ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


Team Udayavani, Jul 18, 2019, 5:26 AM IST

Crime-545

ತುಂಡಾಗಿ ಬಿದ್ದ ವಿದ್ಯುತ್‌ ತಂತಿ:
ಶಾಕ್‌ ತಗಲಿ ಮಹಿಳೆ ಸಾವು
ಕುಂಬಳೆ: ತುಂಡಾಗಿ ಬಿದ್ದ ವಿದ್ಯುತ್‌ ತಂತಿ ಎಂದು ತಿಳಿಯದೆ ಹಿತ್ತಿಲಲ್ಲಿದ್ದ ತಂತಿಯನ್ನು ತೆಗೆಯುವ ವೇಳೆ ಮಹಿಳೆ ಶಾಕ್‌ ತಗಲಿ ಸಾವಿಗೀಡಾದರು. ತಂತಿಯನ್ನು ಕೈಯಲ್ಲಿ ಹಿಡಿದುಕೊಂಡ ಸ್ಥಿತಿಯಲ್ಲಿ ಹಿತ್ತಿಲಲ್ಲಿ ಬಿದ್ದಿದ್ದ ಮೃತದೇಹವನ್ನು ದೂರದ ಸಂಬಂಧಿಕರು ಬುಧವಾರ ಬೆಳಗ್ಗೆ ಪತ್ತೆಹಚ್ಚಿದ್ದಾರೆ.

ಶೇಡಿಕಾವು ನಿವಾಸಿ ದಿ| ರಾಧಾಕೃಷ್ಣ ಮಯ್ಯ ಅವರ ಪತ್ನಿ ಕಲಾವತಿ (52) ಅವರು ಸಾವಿಗೀಡಾದವರು. ಕಲಾವತಿ ಅವರು ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದಾರೆ. ಇವರಿಗೆ ಮೂವರು ಹೆಣ್ಣು ಮಕ್ಕಳಿದ್ದರೂ ಅವರೆಲ್ಲ ವಿವಾಹವಾಗಿ ಪತಿಯೊಂದಿಗಿದ್ದಾರೆ. ಮನೆಯಿಂದ ಕೆಲವೇ ದೂರದಲ್ಲಿ ಸಂಗ್ರಹಿಸಿಡಲಾಗಿದ್ದ ಕಟ್ಟಿಗೆಯನ್ನು ತೆಗೆಯಲು ಹೋದಾಗ ದುರಂತ ಸಂಭವಿಸಿರಬೇಕೆಂದು ಶಂಕಿಸಲಾಗಿದೆ.

ಎಂಡೋ ಸಂತ್ರಸ್ತ ಕುಸಿದು ಬಿದ್ದು ಸಾವು
ಬದಿಯಡ್ಕ: ಎಂಡೋ ಸಂತ್ರಸ್ತ ಯಾದಿಯಲ್ಲಿ ಸೇರ್ಪಡೆಗೊಂಡಿದ್ದ ಕನ್ಯಪ್ಪಾಡಿ ಬಾಪೊಲಿ ಪೊನಂ ಕಂಬಾರ್‌ ಮನೆಯ ನಿವಾಸಿ ಮುಹಮ್ಮದ್‌ ಅವರ ಪುತ್ರ ಜುನೈದ್‌ (23) ಅವರು ಮನೆಯಲ್ಲಿ ಕುಸಿದು ಬಿದ್ದು ಸಾವಿಗೀಡಾದರು. ಹೃದಯ ಸಂಬಂಧಿ ಕಾಯಿಲೆಯಿಂದ ಅವರು ಬಳಲುತ್ತಿದ್ದರು.

