ಕಾಸರಗೋಡು ಮೆಡಿಕಲ್‌ ಕಾಲೇಜ್‌ ಕಟ್ಟಡಕ್ಕೆ  80 ಕೋ. ರೂ.ಮಂಜೂರು


Team Udayavani, Jul 8, 2018, 6:30 AM IST

07ksde10.jpg

ಕಾಸರಗೋಡು: ನನೆಗುದಿಗೆ ಬಿದ್ದಿರುವ, ಉಕ್ಕಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿದ ಕಾಸರಗೋಡು ಮೆಡಿಕಲ್‌ ಕಾಲೇಜು ಕಟ್ಟಡ ನಿರ್ಮಾಣ ಪ್ರಕ್ರಿಯೆಗೆ ಮತ್ತೆ ಜೀವ ಬಂದಿದ್ದು, ಆಸ್ಪತ್ರೆ ಬ್ಲಾಕ್‌ಗೆ 80 ಕೋಟಿ ರೂ. ಮಂಜೂರು ಮಾಡಲಾಗಿದೆ. ಗುತ್ತಿಗೆ ಒಪ್ಪಂದ ಪ್ರಕ್ರಿಯೆ ಪೂರ್ತಿಗೊಳಿಸಿ ಜು.11 ರಂದು ತಿರುವನಂತಪುರದಲ್ಲಿ ನಡೆಯಲಿರುವ ಟೆಕ್ನಿಕಲ್‌ ಸಮಿತಿ ಅಂಗೀಕಾರ ನೀಡಲಿದೆ.

ಕಾಸರಗೋಡು ಮೆಡಿಕಲ್‌ ಕಾಲೇಜು ಕಟ್ಟಡ ನಿರ್ಮಾಣ ಗಾಮಗಾರಿ ನಡೆಸಿ ಶೀಘ್ರದಲ್ಲೇ ಜನರ ಸೇವೆಗೆ ತೆರೆದುಕೊಡಬೇಕೆಂದು ಆಗ್ರಹಿಸಿ ಹಲವು ರಾಜಕೀಯ ಪಕ್ಷಗಳು, ಸಂಘಟನೆಗಳು ನಿರಂತರವಾಗಿ ಚಳವಳಿ ನಡೆಸಿತ್ತು. ಜು.5 ರಂದು ಬಿಜೆಪಿ ಕಾಸರಗೋಡು ಮತ್ತು ಮಂಜೇಶ್ವರ ಮಂಡಲ ಸಮಿತಿ ನೇತೃತ್ವದಲ್ಲಿ ಉಕ್ಕಿನಡ್ಕದ ಅಪೂರ್ಣ ಮೆಡಿಕಲ್‌ ಕಾಲೇಜು ಸಮುತ್ಛಯದಲ್ಲಿ ಹಟ್ಟಿ ನಿರ್ಮಿಸಿ ಜಾನುವಾರುಗಳನ್ನು ಕಟ್ಟಿ ಹಾಕಿ ಸರಕಾರದ ವಿಳಂಬ ನೀತಿಯನ್ನು ಪ್ರತಿಭಟಿಸಿತ್ತು. ಈ ಬೆನ್ನಿಗೆ 80 ಕೋಟಿ ರೂ. ಅನುಮತಿ ಲಭಿಸಿದೆ.

ತತ್‌ಕ್ಷಣ  ಕಾಮಗಾರಿ ಆರಂಭ
ಚೆನ್ನೈ ಕೇಂದ್ರೀಕರಿಸಿ ಕಾರ್ಯಾ ಚರಿಸುವ ಆರ್‌.ಆರ್‌.ಬಿಲ್ಡರ್ಸ್‌ ಎಂಬ ಸಂಸ್ಥೆಗೆ ಕಟ್ಟಡ ನಿರ್ಮಾಣ ಗಾಮಗಾರಿಯನ್ನು ವಹಿಸಿಕೊಡಲಾಗಿದೆ. ಕೆಲವು ದಿನಗಳ ಹಿಂದೆ ಸಂಸ್ಥೆಯ ಪ್ರಮುಖರು ಮೆಡಿಕಲ್‌ ಕಾಲೇಜು ಸಮುತ್ಛಯಕ್ಕೆ ಬಂದಿದ್ದು, ಭೂಮಿ ಪೂಜೆ ನಡೆಸಿದ್ದರು. ಮಳೆ ಕಡಿಮೆಯಾದ ತತ್‌ಕ್ಷಣ ನಿರ್ಮಾಣ ಕಾಮಗಾರಿ ಆರಂಭಿಸಲಿದೆ.

