ಕೊಚ್ಚಿಯ ಬ್ಯೂಟಿ ಪಾರ್ಲರ್‌ ಶೂಟೌಟ್‌ ಪ್ರಕರಣ: ಪೈವಳಿಕೆಯ ಮನೆಗೆ ದಾಳಿ; ಮಾರಕಾಸ್ತ್ರ ವಶಕ್ಕೆ


Team Udayavani, Apr 20, 2019, 9:44 AM IST

Untitled-1

ಮಂಜೇಶ್ವರ: ಕೊಚ್ಚಿ ಪನಂಬಳ್ಳಿ ನಗರದಲ್ಲಿರುವ ನಟಿ ಲೀನಾ ಮರಿಯಾ ಪೋಲ್‌ ಅವರ ಮಾಲಕತ್ವದ ನೈಲ್‌ ಬ್ಯೂಟಿ ಪಾರ್ಲರ್‌ಗೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಕ್ರೈಂ ಬ್ರಾಂಚ್‌ ಅಧಿಕಾರಿಗಳು ಮಂಜೇಶ್ವರ ಪೈವಳಿಕೆ ಸಮೀಪದ ಕಾಯರ್‌ಕಟ್ಟೆಯ ಮನೆ ಯೊಂದಕ್ಕೆ ದಾಳಿ ನಡೆಸಿ ಅಪಾರ ಪ್ರಮಾಣದ ಮಾರಕಾಯುಧಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಮನೆಯಿಂದ ಪಿಸ್ತೂಲು, ತಲವಾರುಗಳು, ಸ್ಪ್ರಿಂಗ್‌ ಚಾಕು ಮತ್ತಿತರ ಆಯುಧಗಳು, ಹಲವು ಮೊಬೈಲ್‌ಗ‌ಳು ಮತ್ತು ವಾಹನಗಳ ನಂಬರ್‌ ಪ್ಲೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕ್ರೈಂಬ್ರಾಂಚ್‌ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ವಿವರ
ಬ್ಯೂಟಿ ಪಾರ್ಲರ್‌ಗೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಸುಪಾರಿ ತಂಡಕ್ಕೆ ಸೇರಿದ ಪೆರುಂ ಬಾವೂರಿನ ಬಿಲಾಲ್‌ ಸಹಿತ ಇಬ್ಬರನ್ನು ಕ್ರೈಂಬ್ರಾಂಚ್‌ ಕೆಲವು ದಿನಗಳ ಹಿಂದೆ ಬಂಧಿಸಿತ್ತು. ಆ ಪೈಕಿ ಬಿಲಾಲ್‌ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಸಿಕ್ಕಿದ ಮಾಹಿತಿಯಂತೆ ಪೈವಳಿಕೆಯ ಮನೆಗೆ ದಾಳಿ ನಡೆಸಲಾಗಿದೆ.

ಮೋನಾಯಿ ಎಂಬಾತ ಶೂಟೌಟ್‌ ಪ್ರಕರಣದ ಸೂತ್ರಧಾರನಾಗಿದ್ದು, ಈಗ ತಲೆ ಮರೆಸಿಕೊಂಡಿದ್ದಾನೆ. ಮೂಲತಃ ತೃಶೂರು ನಿವಾಸಿರುವ ಆತ ಮಲೇಶ್ಯಾಕ್ಕೆ ಪರಾರಿಯಾಗಿರಬೇಕು ಎಂದು ಶಂಕಿಸಲಾಗುತ್ತಿದೆ. ಕೆಲವು ವರ್ಷ ಕಾಸರಗೋಡಿನಲ್ಲೂ ನೆಲೆಸಿದ್ದ. ಬ್ಯೂಟಿ ಪಾರ್ಲರ್‌ಗೆ ಗುಂಡು ಹಾರಿಸಲು ಈತನೇ ಬಿಲಾಲ್‌ ಮತ್ತು ಇನ್ನೋರ್ವನಿಗೆ ಸುಪಾರಿ ನೀಡಿ ಬಂದೂಕು ಮತ್ತು ಬೈಕ್‌ ಒದಗಿಸಿದ್ದ ಎಂದು ಕ್ರೈಂಬ್ರಾಂಚ್‌ ತಿಳಿಸಿದೆ.

ಮೋನಾಯಿ ಕಾಸರಗೋಡಿನೊಂದಿಗೆ ಸಂಪರ್ಕ ಹೊಂದಿರುವ ಕಾರಣ ಆತನ ಪತ್ತೆಗಾಗಿ ತನಿಖೆಯನ್ನು ಕಾಸರಗೋಡಿಗೂ ವಿಸ್ತರಿಸಲಾಗಿದೆ. ಕೊಚ್ಚಿಯ ಕ್ರೈಂಬ್ರಾಂಚ್‌ ಡಿವೈಎಸ್‌ಪಿ ಜೋಸ್‌ ಚೆರಿಯನ್‌ ನೇತೃತ್ವದ ತಂಡ ತನಿಖೆ ನಡೆಸುತ್ತಿದೆ.

ಕ್ರಿಮಿನಲ್‌ಗಳ ಅಡ್ಡೆ ?
ಮಾರಕಾಯುಧಗಳು ಪತ್ತೆಯಾದ ಪೈವಳಿಕೆಯ ಮನೆ ಕ್ರಿಮಿನಲ್‌ ಪ್ರಕರಣ ತಂಡಗಳು ಕಾರ್ಯ ವೆಸಗುವ ರಹಸ್ಯ ತಾಣವಾಗಿದ್ದು, ದಾಳಿ ಸಂದರ್ಭ ಇಲ್ಲಿ ಹಾಸಿಗೆ ಹಿಡಿದಿದ್ದ ಅಸ್ವಸ್ಥ ವೃದ್ಧ ಮಾತ್ರ ಇದ್ದರು. ಆ ಮನೆಯಲ್ಲಿ ಹಲವು ಬಟ್ಟೆಗಳು ಪತ್ತೆಯಾಗಿದ್ದು, ಆ ಬಗ್ಗೆ ವೃದ್ಧನ ಹೇಳಿಕೆಯನ್ನು ಕ್ರೈಂಬ್ರಾಂಚ್‌ ದಾಖಲಿಸಿಕೊಂಡಿದೆ. ಆದರೆ ಈ ಹೇಳಿಕೆಯನ್ನು ಸಂಪೂರ್ಣವಾಗಿ ನಂಬುವಂತಿಲ್ಲವೆಂದು ಕ್ರೈಂಬ್ರಾಂಚ್‌ ತಿಳಿಸಿದೆ.

ಟಾಪ್ ನ್ಯೂಸ್

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ

MBPatil

Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್‌

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

1-a-da

Rain; ಭಾರತ ಮತ್ತು ದಕ್ಷಿಣ ಆಫ್ರಿಕಾ ವನಿತಾ ಟಿ20 ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

1-paris

Paris Olympics; ಅಲ್ಡ್ರಿನ್‌, ಅಂಕಿತಾ ಧ್ಯಾನಿಗೆ ಒಲಿಂಪಿಕ್ಸ್‌ ಟಿಕೆಟ್‌

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

1-eweweqw

Wrestling; ವಿನೇಶ್‌ ಫೋಗಾಟ್‌ ಗೆ ಸ್ವರ್ಣ ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.