![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, May 4, 2024, 12:44 AM IST
ಮಂಜೇಶ್ವರ: ಮೂರು ಹಸುಗಳನ್ನು ಕಟ್ಟಿ ಹಾಕಿದ್ದ ಹಟ್ಟಿಯೊಂದು ಬೆಂಕಿಗಾಹುತಿಯಾಗಿದೆ. ಘಟನೆ ಕೂಡಲೇ ಮನೆಯವರ ಗಮನಕ್ಕೆ ಬಂದಿದ್ದು, ಇದರಿಂದ ಹಸುಗಳನ್ನು ಅಪಾಯದಿಂದ ರಕ್ಷಿಸಲು ಸಾಧ್ಯವಾಯಿತು.
ಬಾಕ್ರಬೈಲುಮೂಲೆಯ ಮಹಾಬಲ ಶೆಟ್ಟಿ ಅವರ ಮನೆ ಬಳಿಯ ಹಟ್ಟಿ ಬೆಂಕಿಗಾಹುತಿಯಾಗಿದೆ. ಶುಕ್ರವಾರ ಮುಂಜಾನೆ 2 ಗಂಟೆಗೆ ಹಟ್ಟಿಯಲ್ಲಿದ್ದ ಹಸುಗಳು ಕೂಗುತ್ತಿರುವುದು ಕೇಳಿ ಬಂದ ಹಿನ್ನೆಲೆಯಲ್ಲಿ ಮನೆಯವರು ಎಚ್ಚೆತ್ತು ನೋಡಿದಾಗ ಹಟ್ಟಿ ಉರಿಯುತ್ತಿರುವುದು ಕಂಡು ಬಂದಿದ್ದು, ಕೂಡಲೇ ಹಸುಗಳನ್ನು ಹೊರಕ್ಕೆ ತಂದು ರಕ್ಷಿಸಲಾಯಿತು. ಹಟ್ಟಿಯಲ್ಲಿದ್ದ ತೆಂಗಿನಕಾಯಿ ಹಾಗೂ ಬೈಹುಲ್ಲು ಬೆಂಕಿಗಾಹುತಿಯಾಗಿದೆ. ಇದರಿಂದ ಸುಮಾರು 2 ಲಕ್ಷ ರೂ. ನಷ್ಟವಾಗಿದೆ.
ಉಪ್ಪಳದಿಂದ ಬಂದ ಅಗ್ನಿಶಾಮಕ ದಳ ಹಾಗು ಸ್ಥಳೀಯರು ಸೇರಿ ಬೆಂಕಿಯನ್ನು ಆರಿಸಿದರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿ ಅನಾಹುತಕ್ಕೆ ಕಾರಣ ಎಂದು ಶಂಕಿಸಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.