ಕಾಸರಗೋಡು ವಿಧಾನಸಭಾ ಕ್ಷೇತ್ರದ ಬದಿಯಡ್ಕ ಗ್ರಾಮ ಪಂ. ನ ಉಕ್ಕಿನಡ್ಕದಲ್ಲಿ ಕಾಸರಗೋಡು ಮೆಡಿಕಲ್‌ ಕಾಲೇಜು ನಿರ್ಮಾಣ ಕಾಮಗಾರಿ ಆರಂಭಿಸಿ ಅರ್ಧದಲ್ಲೇ ಮೊಟಕುಗೊಂಡಿದೆ. ಈ ಹಿಂದೆ ಈ ಕಾಲೇಜಿಗೆ ಕಾಸರಗೋಡು ಪ್ಯಾಕೇಜ್‌ನಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಆಡ್ಮಿನಿಸ್ಟ್ರೇಟಿವ್‌ ಬ್ಲಾಕ್‌ ನಿರ್ಮಾಣ ಕಾರ್ಯ ಆರಂಭಿಸಲಾಗಿದ್ದರೂ, ಆ ಬಳಿಕ ಕಾಮಗಾರಿ ನಿಲುಗಡೆಗೊಳಿಸಲಾಗಿತ್ತು. 

ನಬಾರ್ಡ್‌ನಿಂದ ಲಭಿಸಿದ 69 ಕೋಟಿ ರೂ.ಗೆ ಟೆಂಡರ್‌ ಆಗಿದ್ದರೂ, ಆ ಬಳಿಕ ರದ್ದುಗೊಳಿಸಲಾಗಿತ್ತು. ತಾಂತ್ರಿಕ ಕಾರಣದ ನೆಪದಲ್ಲಿ ಟೆಕ್ನಿಕಲ್‌ ಸಮಿತಿ ಟೆಂಡರ್‌ ರದ್ದುಗೊಳಿಸಿತ್ತು. ಇದರೊಂದಿಗೆ ಮೆಡಿಕಲ್‌ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ ನಿಲುಗಡೆಗೊಂಡು ಈ ಕಾಲೇಜು ಇಲ್ಲಿಂದ ಬೇರೆಡೆಗೆ ಸ್ಥಳಾಂತರಗೊಳ್ಳುವ ಆತಂಕಕ್ಕೂ ಕಾರಣವಾಗಿತ್ತು. ಇದೀಗ ಮೆಡಿಕಲ್‌ ಕಾಲೇಜು ಕಟ್ಟಡ ನಿರ್ಮಾಣಕ್ಕೆ 80,26,77,000 ರೂ. ಅನುಮತಿ ಲಭಿಸಿದೆ.

ಉಕ್ಕಿನಡ್ಕದ ಆರು ಎಕರೆ ಸ್ಥಳದಲ್ಲಿ ಎಂಡೋ ಸಂತ್ರಸ್ತರ ಮತ್ತು ಇತರರ ಚಿಕಿತ್ಸೆಗಾಗಿ ಮೆಡಿಕಲ್‌ ಕಾಲೇಜು ನಿರ್ಮಾಣಕ್ಕೆ ಯೋಜಿಸಲಾಗಿತ್ತು. 2013ರ  ನ. 30 ರಂದು ಅಂದಿನ ಮುಖ್ಯಮಂತ್ರಿ ಉಮ್ಮನ್‌ಚಾಂಡಿ ಮೆಡಿಕಲ್‌ ಕಾಲೇಜಿಗೆ ಶಿಲಾನ್ಯಾಸ ಮಾಡಿದ್ದರು. ಎರಡು ವರ್ಷದೊಳಗೆ ಮೆಡಿಕಲ್‌ ಕಾಲೇಜು ಕಟ್ಟಡ ನಿರ್ಮಾಣಗೊಳ್ಳಲಿದೆ ಎಂದು ಘೋಷಿಸಲಾಗಿತ್ತು. ಅಂದು ಮೂಲ ಸೌಕರ್ಯ ಕಲ್ಪಿಸಲು ಒಂದು ಕೊನಿರ್ಮಾಣ ಕಾಮಗಾರಿ ಮೊಟಕುಗೊಂಡಿತ್ತು.

ನಿರಂತರ ಹೋರಾಟ 
ನಿರಂತರ ಹೋರಾಟ ನಡೆದಿದ್ದರೂ, ಪ್ರಯೋಜನವಾಗಲಿಲ್ಲ. ಬಿಜೆಪಿ ನೇತೃತ್ವದಲ್ಲಿ ಹಟ್ಟಿ ನಿರ್ಮಿಸಿ ಜಾನುವಾರು ಗಳನ್ನು ಕಟ್ಟಿ ಹಾಕುವ ಮೂಲಕ ನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿತ್ತು.

385 ಕೋಟಿ ರೂ ವೆಚ್ಚ ನಿರೀಕ್ಕೆ 
ಕಾಸರಗೋಡು ಮೆಡಿಕಲ್‌ ಕಾಲೇಜಿಗೆ ಒಟ್ಟು 385 ಕೋಟಿ ರೂ. ವೆಚ್ಚ ನಿರೀಕ್ಷಿಸಲಾಗಿದೆ. ವಿದ್ಯುದ್ದೀಕರಣಕ್ಕೆ  ಆರು ಕೋಟಿ ರೂ., ರೆಸಿಡೆನ್ಶಿಯಲ್‌ ಸೌಕರ್ಯಗಳಿಗೆ ಮತ್ತು ಹಾಸ್ಟೆಲ್‌ ಮೊದಲಾದ ಕಟ್ಟಡಗಳ ನಿರ್ಮಾಣಕ್ಕೆ 150 ಕೋಟಿ ರೂ. ವೆಚ್ಚ ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.