Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


Team Udayavani, Apr 23, 2024, 7:31 PM IST

5-ksrgdu

ಅಡ್ಯನಡ್ಕ: ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿ ಮೇಲಕ್ಕೆ ಹತ್ತುತ್ತಿದ್ದ ವ್ಯಕ್ತಿ ಬಿದ್ದು ಸಾವು

ಪೆರ್ಲ: ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿ ಮೇಲಕ್ಕೆ ಹತ್ತುತ್ತಿದ್ದಾಗ ಆಯ ತಪ್ಪಿ ಬಿದ್ದು ವ್ಯಕ್ತಿಯೋರ್ವರು ಸಾವಿಗೀಡಾದ ಘಟನೆ ಅಡ್ಯನಡ್ಕ ಬಳಿಯ ಚವರ್ಕಾಡು ಪಾರದಲ್ಲಿ ನಡೆದಿದೆ.

ಕೊಲ್ಲಂ ಕಲ್ಲುವಾದುಕ್ಕಲ್‌ ನಿವಾಸಿಯಾದ ಸಂತೋಷ್‌ ಕುಮಾರ್‌ (53) ಮೃತಪಟ್ಟವರು.

ಚೆವರ್ಕಾಡು ಪಾರದ ಮೊದೀನ್‌ ಕುಂಞಿ ಅವರ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಬಾವಿಗೆ ಇಳಿದು ಬೆಕ್ಕನ್ನು ರಕ್ಷಿಸಿ ಮೇಲೆರುತ್ತಿದ್ದಾಗ ಆಯ ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದರು. ವಿಷಯ ತಿಳಿದು ಕಾಸರಗೋಡಿನಿಂದ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಅವರನ್ನು ಮೇಲಕ್ಕೆತ್ತಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಮೃತದೇಹವನ್ನು ಕಾಸರಗೋಡು ಜನರಲ್‌ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

———————————————–

ಲಿಫ್ಟ್‌ನ ಹೊಂಡಕ್ಕೆ ಬಿದ್ದು ಕಾರ್ಮಿಕನ ಸಾವು

ಕಾಸರಗೋಡು: ನಿರ್ಮಾಣ ಹಂತದಲ್ಲಿರುವ ಆಸ್ಪತ್ರೆಯೊಂದರ ಕಟ್ಟಡದ ಲಿಫ್ಟ್‌ನ ಹೊಂಡಕ್ಕೆ ಬಿದ್ದು ನಿರ್ಮಾಣ ಕಾರ್ಮಿಕ ಒಡಿಸ್ಸಾ ಚಂಬಾಡಿಪುರ ನಿವಾಸಿ ದೇವೇಂದ್ರಶ್ರೀ (33) ಮೃತಪಟ್ಟರು.

ಚೆಂಗಳದ ಇಂದಿರಾನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಆಸ್ಪತ್ರೆಯೊಂದರಲ್ಲಿ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ವೇಳೆ ಅದರ ಲಿಫ್ಟ್‌ನ ಹೊಂಡಕ್ಕೆ ನಿಯಂತ್ರಣ ತಪ್ಪಿ ದೇವೇಂದ್ರಶ್ರೀ ಬಿದ್ದಿದ್ದರು. ತಲೆಗೆ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸಿ ತುರ್ತು ಚಿಕಿತ್ಸೆ ನೀಡಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

———————————————————————————–

ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಕುಂಬಳೆ: ಬಸ್‌ ಕಂಡಕ್ಟರ್‌, ಸೀತಾಂಗೋಳಿ ಪಳ್ಳತ್ತಡ್ಕ ನಿವಾಸಿ ರಾಮ ಭಂಡಾರಿ ಅವರ ಪುತ್ರ ದಿನೇಶ್‌ (54) ಅವರ ಮೃತ ದೇಹ ಪೆರ್ಣೆ ಬಳಿಯ ಹಿತ್ತಿಲಿನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕುಂಬಳೆ ಪೊಲೀಸರು ಮೃತದೇಹವನ್ನು ಕಾಸರಗೋಡು ಜನರಲ್‌ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ತಲುಪಿಸಿದ್ದಾರೆ.

———————————————————————————-

ಶಾಲಾ ಬಸ್‌ ಢಿಕ್ಕಿ: ಗಾಯಾಳು ಯುವಕನ ಸಾವು

ಕುಂಬಳೆ: ಶಾಲಾ ಬಸ್‌ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೂರಂಬೈಲು ನಿವಾಸಿ ಅನಿಲ್‌ ಕುಮಾರ್‌ ಅವರ ಪುತ್ರ ಅವಿನಾಶ್‌ (21) ಮೃತಪಟ್ಟರು.

ಎ. 19ರಂದು ಇವರು ಸಂಚರಿಸುತ್ತಿದ್ದ ಬೈಕ್‌ಗೆ ಉದಯಗಿರಿಯಲ್ಲಿ ಬಸ್‌ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು.

———————————————————————————–

ಮಂಗಲ್ಪಾಡಿ ಪಂ.ಕಚೇರಿಯಿಂದ ಕಳವು ಯತ್ನ : ತನಿಖೆ

ಕುಂಬಳೆ: ಮಂಗಲ್ಪಾಡಿ ಪಂಚಾಯತ್‌ ಕಚೇರಿಗೆ ನುಗ್ಗಿ ಕಳವು ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮಂಜೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎ. 20ರಂದು ರಾತ್ರಿ ಕಳವು ಯತ್ನ ನಡೆದಿತ್ತು.

———————————————————————————–

ಎಂಡಿಎಂಎ ಸಹಿತ ಬಂಧನ

ಉಪ್ಪಳ, ಎ. 23: ಉಪ್ಪಳ ಗೇಟ್‌ ಪರಿಸರದಲ್ಲಿ ಸಂಶಯಾಸ್ಪದವಾಗಿ ಕಂಡು ಬಂದ ಪಳ್ಳಿಕೆರೆ ಬಿಲಾಲ್‌ ನಗರ ತಾಯಲ್‌ ಮವ್ವಲ್‌ ನಿವಾಸಿ ಮೊಹಮ್ಮದ್‌ ಸಹೂದ್‌ (28) ನನ್ನು ಬಂಧಿಸಿದ ಪೊಲೀಸರು ಈತನಿಂದ 34 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.

———————————————————————————–

ಮನೆಯಿಂದ ಕಳವು : 4 ಬೆರಳ ಗುರುತು ಪತ್ತೆ

ಕುಂಬಳೆ: ಮಂಗಲ್ಪಾಡಿ ಪ್ರತಾಪನಗರ ನಿವಾಸಿ ಕೊಲ್ಲಿ ಉದ್ಯೋಗಿ ಬದ್ರುಲ್‌ ಮುನೀರ್‌ ಅವರ ಮನೆಯಿಂದ 4 ಪವನ್‌ ಚಿನ್ನಾಭರಣ ಮತ್ತು 35 ಸಾವಿರ ರೂ. ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದು, ಬೆರಳ ಗುರುತು ತಜ್ಞರು ನಾಲ್ಕು ಬೆರಳ ಗುರುತುಗಳನ್ನು ಪತ್ತೆಹಚ್ಚಿದ್ದಾರೆ.

ಟಾಪ್ ನ್ಯೂಸ್

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod ಅಪರಾಧ ಸುದ್ದಿಗಳು

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

3

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಅಮಲು ಪದಾರ್ಥ ವಶಕ್ಕೆ : ಬಂಧನ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.