![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Nov 21, 2023, 11:22 PM IST
ಕಾಸರಗೋಡು: ಪೈಪ್ಲೈನ್ಗಾಗಿ ನೆಲ ಅಗೆಯುತ್ತಿದ್ದಾಗ ಸಮೀಪದ ಗೋಡೆ ಕುಸಿದು ಬಿದ್ದು ಇಬ್ಬರು ಅನ್ಯರಾಜ್ಯ ಕಾರ್ಮಿಕರು ಸಾವಿಗೀಡಾದ ಘಟನೆ ನಗರದಲ್ಲಿ ಮಂಗಳವಾರ ಸಂಭವಿಸಿದೆ.
ಕರ್ನಾಟಕದ ಚಿಕ್ಕಮಗಳೂರು ಮೂಲದ ಬಾಸಯ್ಯ (40) ಮತ್ತು ಕೊಪ್ಪಳ ಮೂಲದ ಲಕ್ಷ್ಮಪ್ಪ (43) ಮೃತಪಟ್ಟವರು. ಇಬ್ಬರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಸರಗೋಡು ಮಾರ್ಕೆಟ್ ರೋಡ್ನ ಪರಿಸರದಲ್ಲಿ ಈ ಅವಘಡ ಸಂಭವಿಸಿದೆ.
ಕುಸಿತ ಮಣ್ಣಿನಡಿಗೆ ಸಿಲುಕಿದ ಕಾರ್ಮಿಕರನ್ನು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಸರ್ಕಲ್ ಇನ್ಸ್ಪೆಕ್ಟರ್ ಪಿ. ಅಜಿತ್ ಕುಮಾರ್ ನೇತೃತ್ವದ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಮೇಲೆತ್ತಿದರು.
You seem to have an Ad Blocker on.
To continue reading, please turn it off or whitelist Udayavani.