ಕಾಸರಗೋಡು: ಬಿಜೆಪಿಯಿಂದ ವಿಜಯೋತ್ಸವ; ಸಿಹಿ ತಿಂಡಿ, ಪಾಯಸ ವಿತರಣೆ


Team Udayavani, Jun 1, 2019, 6:10 AM IST

31KSDE7

ಕಾಸರಗೋಡು: ಕೇಂದ್ರದಲ್ಲಿ ಮೋದಿ ಸರಕಾರದ ರಚನೆ ಹಾಗೂ ಪ್ರಮಾಣ ಸ್ವೀಕಾರದ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಾದ್ಯಂತ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಅಲ್ಲಲ್ಲಿ ಮೆರವಣಿಗೆ ನಡೆಸಿದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿತಿಂಡಿ, ಪಾಯಸ, ಐಸ್‌ಕ್ರೀಂ ಮೊದಲಾದವುಗಳನ್ನು ವಿತರಿಸಿದರು.

ಕಾಸರಗೋಡು ನಗರದ ಕರಂದಕ್ಕಾಡು ಮೊದಲಾದೆಡೆಗಳಲ್ಲಿ ಬಿಗ್‌ ಸ್ಕ್ರೀನ್‌ ಸ್ಥಾಪಿಸಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವನ್ನು ನೇರ ಪ್ರಸಾರ ನಡೆಸಲಾಯಿತು. ಇದರ ಮುಂದೆ ಭಾರೀ ಸಂಖ್ಯೆಯಲ್ಲಿ ಜನರು ನೆರೆದಿದ್ದರು.

ಮೋದಿ ಫ್ಯಾನ್ಸ್‌ ಚಾರಿಟೇಬಲ್ ಟ್ರಸ್ಟ್‌ನ ಆಶ್ರಯದಲ್ಲಿ ಮೈಲಾಟಿಯಲ್ಲಿ ಸಿಹಿ ವಿತರಿಸಿದರು. ಬಿಜೆಪಿ ಜಿಲ್ಲಾ ಮೀಡಿಯಾ ಸೆಲ್ ಸಂಚಾಲಕ ವೈ.ಕೃಷ್ಣದಾಸ್‌ ಉದ್ಘಾಟಿಸಿದರು. ಮೋದಿ ಫ್ಯಾನ್ಸ್‌ ಚಾರಿಟೆಬಲ್ ಟ್ರಸ್ಟ್‌ ಅಧ್ಯಕ್ಷ ಕೆ.ಪ್ರತಾಪನ್‌ ಅಧ್ಯಕ್ಷತೆ ವಹಿಸಿದರು. ಉಪಾಧ್ಯಕ್ಷ ದಿನೇಶನ್‌, ಬಿಜೆಪಿ ಉದುಮ ಪಂಚಾಯತ್‌ ಉಪಾಧ್ಯಕ್ಷ ಸುರೇಶ್‌ ಎರೋಲ್, ಬಿಜೆಪಿ ಪಳ್ಳಿಕೆರೆ ಪಂಚಾಯತ್‌ ಕಾರ್ಯದರ್ಶಿ ಲೋಕೇಶ್‌ ಬಟ್ಟತ್ತೂರು, ಅನಿಲ್ ಕುಮಾರ್‌, ಅಶೋಕನ್‌, ವಿನೋದ್‌, ಶ್ರೀಕೇಶ್‌, ಪುರುಷೋತ್ತಮನ್‌ ಮೊದಲಾದವರು ನೇತೃತ್ವ ನೀಡಿದರು.

ಕೇಂದ್ರದಲ್ಲಿ ಮೋದಿ ಸರಕಾರ ರಚನೆ ಹಾಗೂ ಪ್ರಮಾಣ ಸ್ವೀಕಾರದ ಹಿನ್ನೆಲೆಯಲ್ಲಿ ಬಿಜೆಪಿ ಮಂಜೇಶ್ವರ ಪಂಚಾಯತ್‌ ಸಮಿತಿ ವತಿಯಿಂದ ಹೊಸಂಗಡಿ ಪೇಟೆಯಲ್ಲಿ ವಿಜಯೋತ್ಸವ ಮೆರವಣಿಗೆ ನಡೆಯಿತು. ಪಟಾಕಿ ಸಿಡಿಸಿ, ಸಿಹಿತಿಂಡಿ ವಿತರಿಸಲಾಯಿತು. ಜಿಲ್ಲಾ ಸಮಿತಿ ಸದಸ್ಯ ಪದ್ಮನಾಭ ಕಡಪ್ಪುರ, ಮಂಡಲ ಕಾರ್ಯದರ್ಶಿ ಆದರ್ಶ್‌ ಬಿ.ಎಂ, ಒಬಿಸಿ ಮೋರ್ಚಾ ರಾಜ್ಯ ಸಮಿತಿ ಸದಸ್ಯ ನವೀನ್‌ ರಾಜ್‌ ಕೆ.ಜಿ, ದೇವರಾಜ್‌ ಎಂ.ಎಸ್‌, ದಯಾಪ್ರಸನ್ನ ಆಚಾರ್ಯ, ರಂಜಿತ್‌ ಬಾಬು ನೇತೃತ್ವ ನೀಡಿದರು.

ಮೀಯಪದವು ಜಂಕ್ಷನ್‌ನಲ್ಲಿ ಯುವಮೋರ್ಚಾ, ಬಿಜೆಪಿ ನೇತೃತ್ವದಲ್ಲಿ ಸಂಭ್ರಮ ಆಚರಿಸಲಾಯಿತು. ಮಜಿಬೈಲ್ನ ಪಜಿಂಗಾರ್‌ ಬಿಜೆಪಿ ಕಾರ್ಯಕರ್ತರು ಮೆರವಣಿಗೆ ನಡೆಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ವರ್ಕಾಡಿಯಲ್ಲಿ ಯುವಮೋರ್ಚಾ ಕಾರ್ಯಕರ್ತರು, ನಮೋ ಬಳಗ ಮಜೀರ್ಪಳ್ಳ ವತಿಯಿಂದ ಮುರತ್ತಣೆಯಿಂದ ಮಜೀರ್‌ಪಳ್ಳ ಜಂಕ್ಷನ್‌ ವರೆಗೆ ವಿಜಯೋತ್ಸವ ಮೆರವಣಿಗೆ ನಡೆಸಿದರು. ಮಂಜೇಶ್ವರ ಕೆದುಂಬಾಡಿಯಲ್ಲಿ, ತೂಮಿನಾಡಿನಲ್ಲಿ ವಿಜಯೋತ್ಸವ ಆಚರಿಸಲಾಯಿತು. ಮಂಗಲ್ಪಾಡಿ ಪಂಚಾಯತ್‌ ಬಿಜೆಪಿ ವತಿಯಿಂದ ಉಪ್ಪಳದಲ್ಲಿ ಮೆರವಣಿಗೆ ನಡೆಯಿತು. ಬೆಳ್ಳೂರು ಪಂಚಾಯತ್‌ ಬಿಜೆಪಿ ಸಮಿತಿ ವತಿಯಿಂದ ವಿಜಯೋತ್ಸವ ನಡೆಯಿತು.

ಟಾಪ್ ನ್ಯೂಸ್

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.