ಕಾಸರಗೋಡು: ಒಂದು ಕಿಲೋ ಚಿನ್ನ ಸಹಿತ ಇಬ್ಬರ ಬಂಧನ


Team Udayavani, Nov 28, 2022, 5:05 PM IST

ಕಾಸರಗೋಡು: ಒಂದು ಕಿಲೋ ಚಿನ್ನ ಸಹಿತ ಇಬ್ಬರ ಬಂಧನ

ಕಾಸರಗೋಡು: ವಾಹನ ತಪಾಸಣೆ ಸಂದರ್ಭದಲ್ಲಿ ಕಾರನ್ನು ತಪಾಸಣೆ ನಡೆಸಿದಾಗ ಒಂದು ಕಿಲೋ ಚಿನ್ನ ಪತ್ತೆಯಾಗಿದ್ದು, ಈ ಸಂಬಂಧ ಕಾಸರಗೋಡು ಆಯಿಷಾ ಮಂಜಿಲ್‌ನ ವಸೀಮುದ್ದೀನ್‌(32) ಮತ್ತು ಕೆರಿಂಬನೈಕಲ್‌ ವೀಟಿಲ್‌ನ ಮೊಹಮ್ಮದ್‌ ಸಾಲಿ(49)ಯನ್ನು ಪೊಲೀಸರು ಬಂಧಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯ ತಾಳೆಕ್ಕೋಡುನಲ್ಲಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದಾಗ ಚಿನ್ನ ಪತ್ತೆಯಾಯಿತು.

ಯುವಕನ ಅಪಹರಣ
ಕಾಸರಗೋಡು: ಪುದಿಯಕೋಟದಿಂದ ಯುವಕನನ್ನು ಕಾರಿನಲ್ಲಿ ಅಪಹರಿಸಿ 17 ಸಾವಿರ ರೂ. ಹಾಗು ಸ್ಕೂಟರ್‌ ಕೀಲಿ ಗೊಂಚಲು ಎಗರಿಸಿದ ಬಗ್ಗೆ ಹೊಸದುರ್ಗ ಪೊಲೀಸರಿಗೆ ದೂರು ನೀಡಲಾಗಿದೆ.

ಹೊಸದುರ್ಗ ಪೂಂಜಾವಿ ಕಡಪ್ಪುರದ ಅಬೂಬಕ್ಕರ್‌ ಸಿದ್ದಿಕ್‌(45) ನೀಡಿದ ದೂರಿನಂತೆ ಅಶ್ರಫ್‌, ಹಾಶಿಂ ಪಾಣತ್ತೂರು, ಅನ್ವರ್‌ ಆವಿಕೆರೆ ಹಾಗು ಇತರ ಇಬ್ಬರ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.

ಮನೆ ಮೇಲಿನಿಂದ ಬಿದ್ದು ಗಾಯಗೊಂಡ ಮಹಿಳೆಯ ಸಾವು
ಕಾಸರಗೋಡು: ಮನೆ ಮೇಲಿನ ನೀರಿನ ಟ್ಯಾಂಕ್‌ ಶುಚೀಕರಿಸಲೆಂದು ಮೇಲೇರುತ್ತಿದ್ದಾಗ ಆಯ ತಪ್ಪಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಹೊಸದುರ್ಗ ನಾರ್ತ್‌ ಚಿತ್ತಾರಿಯ ಸತ್ತಾರ್‌ ಅವರ ಪತ್ನಿ ಸಮೀರಾ(40) ಸಾವಿಗೀಡಾದರು. ನ.25 ರಂದು ನೀರಿನ ಟ್ಯಾಂಕ್‌ ಶುಚೀಕರಿಸಲೆಂದು ಮೇಲೇರುತ್ತಿದ್ದಾಗ ಬಿದ್ದು ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಫ‌ಲಕಾರಿಯಾಗಿಲ್ಲ.

ಬಾಲಕನಿಗೆ ಲೈಂಗಿಕ ಕಿರುಕುಳ : ಬಂಧನ
ಕಾಸರಗೋಡು: ಬಾಲಕನಿಗೆ ಸಲಿಂಗರತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧೂರು ಪಂಚಾಯತ್‌ ಕುಂಜಾರ್‌ನ ಮುಹಮ್ಮದ್‌ನನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.

ಈತನ ವಿರುದ್ಧ ಪೋಕ್ಸೊ ಕೇಸು ದಾಖಲಿಸಿದ್ದಾರೆ. ನ.26 ರಂದು ಬಾಲಕನಿಗೆ ಮದ್ಯ ಕುಡಿಸಿ ಕಿರುಕುಳ ನೀಡಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು.

ಎಂಡಿಎಂಎ ಸಹಿತ ಮೂವರ ಬಂಧನ
ಕಾಸರಗೋಡು: ಕಾರಿನಲ್ಲಿ ಸಾಗಿಸುತ್ತಿದ್ದ 2.68 ಗ್ರಾಂ ಎಂಡಿಎಂಎ ಸಹಿತ ಮೂವರನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. ಅಜಾನೂರು ಇಟ್ಟಮ್ಮಲ್‌ ನಸ್ರತ್‌ ಕ್ವಾರ್ಟರ್ಸ್‌ನ ಪಿ.ಎ.ಮನ್ಸೂರು(22), ಸಿ.ಮುಹಮ್ಮದ್‌ ಆದಿಲ್‌(27) ಮತ್ತು ಕೊಳವಯಲ್‌ ಮುಹಮ್ಮದ್‌ ನೌಫಲ್‌(31)ನನ್ನು ಬಂಧಿಸಲಾಯಿತು. ಇಕ್ಬಾಲ್‌ ಹೈಯರ್‌ ಸೆಕೆಂಡರಿ ಶಾಲಾ ಜಂಕ್ಷನ್‌ ಪರಿಸರದಿಂದ ಎಂಡಿಎಂಎ ವಶಪಡಿಸಲಾಗಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

6

Arrested: ಪತ್ನಿಯ ಕೊ*ಲೆಗೆ ಯತ್ನ; ಪತಿಯ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.