Kasaragod ಲೋಕಸಭಾ ಕ್ಷೇತ್ರ ಯುಡಿಎಫ್ ತೆಕ್ಕೆಗೆ; ಉಣ್ಣಿತ್ತಾನ್‌ ಮತ್ತೆ ಜಯಭೇರಿ


Team Udayavani, Jun 5, 2024, 12:10 AM IST

Kasaragod ಲೋಕಸಭಾ ಕ್ಷೇತ್ರ ಯುಡಿಎಫ್ ತೆಕ್ಕೆಗೆ; ಉಣ್ಣಿತ್ತಾನ್‌ ಮತ್ತೆ ಜಯಭೇರಿ

ಕಾಸರಗೋಡು: ತ್ರಿಕೋನ ಸ್ಪರ್ಧೆ ನಡೆದ ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಯುಡಿಎಫ್‌ನ ಕಾಂಗ್ರೆಸ್‌ ಅಭ್ಯರ್ಥಿ ಸಂಸದ ರಾಜ್‌ಮೋಹನ್‌ ಉಣ್ಣಿತ್ತಾನ್‌ ಮತ್ತೆ ಜಯಭೇರಿ ಗಳಿಸಿದ್ದಾರೆ.

ಉಣ್ಣಿತ್ತಾನ್‌ ತನ್ನ ಸಮೀಪದ ಪ್ರತಿಸ್ಪರ್ಧಿ ಎಲ್‌ಡಿಎಫ್‌ನ ಸಿಪಿಎಂ ಅಭ್ಯರ್ಥಿ ಎಂ.ವಿ. ಬಾಲಕೃಷ್ಣ ಮಾಸ್ತರ್‌ ಅವರನ್ನು 1,01,649 ಮತಗಳ ಅಂತರದಿಂದ ಪರಾಭವಗೊಳಿಸಿದರು. ರಾಜ್ಯದಲ್ಲಿ ಎಡರಂಗ ಅಧಿಕಾರ
ದಲ್ಲಿದ್ದರೂ ಲೋಕಸಭೆಯಲ್ಲಿ ಯುಡಿಎಫ್‌ ಸಾಧನೆ ಮೆರೆದಿದೆ.

ಉಣ್ಣಿತ್ತಾನ್‌ 4,90,659, ಎಂ.ವಿ.ಬಾಲಕೃಷ್ಣನ್‌ ಮಾಸ್ತರ್‌ 3,90,010 ಮತಗಳನ್ನು ಪಡೆದರು. ಎನ್‌ಡಿಎ ಅಭ್ಯರ್ಥಿ ಬಿಜೆಪಿಯ ಎಂ.ಎಲ್‌. ಅಶ್ವಿ‌ನಿ 2,19,558 ಮತಗಳನ್ನು ಪಡೆದು ತೃತೀಯ ಸ್ಥಾನಕ್ಕೆ ತೃಪ್ತಿಪಟ್ಟರು.

ಸುಕುಮಾರಿ ಎಂ (ಬಹುಜನ ಸಮಾಜ ಪಾರ್ಟಿ)-1612, ರಾಜೇಶ್ವರಿ ಕೆ.ಆರ್‌. (ಸ್ವತಂತ್ರ)- 759, ಅನೀಶ್‌ ಪಯ್ಯನ್ನೂರು (ಸ್ವತಂತ್ರ) -507, ಬಾಲಕೃಷ್ಣನ್‌ ಎನ್‌(ಸ್ವತಂತ್ರ)- 628, ಮನೋಹರನ್‌ ಕೆ. (ಸ್ವತಂತ್ರ)- 804, ಎನ್‌. ಕೇಶವ ನಾಯ್ಕ (ಸ್ವತಂತ್ರ) -897 ಮತಗಳನ್ನು ಪಡೆದಿದ್ದಾರೆ.

