ಪಾಲಾ ಉಪಚುನಾವಣೆ: ಮಾಣಿ ಸಿ.ಕಾಪನ್‌ಗೆ ಐತಿಹಾಸಿಕ ಗೆಲುವು


Team Udayavani, Sep 28, 2019, 5:01 AM IST

27KSDE11-KAPPAN

ಕಾಸರಗೋಡು: ಕುತೂಹಲಕ್ಕೆ ಕಾರಣವಾಗಿದ್ದ ಕೋಟ್ಟಯಂ ಜಿಲ್ಲೆಯ ಪಾಲಾ ವಿಧಾನಸಭಾ ಚುನಾವಣೆಯಲ್ಲಿ ಎಡರಂಗದ ಎನ್‌.ಸಿ.ಪಿ. ಅಭ್ಯರ್ಥಿ ಮಾಣಿ ಸಿ.ಕಾಪನ್‌ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ.

ಕೇರಳ ಕಾಂಗ್ರೆಸ್‌(ಎಂ)ನ ಭದ್ರಕೋಟೆಯಾಗಿದ್ದ ಈ ಕ್ಷೇತ್ರದಲ್ಲಿ ಅಚ್ಚರಿಯ ಗೆಲುವು ಸಾಧಿಸುವ ಮೂಲಕ ಕೇರಳ ಕಾಂಗ್ರೆಸ್‌(ಎಂ)ಗೆ ಹೊಡೆತ ನೀಡಿದ್ದಾರೆ.

ಮತ ