Madikeri: ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾದ ಪತಿ
Team Udayavani, Jul 20, 2024, 2:04 PM IST
ಮಡಿಕೇರಿ: ದಂಪತಿಯ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೇಟೋಳಿ ಗ್ರಾಮದಲ್ಲಿ ಜು.20ರ ಶನಿವಾರ ನಡೆದಿದೆ.
ಶಿಲ್ಪಾ ಸೀತಮ್ಮ (38) ಗುಂಡೇಟಿನಿಂದ ಮೃತಪಟ್ಟಿರುವ ಮಹಿಳೆಯಾಗಿದ್ದು, ಗುಂಡು ಹಾರಿಸಿದ ಪತಿ ನಾಯಕಂಡ ಸಿ.ಬೋಪಣ್ಣ (43) ಬಂದೂಕಿನೊಂದಿಗೆ ಪೊಲೀಸರಿಗೆ ಶರಣಾಗಿದ್ದಾರೆ.
ಪತಿ-ಪತ್ನಿ ನಡುವೆ ಕಳೆದ ಕೆಲ ದಿನಗಳಿಂದ ಕೌಟುಂಬಿಕ ಕಲಹ ನಡೆಯುತ್ತಿದ್ದು, ಇಂದು (ಜು.20ರ ಶನಿವಾರ) ಬೆಳಿಗ್ಗೆ ಇದು ವಿಕೋಪಕ್ಕೆ ತಿರುಗಿ ಬೋಪಣ್ಣ ಅವರು ಶಿಲ್ಪಾ ಸೀತಮ್ಮ ಅವರ ಮೇಲೆ ಗುಂಡು ಹಾರಿಸಿರುವುದಾಗಿ ತಿಳಿದು ಬಂದಿದೆ.
ನಾಯಕಂಡ ಸಿ.ಬೋಪಣ್ಣ ಅವರು ವಿರಾಜಪೇಟೆ ಪೊಲೀಸರಿಗೆ ಶರಣಾಗಿದ್ದು, ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ.
ಕೊಲೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ವಿರಾಜಪೇಟೆ ನಗರ ಪೊಲೀಸ್ ಠಾಣಾ ಅಧಿಕಾರಿಗಳು ಹಾಗೂ ಅಪರಾಧ ಪತ್ತೆ ದಳದ ತಜ್ಞರ ತಂಡ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಬೋಟ್ ಮುಳುಗಡೆ; ನಾಪತ್ತೆಯಾಗಿದ್ದ ಮುಜೀಬ್ ಮೃತದೇಹ ಪತ್ತೆ
Kumbla: ಕುಸಿದು ಬೀಳುವ ಅಪಾಯದಲ್ಲಿದೆ ಉರ್ಮಿ-ಪಲ್ಲೆಕೂಡೆಲು ಕಿರು ಸೇತುವೆ
Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ
Kasaragod: ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ ಸರಕಾರ
Kasaragod: ಕೊಲೆ ಪ್ರಕರಣ: 8 ವರ್ಷ ಕಠಿಣ ಸಜೆ, ದಂಡ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.