Kasaragod: ಸಚಿತಾ ರೈ ವಿರುದ್ಧ ಇನ್ನೆರಡು ಕೇಸು ದಾಖಲು
Team Udayavani, Oct 24, 2024, 10:00 PM IST
ಕಾಸರಗೋಡು: ಕೇಂದ್ರ-ರಾಜ ಸರಕಾರಿ ಸಂಸ್ಥೆಗಳಲ್ಲಿ ಉದ್ಯೋಗ ದೊರಕಿಸುವುದಾಗಿ ನಂಬಿಸಿ ಹಲವರಿಂದ ಲಕ್ಷಾಂತರ ರೂ. ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಶೇಣಿ ಬಲ್ತಕಲ್ಲು ನಿವಾಸಿ ಸಚಿತಾ ರೈ (27)ವಿರುದ್ಧ ಬದಿಯಡ್ಕ ಪೊಲೀಸರು ಇನ್ನೆರಡು ಕೇಸುಗಳನ್ನು ದಾಖಲಿಸಿದ್ದಾರೆ. ನೆಕ್ರಾಜೆ ಮಾವಿನಕಟ್ಟೆ ನಿವಾಸಿ ರಹಿಯಾನತ್ (35) ಮತ್ತು ಕುಂಬ್ಡಾಜೆ ಉಬ್ರಂಗಳದ ಡಯಾನ (27) ನೀಡಿದ ದೂರಿನಂತೆ ಕೇಸು ದಾಖಲಿಸಲಾಗಿದೆ.
ಕಾಸರಗೋಡು ಸರಕಾರಿ ಶಾಲೆಯಲ್ಲಿ ಶಿಕ್ಷಕಿ ಹುದ್ದೆ ದೊರಕಿಸುವುದಾಗಿ ನಂಬಿಸಿ ರಹಿಯಾನತ್ರಿಂದ 2024 ಜ. 22ರಂದು 2 ಲಕ್ಷ ರೂ. ಪಡೆದು ವಂಚಿಸಿದ್ದಾಗಿ ಆರೋಪಿಸಲಾಗಿದೆ. ಕೇಂದ್ರೀಯ ವಿದ್ಯಾಲಯದಲ್ಲಿ ಯುಡಿ ಕ್ಲರ್ಕ್ ಹುದ್ದೆ ದೊರಕಿಸಿಕೊಡುವುದಾಗಿ ನಂಬಿಸಿ 1.48 ಲಕ್ಷ ರೂ. ಪಡೆದು ಸಚಿತಾ ರೈ ವಂಚಿಸಿದ್ದಾಗಿ ಡಯಾನ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
ಈ ಮೂಲಕ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸಚಿತಾ ರೈ ವಿವಿಧ ಠಾಣೆಗಳಲ್ಲಿ ದಾಖಲಾದ ಕೇಸುಗಳ ಸಂಖ್ಯೆ 11ಕ್ಕೇರಿತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.