ಕಾಸರಗೋಡು-ಕೊಚ್ಚುವೇಲಿ: 66,405 ಕೋಟಿ ರೂ. ಯೋಜನೆ

ಹೈಸ್ಪೀಡ್‌ ರೈಲು : ತಜ್ಞರ ತಂಡದಿಂದ ಅಧ್ಯಯನ

Team Udayavani, Nov 21, 2019, 4:55 AM IST

gg-7

ಕಾಸರಗೋಡು: ಕೇರಳ ರಾಜ್ಯದ ಮಹತ್ವಾಕಾಂಕ್ಷೆಯ ಯೋಜನೆಯಾದ ಕಾಸರಗೋಡು- ಕೊಚ್ಚುವೇಲಿ ಹೈಸ್ಪೀಡ್‌ ರೈಲು ಕಾರಿಡಾರ್‌ ಯೋಜನೆಯನ್ನು ಸಾಕಾರಗೊಳಿಸಲು ತಜ್ಞರ ತಂಡ ಕಾಸರಗೋಡು ಸಹಿತ ವಿವಿಧೆಡೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದೆ. ಈಗಾಗಲೇ ಹೈಸ್ಪೀಡ್‌ ರೈಲು ಕಾರಿಡಾರ್‌ ಯೋಜನೆಯ ಸಾಧ್ಯತೆಯ ಬಗ್ಗೆ ಕೇರಳ ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೇರಳ ರೈಲ್ವೇ ಡೆವಲಪ್‌ಮೆಂಟ್‌ ಕಾರ್ಪೊರೇಶನ್‌ತಜ್ಞರ ತಂಡ ಮಲಬಾರ್‌ ಪ್ರದೇಶಕ್ಕೆ ಮುಂದಿನ ತಿಂಗಳು ಭೇಟಿ ನೀಡಿ ಪರಿಶೋಧಿಸಲಿದೆ. ಆ ಬಳಿಕ ಜನವರಿ ತಿಂಗಳಲ್ಲಿ ವರದಿಯನ್ನು ಸಮರ್ಪಿಸಲಿದೆ.

ಪ್ಯಾರಿಸ್‌ನ ಸಿಸ್ಟ್ರ ಕಂಪೆನಿ ಈಗಾಗಲೇ ಕೇರಳದಲ್ಲಿ ಹೈಸ್ಪೀಡ್‌ ರೈಲು ಕಾರಿಡಾರ್‌ ಯೋಜನೆ ಸಾಕಾರಗೊಳಿಸುವ ಬಗ್ಗೆ ಅಧ್ಯಯನ ವರದಿ ಸಲ್ಲಿಸಿದೆ. ಹೈಸ್ಪೀಡ್‌ ರೈಲು ಯೋಜನೆಯ ಕುರಿತಾಗಿ ಪ್ರಸ್ತಾವ ಬಂದ ಐದು ವರ್ಷಗಳ ಬಳಿಕ ಸಾಧ್ಯತೆ ಅಧ್ಯಯನ ವರದಿಯನ್ನು ಸಲ್ಲಿಸಲಾಗಿದೆ. ಕಾಸರಗೋಡಿನಿಂದ ಕೊಚ್ಚುವೇಲಿ ತನಕ ನಾಲ್ಕು ಹಂತಗಳಲ್ಲಿ ಯೋಜನೆಯನ್ನು ಸಾಕಾರಗೊಳಿಸಲು ಯೋಜಿಸಲಾಗಿದೆ.

