“ಯಕ್ಷಗಾನದಿಂದ ಪುರಾಣ ಕತೆಗಳು,ಇತಿಹಾಸ ಜೀವಂತ’


Team Udayavani, Jul 31, 2017, 6:15 AM IST

30ksde2.jpg

ಉಪ್ಪಳ: ತುಳುನಾಡ ಮಣ್ಣಿನ ಕಲೆ ಯಕ್ಷಗಾನ ಧಾರ್ಮಿಕತೆಯ ಪಂಚಾಂಗವೆಂದೇ ಹೇಳಬಹುದು. ಇದರಲ್ಲಿರುವ ನವರಸ ವೈಭವ, ತಾಳ, ಲಯ, ಕುಣಿತ, ಸಂಗೀತ ಸಹಿತ ಶಬ್ದಕೋಶಗಳು ಮನುಷ್ಯ ಜೀವನದ ಏಳ್ಗೆಗೆ ಪೂರಕವಾದವುಗಳು. ಭಾರತೀಯ ಪುರಾಣ ಕತೆಗಳು, ಇತಿಹಾಸ ಈ ಕಲೆಯ ಮೂಲಕ ಇನ್ನೂ ಜೀವಂತವಾಗಿದೆ. ಕಲೆಗೆ ಮಹಾ ಪ್ರೋತ್ಸಾಹವನ್ನು ನೀಡುವ ಮೂಲಕ ಅದು ಜಗದ್ವಿಖ್ಯಾತಿ ಪಡೆಯಲಿ ಎಂದು ಉದ್ಯಮಿ, ಧಾರ್ಮಿಕ ಮುಂದಾಳು ವಸಂತ ಪೈ  ಬದಿಯಡ್ಕ ಅಭಿಪ್ರಾಯ ವ್ಯಕ್ತಪಡಿಸಿದರು.

ಐಲ ಶ್ರೀ ದುರ್ಗಾಪರಮೇಶ್ವರೀ ಕಲಾ ಭವನದಲ್ಲಿ ಶುಕ್ರವಾರ ರಾತ್ರಿ ನಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್‌ ಇದರ ಉಪ್ಪಳ ಘಟಕದ ಉದ್ಘಾಟನಾ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ  ಮಾತನಾಡಿದರು.

ದೇಶದ ಸಂಸ್ಕೃತಿ ಮತ್ತು ಕಲೆ ಬೆಳಗಿದಲ್ಲಿ ಮನುಷ್ಯನೂ ಉನ್ನತಿ ಹೊಂದುತ್ತಾನೆ. ಆದರೆ ದುರದೃಷ್ಟವಶಾತ್‌ ಇಂದಿನ ಪೀಳಿಗೆ ಅವುಗಳಿಂದ ವಿಮುಖವಾಗುತ್ತಿದೆ. ಜೀವನವನ್ನು ಪರಮೋನ್ನತಿಯೆಡೆಗೆ ಸಾಗಿಸುವ ಇಂತಹ ಕಲೆಗಳಿಂದ ಕಲಿಯಬೇಕಾದ್ದು ಅಗಾಧ. ಪ್ರತಿ ಕತೆಗಳಲ್ಲಿಯೂ ನಿಜ ಜೀವನದಲ್ಲಿ ನಡೆಯಬಹುದಾದ ದುರಂತಗಳಿಗೆ ದೃಷ್ಟಾಂತಗಳ ಮೂಲಕ ನೀತಿಪಾಠವಿದೆ. ಇದು ಗಮನಿಸಬೇಕಾದ್ದು ಎಂದು ಅವರು ತಿಳಿಸಿ, ಉಪ್ಪಳ ಘಟಕ ಮುಂದಿನ ದಿನಗಳಲ್ಲಿ ಮಹೋನ್ನತ ಕಾರ್ಯವನ್ನು ಸಾಧಿಸಲಿ ಎಂದು ಶುಭ ಹಾರೈಸಿದರು.

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಮಂಗಳೂರು ಇದರ ಅಧ್ಯಕ್ಷ ಪಟ್ಲ ಸತೀಶ ಶೆಟ್ಟಿ ಮಾತನಾಡಿ, ಯಾವುದೇ ಲಾಭದ ಉದ್ದೇಶಕ್ಕಾಗಿ ಸಂಸ್ಥೆಯನ್ನು ಬೆಳೆಸದೆ ಯಕ್ಷಗಾನ ಎಂಬ ಮೇರು ಕಲೆಯನ್ನು ಅರಳಿಸಿದ ಅತ್ಯಂತ ಅಶಕ್ತ ಕಲಾವಿದರಿಗೆ ನೆರವಾಗುವ ನಿಟ್ಟಿನಲ್ಲಿ ಮಾತ್ರ ಕಾರ್ಯವೆಸಗುತ್ತಿದೆ. ಕಲಾಪ್ರೇಮಿಗಳೆಲ್ಲರೂ ಕೈಜೋಡಿಸಿದಲ್ಲಿ ಮಾತ್ರ ಇಂತಹ ಮಹತ್‌ ಕಾರ್ಯ ಸಾಧ್ಯ. ತನಗೆ ಕೀರ್ತಿ ನೀಡಿದ ಕಲಾಮಾತೆಯ ಸೇವೆಯನ್ನು ಕಿಂಚಿತ್‌ ಮಾಡುತ್ತಿದ್ದೇನೆ. ಅಭಿಮಾನಿಗಳೆಲ್ಲರ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು.