ಮದ್ಯ ಸಹಿತ ಬಂಧನ
ಕುಂಬಳೆ: ಸೀತಾಂಗೋಳಿಯಿಂದ 14 ಬಾಟಿÉ ವಿದೇಶಿ ಮದ್ಯ ಸಹಿತ ಬೇಳ ಕೊಲ್ಲಂಗಾನದ ರಫೇಲ್‌ ಡಿ’ಸೋಜಾ (45)ನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಬಿ.ಎಂ.ಎಸ್‌. ಕಾರ್ಯಕರ್ತನಿಗೆ

ಇರಿತ: ಇನ್ನೋರ್ವನ ಬಂಧನ
ಕಾಸರಗೋಡು: ವಿದ್ಯಾನಗರ ಬಳಿಯ ನೆಲ್ಕಳ ನಿವಾಸಿ, ಬಿಎಂಎಸ್‌ ಕಾರ್ಯಕರ್ತ ಪ್ರಶಾಂತ್‌ (33) ಅವರಿಗೆ ಇರಿದು ಹತ್ಯೆ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಚೆಂಗಳ ಎರ್ಮಾಳಂ ನಿವಾಸಿ ಅಬೂಬಕ್ಕರ್‌ ಸಿದ್ದಿಕ್‌ ಯಾನೆ ತಮ್ಮು (22)ನನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ ಆರಕ್ಕೇರಿದೆ. ಈ ಹಿಂದೆ ಐವರನ್ನು ಪೊಲೀಸರು ಬಂಧಿಸಿದ್ದರು.

ಗೋದಾಮಿನಿಂದ ಕಳವು
ಕಾಸರಗೋಡು: ವಿದ್ಯಾನಗರ ಸ್ಟೇಡಿಯಂ ಬಳಿಯ ಚಿಲ್ಡ್ರನ್ಸ್‌ ಪಾರ್ಕ್‌ ಗೋದಾಮಿಗೆ ನುಗ್ಗಿದ ಕಳ್ಳರು ಸುಮಾರು 3.5 ಲಕ್ಷ ರೂ. ಮೌಲ್ಯದ ಸಾಮಗ್ರಿಗಳನ್ನು ಕಳವು ಮಾಡಿದ ಘಟನೆ ನಡೆದಿದೆ. ಕಾಸರಗೋಡು ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. 5,000 ವೋಲ್ಟ್ನ 4ಆ್ಯಂಪ್ಲಿಫಯರ್‌, 10 ಫೋಕಸ್‌ ಲೈಟ್‌ಗಳು, 6 ಕಲರ್‌ ಲೈಟ್‌ಗಳು ಮತ್ತು 1 ಟನ್‌ ನಟ್‌ ಮತ್ತು ಬೋಲ್ಟ್‌ಗಳನ್ನು ಕಳವು ಮಾಡಲಾಗಿದೆ.

ಯುವಕನಿಗೆ ಹಲ್ಲೆ
ಕಾಸರಗೋಡು: ಕೂಡ್ಲು ವೀವರ್ಸ್‌ ಕಾಲನಿಯ ಐಶ್ವರ್ಯ ನಿಲಯದ ಸೂರ್ಯ ಕುಮಾರ್‌ (25) ಅವರಿಗೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಶರತ್‌ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.

ಮನೆಗೆ ಬೆಂಕಿ
ಕಾಸರಗೋಡು: ಎರಿಯಾಲ್‌ ಬಳಿಯ ರಾ.ಹೆದ್ದಾರಿ ಪಕ್ಕದ ಅಬ್ದುಲ್‌ ರಜಾಕ್‌ ಅವರ ಮನೆಗೆ ಬೆಂಕಿ ಹತ್ತಿಕೊಂಡ ಘಟನೆ ನಡೆದಿದೆ. ಮನೆಯ ಮೇಲ್ಛಾವಣಿ ಮತ್ತು ವಿವಿಧ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ. ಅಗ್ನಿಶಾಮಕ ದಳ ಬೆಂಕಿಯನ್ನು ಆರಿಸಿತು. ಯಾರಿಗೂ ಅಪಾಯ ಸಂಭವಿಸಲಿಲ್ಲ.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.