ಪ್ರಥಮ ಅಲೈನ್‌ಮೆಂಟ್‌ನಲ್ಲಿ ಪ್ರಸ್ತುತ ಇರುವ ರೈಲು ಹಳಿಗೆ ಸಮಾನಾಂತರವಾಗಿ ಮೇಲ್ಭಾಗದಲ್ಲಿ ರೈಲು ಹಳಿ ನಿರ್ಮಿಸುವ ಯೋಜನೆ ಬಗ್ಗೆ ಚಿಂತಿಸಲಾಗಿತ್ತು. ಆದರೆ ರೈಲು ಹಳಿಯಲ್ಲಿ ಸಮಾನಾಂತರವಾಗಿ ಕಾಂಕ್ರೀಟ್‌ ಕಂಬಗಳನ್ನು ನಿರ್ಮಿಸಿ ಆಗಸದಲ್ಲಿ ಹಳಿ ಬರುವ ಸಂದರ್ಭದಲ್ಲಿ ನಗರ ಪ್ರದೇಶದ ಕಟ್ಟಡಗಳನ್ನು ಮುರಿದು ತೆಗೆಯಬೇಕಾದ ಪರಿಸ್ಥಿತಿ ಎದುರಾಗಲಿದೆ. ಇದು ಭೂಸ್ವಾಧೀನಕ್ಕಿಂತ ಅಧಿಕ ವೆಚ್ಚವಾಗಲಿದೆ. ಈ ಹಿನ್ನೆಲೆಯಲ್ಲಿ ಕಾಸರಗೋಡು, ಕಣ್ಣೂರು, ಕಲ್ಲಿಕೋಟೆ ಜಿಲ್ಲೆಗಳಲ್ಲಿ ಅಲೈನ್‌ಮೆಂಟ್‌ ಬದಲಾಯಿಸ ಲಾಯಿತು. ಪ್ರಸ್ತುತ ಇರುವ ರೈಲು ಹಳಿಗೆ ಸಮಾನಾಂತರವಾಗಿ ನಗರಗಳನ್ನು ಬಿಟ್ಟು ನೂತನ ಅಲೈನ್‌ಮೆಂಟ್‌ ಅನುಸರಿಸಿ ಸಾಧ್ಯತಾ ಅಧ್ಯಯನ ವರದಿಯನ್ನು ತಯಾರಿಸಲಾಗಿದೆ. ಇದರಂತೆ ಹೆಚ್ಚಿನ ಪ್ರಮಾಣದಲ್ಲಿ ಭೂಸ್ವಾಧೀನ ಮಾಡಬೇಕಾಗಿ ಬರಲಿದೆ.

ಕಾಲಾವಧಿಯಲ್ಲಿ ಯೋಜನೆ ಸಾಕಾರ
ಹೈಸ್ಪೀಡ್‌ ರೈಲು ಕಾರಿಡಾರ್‌ ಯೋಜನೆಯ ಒಟ್ಟು ವೆಚ್ಚದ ಶೇ.26 ರಷ್ಟು ಕೇಂದ್ರ ಮತ್ತು ರಾಜ್ಯ ಸರಕಾರ ವಹಿಸಲಿದೆ. ಉಳಿದ ಮೊತ್ತವನ್ನು ಜಪಾನ್‌ ಬ್ಯಾಂಕ್‌, ಎ.ಡಿ.ಬಿ.ಐ. ಮೊದಲಾದ ಸಂಸ್ಥೆಗಳಿಂದ ಸಾಲ ಪಡೆಯಲಾಗುವುದು. ಮೂರು ವರ್ಷಗಳೊಳಗೆ ಭೂಸ್ವಾಧೀನ ಸಾಧ್ಯವಾದರೆ ನಿರೀಕ್ಷೆಯಂತೆ ನಿಗದಿತ ಕಾಲಾವಧಿಯಲ್ಲಿ ಯೋಜನೆ ಸಾಕಾರಗೊಳ್ಳಲಿದೆ.
– ವಿ.ಅಜಿತ್‌ ಕುಮಾರ್‌, ಎಂ.ಡಿ. ಕೇರಳ ರೈಲ್ವೇ ಡೆವಲಪ್‌ಮೆಂಟ್‌ ಕಾರ್ಪೊರೇಶನ್‌.

-ಹೈಸ್ಪೀಡ್‌ ರೈಲುಗಳಿಗೆ ಕಾಸರಗೋಡು, ಕಣ್ಣೂರು, ಕಲ್ಲಿಕೋಟೆ, ತಿರೂರು, ತೃಶ್ಶೂರು, ಎರ್ನಾಕುಳಂ, -ಕೋಟ್ಟಯಂ, ಚೆಂಗನ್ನೂರು, ಕೊಲ್ಲಂ, ಕೊಚ್ಚುವೇಲಿಯಲ್ಲಿ ನಿಲುಗಡೆ ನೀಡಲಾಗುವುದು.
-ಮಹತ್ವಾಕಾಂಕ್ಷೆಯ ಈ ಯೋಜನೆಗೆ ಒಟ್ಟು ವೆಚ್ಚ 66,405 ಕೋಟಿ ರೂ.
-ಮಾರ್ಗ: ಕಾಸರಗೋಡು-ಕೊಚ್ಚುವೇಳಿ ಒಟ್ಟು ದೂರ 532 ಕಿ.ಮೀ.
-ಭೂಸ್ವಾಧೀನಕ್ಕೆ ಅಗತ್ಯದ ಮೊತ್ತ 7,720 ಕೋಟಿ ರೂ. 2024ರಲ್ಲಿ ಈ ಯೋಜನೆ ಸಾಕಾರ

ಪ್ರದೀಪ್‌ ಬೇಕಲ್‌

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.