Kasaragod ಅಪರಾಧ ಸುದ್ದಿಗಳು


Team Udayavani, Sep 1, 2024, 8:32 PM IST

kas-a

ಬಾಲಕಿ ಅಪಹರಣ: ಬಂಧನ
ಕಾಸರಗೋಡು: ಎರಡು ವರ್ಷದ ಬಾಲಕಿಯನ್ನು ಅಪಹರಿಸಿದ್ದ ಎರ್ನಾಕುಳಂ ನಿವಾಸಿ ಅನೀಶ್‌ ಕುಮಾರ್‌(49)ನನ್ನು ಕಾಸರಗೋಡು ರೈಲ್ವೇ ಪೊಲೀಸ್‌ ಹಾಗೂ ಆರ್‌ಪಿಎಫ್‌ ಬಂಧಿಸಿದೆ.

ಮಂಗಳೂರಿನ ಕಂಕನಾಡಿಯಿಂದ ಈ ಮಗುವನ್ನು ಅಪಹರಿಸಲಾಗಿತ್ತು. ಈ ಮಗುವನ್ನು ಗೋವಾದಿಂದ ಅಪಹರಿಸಲಾಗಿದೆ ಎಂದು ವಿಚಾರಣೆಯ ಸಂದರ್ಭ ಆತ ಆರಂಭದಲ್ಲಿ ಹೇಳಿದ್ದ. ಆ ಬಳಿಕ ತನ್ನ ಹೇಳಿಕೆಯನ್ನು ಬದಲಾಯಿಸಿ ಕಂಕನಾಡಿಯಿಂದ ಅಪಹರಿಸಲಾಗಿದೆ ಎಂದಿದ್ದಾನೆ.

ಗಾಂಧಿ ಧಾಂ – ನಾಗರಕೋವಿಲ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಈ ಮಗುವಿನೊಂದಿಗೆ ಪ್ರಯಾಣಿಸುತ್ತಿದ್ದ. ಈತನ ನಡವಳಿಕೆ ಕಂಡು ಸಂಶಯಿಸಿದ ಇತರ ಪ್ರಯಾಣಿಕರು ಆರ್‌ಪಿಎಫ್‌ಗೆ ಮಾಹಿತಿ ನೀಡಿದ್ದರು. ಅದರಂತೆ ಮಗು ಸಹಿತ ಈತನನ್ನು ವಶಕ್ಕೆ ತೆಗೆದುಕೊಳ್ಳಲಾಯಿತು. ಈ ಮಗುವನ್ನು ಹೇಗೆ ಅಪಹರಿಸಲಾಯಿತು ಎಂಬ ಬಗ್ಗೆ ಯಾವುದೇ ಮಾಹಿತಿ ಈವರೆಗೂ ಲಭಿಸಿಲ್ಲ. ಹೆಚ್ಚಿನ ತನಿಖೆಯ ಬಳಿಕವಷ್ಟೇ ಸಂಪೂರ್ಣ ಮಾಹಿತಿ ಲಭಿಸಲಿದೆ. ವ್ಯಕ್ತಿ ಹಾಗೂ ಮಗುವನ್ನು ಕಂಕನಾಡಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಎರಡಂತಸ್ತಿನ ಕಟ್ಟಡ ಕುಸಿತ
ಕಾಸರಗೋಡು: ನಗರದ ಎಂ.ಜಿ. ರಸ್ತೆಯ ಹಳೆಯ ಎರಡಂತಸ್ತಿನ ಕಟ್ಟಡ ಆ. 31ರಂದು ರಾತ್ರಿ ಕುಸಿದು ಬಿದ್ದಿದೆ. ಈ ಕಟ್ಟಡದಲ್ಲಿದ್ದ ಅಂಗಡಿಗಳನ್ನು ವ್ಯಾಪಾರಿಗಳು ಮುಚ್ಚಿ ಹೋಗಿದ್ದರಿಂದ ಸಂಭವನೀಯ ದುರಂತ ತಪ್ಪಿತು.

ಹಳೆ ಬಸ್‌ ನಿಲ್ದಾಣ ಸಮೀಪದ ಮೀನು ಮಾರುಕಟ್ಟೆ ರಸ್ತೆಯ ಹೆಂಚು ಹಾಸಿದ ಹಳೆಯ ಕಟ್ಟಡ ಮುರಿದು ಬಿದ್ದಿದೆ. ಮಳೆಯಿಂದಾಗಿ ಎಲ್ಲ ವ್ಯಾಪಾರಿಗಳು ಬೇಗನೆ ಮನೆಗೆ ಹೋಗಿದ್ದರು. ಏಳು ಅಂಗಡಿಗಳು ಕುಸಿದು ಬಿದ್ದಿದೆ. ತರಕಾರಿ, ಒಣಗಿದ ಮೀನು ಮಾರಾಟದ ಅಂಗಡಿಗಳು ಕುಸಿದಿವೆ. ಇದರ ಸಮೀಪದ ಅಂಗಡಿಗಳು ಯಾವುದೇ ಕ್ಷಣದಲ್ಲೂ ಕುಸಿದು ಬೀಳುವ ಸಾಧ್ಯತೆಯ ಹಿನ್ನೆಲೆಯಲ್ಲಿ ಪೊಲೀಸರು ಅತ್ತ ಸಾಗದಂತೆ ತಡೆಹಿಡಿದಿದ್ದಾರೆ. ಲಕ್ಷಾಂತರ ರೂ. ನಷ್ಟ ಅಂದಾಜಿಸಲಾಗಿದೆ.

ಕಾರು ಢಿಕ್ಕಿ: ಬೈಕ್‌ ಸವಾರ ಸಾವು
ಕುಂಬಳೆ: ಸೀತಾಂಗೋಳಿ ಸೂರಂಬೈಲ್‌ನಲ್ಲಿ ಕಾರು ಢಿಕ್ಕಿ ಹೊಡೆದು ಬೈಕ್‌ ಸವಾರ ವಸಂತ (53) ಸಾವಿಗೀಡಾದರು. ಕಾರು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ವಸಂತ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

Untitled-1

Kasaragod ಅಪರಾಧ ಸುದ್ದಿಗಳು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

Kasaragod crime news

Kasaragod ಅಪರಾಧ ಸುದ್ದಿಗಳು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.