ನಾಗರಪಂಚಮಿ: ಭಕ್ತಿ-ನಿಷ್ಠೆಯಿಂದ ಕ್ಷೀರಾಭಿಷೇಕ
Team Udayavani, Aug 6, 2019, 6:19 AM IST
ಕಾಸರಗೋಡು: ನಾಡಿನೆಲ್ಲೆಡೆ ಸೋಮವಾರ ಭಕ್ತಿ-ನಿಷ್ಠೆ-ಸಡಗರದಿಂದ ನಾಗರ ಪಂಚಮಿ ಆಚರಿಸಲಾಯಿತು. ನಾಡಿನ ಪ್ರಮುಖ ದೇವಾಲಯಗಳಲ್ಲಿ, ಮಂದಿರಗಳಲ್ಲಿ, ನಾಗನ ಬನಗಳಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತರು ನಾಗನಿಗೆ ಎಳನೀರು ಮತ್ತು ಕ್ಷೀರಾಭಿಷೇಕ ನಡೆಸಿದರು. ವರ್ಷದ ಮೊದಲ ಹಬ್ಬದ ಸಡಗರ ಎಲ್ಲೆಡೆ ಕಂಡು ಬಂತು. ಪ್ರಕೃತಿಯನ್ನು ಪೂಜಿಸುವ ನಾಗಾರಾಧನೆ ಹೆಣ್ಮಕ್ಕಳಿಗೆ ವಿಶೇಷವಾಗಿದೆ.
ಕಾಸರಗೋಡಿನ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗಿನಿಂದಲೇ ನಾಗನಿಗೆ ಕ್ಷೀರಾಭಿಷೇಕ ಮತ್ತು ಎಳನೀರಿನ ಅಭಿಷೇಕ ಸಮರ್ಪಿಸಲು ಭಕ್ತರು ನೆರೆದಿದ್ದರು. ಇದೇ ರೀತಿ ಜಿಲ್ಲೆಯ ಬಹುತೇಕ ದೇವಸ್ಥಾನ, ಮಂದಿರ, ನಾಗಬನಗಳಲ್ಲಿ ದೃಶ್ಯಗಳು ಕಂಡು ಬಂತು. ನಾಗನಿಗೆ ಅಭಿಷೇಕ ಮಾಡುವ ಮೂಲಕ ಭಕ್ತರು ಕೃತಾರ್ಥ ಭಾವವನ್ನು ಹೊಂದಿದರು.
ಕಾಸರಗೋಡು ಬ್ಯಾಂಕ್ ರಸ್ತೆಯಲ್ಲಿರುವ ನಾಗರಾಜ ಕಟ್ಟೆಯಲ್ಲಿ ನಾಗನಿಗೆ ಹಾಲನ್ನೆರೆಯಲು ಭಾರೀ ಸಂಖ್ಯೆಯಲ್ಲಿ ಭಕ್ತರು ಬೆಳಗ್ಗಿನಿಂದಲೇ ಸರದಿಯಲ್ಲಿ ನಿಂತಿದ್ದರು.
ಕಾಸರಗೋಡು ನಗರದ ಎಸ್.ವಿ.ಟಿ. ರಸ್ತೆಯಲ್ಲಿರುವ ನಾಗನ ಕಟ್ಟೆಯಲ್ಲಿ ಭಕ್ತರುಅಭಿಷೇಕ ಮಾಡಿದರು.
ನೆಲ್ಲಿಕುಂಜೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ನೆಲ್ಲಿಕುಂಜೆ ಕೋಮರಾಡಿ ದೈವಸ್ಥಾನದ ನಾಗನಿಗೆ ಹಾಲನ್ನೆರೆಯಲು ಭಾರೀ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದು, ವಿಶೇಷ ಪೂಜೆ-ಪುನಸ್ಕಾರ ನಡೆಸಿದರು. ಹಲವೆಡೆ ನಾಗತಂಬಿಲ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Israel ಸರ್ಜಿಕಲ್ ಸ್ಟ್ರೈಕ್: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್ ಬಾಂಬ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.