ಮಂಜೇಶ್ವರ ಫಿರ್ಕಾ ಬಂಟರ ಸಂಘದ ಅಧ್ಯಕ್ಷ ದಾಸಣ್ಣ ಆಳ್ವ ಕುಳೂರು ಬೀಡು ಅಧ್ಯಕ್ಷತೆ ವಹಿಸಿದ್ದರು. ಐಲ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ನಾರಾಯಣ ಹೆಗ್ಡೆ ಕೋಡಿಬೈಲು,  ಪಟ್ಲ ಫೌಂಡೇಶನ್‌ ಕೇಂದ್ರ ಸಮಿತಿಯ ಮಾಗದರ್ಶಕ ಪಟ್ಲಗುತ್ತು ಮಹಾಬಲ ಶೆಟ್ಟಿ ಶುಭಾಂಶನೆ ಗೈದರು.

ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಗೋವಿಂದ ಭಟ್‌ ಸೂರಿಕುಮೇರಿ, ಅಂತರಾಷ್ಟಿÅàಯ  ಕಬಡ್ಡಿಪಟು ಮಂಜಲೊ¤àಡಿ ಭಾಸ್ಕರ ರೈ, ಕೇಪು ಗ್ರಾಮ ಪಂಚಾಯತ್‌ ಮಾಜಿ ಉಪಾಧ್ಯಕ್ಷ ಚೆಲ್ಲಡ್ಕ ರಾಧಾಕೃಷ್ಣ ಶೆಟ್ಟಿ ದಡ್ಡಂಗಡಿ, ಚಿಪ್ಪಾರು ಅಮ್ಮೇರಿ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಪ್ರಧಾನ ಕಾರ್ಯದರ್ಶಿ ಅಜಿತ್‌ ಎಂ.ಸಿ ಲಾಲ್‌ಬಾಗ್‌, ತಾಳಮದ್ದಳೆ ಅರ್ಥದಾರಿ ಲತಾ ಎನ್‌.ನಾವಡ, ಯಕ್ಷಧ್ರುವ ಪಟ್ಲ ಫೌಂಡೇಶನ್‌ ಉಪ್ಪಳ ಘಟಕದ ಗೌರವಾಧ್ಯಕ್ಷ  ಪಿ.ಆರ್‌.ಶೆಟ್ಟಿ ಪೊಯೆÂಲು, ಕೋಳಾರು ಸತೀಶ್ಚಂದ್ರ ಭಂಡಾರಿ, ಗೌರವ ಸಲಹೆಗಾರ ಡಾ.ಶ್ರೀಧರ ಭಟ್‌, ದೇವಕಾನ ಕೃಷ್ಣ ಭಟ್‌, ಬೊಳ್ಳಾರು ನಾರಾಯಣ ಶೆಟ್ಟಿ, ಮೀನಾರು ವಿಶ್ವನಾಥ ಆಳ್ವ,  ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಶ್ರೀಧರ ಶೆಟ್ಟಿ ಮುಟ್ಟಂ, ಪುರುಷೋತ್ತಮ ಭಂಡಾರಿ, ಸುರೇಶ್‌ ಶೆಟ್ಟಿ ಬಳಕ, ಸುಧೀರ್‌ಕುಮಾರ್‌ ರೈ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಉಪ್ಪಳ ಘಟಕದ ವತಿಯಿಂದ ಕೇಂದ್ರ ಸಮಿತಿಗೆ 1 ಲಕ್ಷ ರೂ.ಗಳ ಚೆಕ್‌ ಹಸ್ತಾಂತರಿಸಲಾಯಿತು. ಭಾಗವತ ರಾಮ ಸಾಲಿಯಾನ್‌ ಪ್ರಾರ್ಥನೆ ಹಾಡಿದರು. ಉಪ್ಪಳ ಘಟಕದ ಸಂಚಾಲಕ ಯೋಗೀಶ್‌ ರಾವ್‌ ಚಿಗುರುಪಾದೆ ಸ್ವಾಗತಿಸಿದರು. ಜಯಪ್ರಕಾಶ್‌ ಶೆಟ್ಟಿ ದಡ್ಡಂಗಡಿ ವಂದಿಸಿದರು. ಸತೀಶ್‌ ಶೆಟ್ಟಿ ಒಡ್ಡಂಬೆಟ್ಟು ಮತ್ತು ರಾಜಾರಾಮ್‌ ರಾವ್‌ ಕಾರ್ಯಕ್ರಮ ನಿರ್ವಹಿಸಿದರು.

ಕಾರ್ಯಕ್ರಮ ಮೊದಲು ತೆಂಕುತಿಟ್ಟಿನ ಖ್ಯಾತ ಕಲಾವಿದರಿಂದ ಭಸ್ಮಾಸುರ ಮೋಹಿನಿ ಮತ್ತು ಬಳಿಕ  ಶಬರಿಮಲೆ ಅಯ್ಯಪ್ಪ ಯಕ್ಷಗಾನ ಪ್ರದರ್ಶನ ಕಿಕ್ಕಿರಿದ ಪ್ರೇಕ್ಷಕರ ಸಮ್ಮುಖ ಪ್ರದರ್ಶಿಸಲ್ಪಟ್ಟಿತು.

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Kasaragod: ಬೋಟ್‌ ಮುಳುಗಡೆ; ನಾಪತ್ತೆಯಾಗಿದ್ದ ಮುಜೀಬ್‌ ಮೃತದೇಹ ಪತ್ತೆ

8

Kumbla: ಕುಸಿದು ಬೀಳುವ ಅಪಾಯದಲ್ಲಿದೆ ಉರ್ಮಿ-ಪಲ್ಲೆಕೂಡೆಲು ಕಿರು ಸೇತುವೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

17

Kasaragod: ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸರಕಾರ

courts

Kasaragod: ಕೊಲೆ ಪ್ರಕರಣ: 8 ವರ್ಷ ಕಠಿಣ ಸಜೆ, ದಂಡ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.