಲ್ಲಿ ಅಪಘಾತ ಸಂಭವಿಸಿತು.

ಯುವಕನಿಗೆ ಹಲ್ಲೆ
ಕುಂಬಳೆ: ಶವರ್ಮ ಆರ್ಡರ್‌ ಪಡೆದುಕೊಂಡು ಗ್ರಾಹಕರಿಗೆ ತಲುಪಿಸುತ್ತಿದ್ದ ಶಿರಿಯ ಬತ್ತೇರಿಯ ಶಮ್ಮೊàನುಲ್‌ ಗಾಸ (18) ಅವರಿಗೆ 15 ಮಂದಿಯ ತಂಡ ಕಬ್ಬಿಣದ ಸರಳಿನಿಂದ ಹಲ್ಲೆ ಮಾಡಿರುವುದಾಗಿ ದೂರು ನೀಡಲಾಗಿದೆ. ಗಾಯಾಳನ್ನು ಕುಂಬಳೆಯ ಜಿಲ್ಲಾ ಸಹಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶೆಡ್‌ ಬೆಂಕಿಗಾಹುತಿ
ಉಪ್ಪಳ: ವರ್ಕಾಡಿ ಕೊಡ್ಲಮೊಗರಿನ ಪ್ರಕಾಶ ಅವರ ರಬ್ಬರ್‌ ತೋಟದಲ್ಲಿರುವ ರಬ್ಬರ್‌ ಶೀಟ್‌ ಸಂಗ್ರಹದ ಶೆಡ್‌ ಬೆಂಕಿಗಾಹುತಿಯಾಗಿ ಸುಮಾರು 2 ಲಕ್ಷ ರೂ. ನಷ್ಟ ಸಂಭವಿಸಿದೆ. ರಬ್ಬರ್‌ ಶೀಟ್‌ ಒಣಗಿಸುತ್ತಿದ್ದಾಗ ಅಕಸ್ಮಾತ್‌ ಆಗಿ ಬೆಂಕಿ ತಗಲಿತೆಂದು ಹೇಳಲಾಗಿದೆ. ಉಪ್ಪಳ ಅಗ್ನಿಶಾಮಕ ದಳ ಬೆಂಕಿಯನ್ನು ಆರಿಸಿತು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.