Kasaragod: ಅಪರಾಧ ಸುದ್ದಿಗಳು
Team Udayavani, Oct 4, 2024, 8:24 PM IST
ಶಾಲಾ ಬಸ್ ಢಿಕ್ಕಿ ಹೊಡೆದು ಪಾದಚಾರಿ ಸಾವು
ಕಾಸರಗೋಡು: ಖಾಸಗಿ ಶಾಲೆಯೊಂದರ ಬಸ್ ಢಿಕ್ಕಿ ಹೊಡೆದು ಪಾದಚಾರಿ ಹೊಸದುರ್ಗ ಕಿಳಿಕುಂಗರೆ ಮಣಾಲಿನ ಎಂ.ಕೃಷ್ಣನ್(75) ಸಾವಿಗೀಡಾದರು. ಹೊಸದುರ್ಗ ಕೋಟಚ್ಚೇರಿಯಲ್ಲಿ ಅಪಘಾತ ಸಂಭವಿಸಿದೆ.
ಘರ್ಷಣೆ : ಇಬ್ಬರಿಗೆ ಗಾಯ
ಮಂಜೇಶ್ವರ: ತೂಮಿನಾಡಿನ ಹೊಟೇಲೊಂದರ ಮುಂಭಾಗ ತಂಡಗಳ ಮಧ್ಯೆ ನಡೆದ ಘರ್ಷಣೆಯಲ್ಲಿ ಮಂಜೇಶ್ವರ ನಿವಾಸಿ ಅಶ್ವತ್ಥ್ ಮತ್ತು ಪ್ರಜ್ವಲ್ ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ನೇಣು ಬಿಗಿದು ಆತ್ಮಹತ್ಯೆ
ಮುಳ್ಳೇರಿಯ: ಕಾರಡ್ಕ ಕರ್ಮಂತೋಡಿ ಬಳಿಯ ಕುಂಡಡ್ಕ ನಿವಾಸಿ, ಕೂಲಿ ಕಾರ್ಮಿಕ ಕೇಶವನ್ ಕೆ(55) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮನೆ ಸಮೀಪದ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕೆರೆಗೆ ಬಿದ್ದು ಮಹಿಳೆ ಸಾವು
ಕುಂಬಳೆ: ಪೆರ್ಮುದೆ ಎಡಕ್ಕಾನದ ಕಾಂತಪ್ಪ ಗೌಡ ಅವರ ಪುತ್ರಿ ಲಕ್ಷ್ಮೀ ಕೆ.(46) ಮನೆ ಸಮೀಪದ ಕೆರೆಯಲ್ಲಿ ಬಿದ್ದು ಸಾವಿಗೀಡಾದ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರಿವೇಡಗಂನಲ್ಲಿ ಸ್ಫೋಟ : ಮನೆ ಮಾಲಕನಿಗೆ ಗಾಯ
ಕಾಸರಗೋಡು: ಬೇಡಗಂ ಪೊಲೀಸ್ ಠಾಣೆ ವ್ಯಾಪ್ತಿಯ ಕರಿವೇಡಗಂ ಬಂಡಂಗೈಯಲ್ಲಿ ಮನೆಯೊಳಗೆ ನ್ಪೋಟ ನಡೆದಿದ್ದು, ಮನೆ ಒಡೆಯ ಮೋಹನನ್(40) ಗಾಯಗೊಂಡಿದ್ದಾರೆ. ಇವರನ್ನು ಕಾಸರಗೋಡನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೇಡಗಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮನೆಯೊಳಗೆ ಪಟಾಕಿ ಸಿಡಿಸಿದಾಗ ಗಾಯಗೊಂಡಿದ್ದಾರೆನ್ನಲಾಗಿದೆ.
ಜನರಲ್ ಆಸ್ಪತ್ರೆಯಲ್ಲಿ ಯುವಕನ ದಾಂಧಲೆ
ಕಾಸರಗೋಡು: ನಗರದ ಜನರಲ್ ಆಸ್ಪತ್ರೆಯಲ್ಲಿ ತಮಿಳುನಾಡು ನಿವಾಸಿ ಯುವಕನೋರ್ವ ಮದ್ಯದಮಲಿನಲ್ಲಿ ದಾಂಧಲೆ ನಡೆಸಿದ್ದು, ಈ ಸಂದರ್ಭದಲ್ಲಿ ಸೆಕ್ಯೂರಿಟಿಗಳಿಬ್ಬರು ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್: ಕಾಡಾನೆಗಳ ದರ್ಶನ
Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.