2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕೇರಳದಲ್ಲಿ ಯುಡಿಎಫ್‌ನದ್ದೇ ಅಲೆ ಕಂಡುಬಂದಿತ್ತು. ಅಂದು ಒಟ್ಟು 20 ಲೋಕಸಭಾ ಕ್ಷೇತ್ರಗಳ ಪೈಕಿ 19ರಲ್ಲಿ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಗೆಲುವು ಸಾಧಿಸಿತ್ತು. ಸಿಪಿಎಂ ನೇತೃತ್ವದ ಎಡರಂಗ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು. ಆಲಪ್ಪುಳದಲ್ಲಿ ಎಲ್‌ಡಿಎಫ್‌ ಅಭ್ಯರ್ಥಿ ಎ.ಎಂ. ಆರೀಫ್‌ ಮಾತ್ರವೇ ಗೆಲುವು ಸಾಧಿಸಿದ್ದರು. ಕಾಸರಗೋಡು ಜಿಲ್ಲೆಯ ಐದು ಮತ್ತು ಕಣ್ಣೂರು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳು ಒಳಗೊಂಡ ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ 2019ರಲ್ಲಿ ಯುಡಿಎಫ್‌ನಿಂದ ರಾಜ್‌ಮೋಹನ್‌ ಉಣ್ಣಿತ್ತಾನ್‌, ಎಲ್‌ಡಿಎಫ್‌ನಿಂದ ಕೆ.ಪಿ. ಸತೀಶ್ಚಂದ್ರನ್‌, ಎನ್‌ಡಿಎಯಿಂದ ರವೀಶ ತಂತ್ರಿ ಕುಂಟಾರು ಸ್ಪರ್ಧಿಸಿದ್ದರು. ಉಣ್ಣಿತ್ತಾನ್‌ 40,438 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಕೇರಳದಲ್ಲಿ ಈ ಬಾರಿ ಯುಡಿಎಫ್‌ 18 ಸ್ಥಾನಗಳನ್ನು ಗೆದ್ದುಕೊಂಡಿದೆ. ಎಲ್‌ಡಿಎಫ್‌ ಮತ್ತು ಎನ್‌ಡಿಎ ತಲಾ ಒಂದು ಸೀಟು ಪಡೆದಿವೆ. ತೃಶ್ಶೂರಿನಲ್ಲಿ ಬಿಜೆಪಿಯ ಅಭ್ಯರ್ಥಿ, ಚಿತ್ರನಟ ಸುರೇಶ್‌ ಗೋಪಿ ಗೆದ್ದು ಕೇರಳದಲ್ಲಿ ಪ್ರಥಮವಾಗಿ ಬಿಜೆಪಿ ಖಾತೆ ತೆರೆದಿದೆ.

ಯುಡಿಎಫ್‌-ಬಿಜೆಪಿ ಘರ್ಷಣೆ
ಲೋಕಸಭಾ ಚುನಾವಣೆಯ ವಿಜಯೋತ್ಸವದ ಸಂದರ್ಭ ಮಾವುಂಗಾಲ್‌ನಲ್ಲಿ ಯುಡಿಎಫ್‌-ಬಿಜೆಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ ನಡೆಯಿತು. ಪೊಲೀಸರು ಲಾಠಿ ಪ್ರಹಾರ ನಡೆಸಿ ಅವರನ್ನು ಚದುರಿಸಿದರು. ಹಲವರು ಸಣ್ಣಪುಟ್ಟ ಗಾಯಗೊಂಡಿದ್ದಾರೆ.

ಟಾಪ್ ನ್ಯೂಸ್

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

13-rabiesd-ay

World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಬಿಜೆಪಿ, ಜೆಡಿಎಸ್‌ ಜತೆಯಾಗಿ ಸ್ಪರ್ಧೆ: ಸಾ.ರಾ. ಮಹೇಶ್‌

Election: ಬಿಜೆಪಿ, ಜೆಡಿಎಸ್‌ ಜತೆಯಾಗಿ ಸ್ಪರ್ಧೆ: ಸಾ.ರಾ. ಮಹೇಶ್‌

man-a

Kumble: ಕಾರು ಅಪಘಾತ; ಗಾಯಾಳು ಮಹಿಳೆ ಸಾವು

12

Madikeri: 2022ರಲ್ಲಿ ನಡೆದ ಮಹಿಳೆಯ ಹತ್ಯೆ: ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

Kasaragod: ಹಳಿಯಲ್ಲಿ ಸಿಲುಕಿದ ಸರಕು ರೈಲು: ಗೇಟು ತೆರೆಯದೆ ಸಂಚಾರ ಅಸ್ತವ್ಯಸ್ತ

Kasaragod: ಹಳಿಯಲ್ಲಿ ಸಿಲುಕಿದ ಸರಕು ರೈಲು: ಗೇಟು ತೆರೆಯದೆ ಸಂಚಾರ ಅಸ್ತವ್ಯಸ್ತ

madikeri

Madikeri: ಅಪಘಾತದಲ್ಲಿ ವಿರಾಜಪೇಟೆಯ ಶಿಕ್ಷಕಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.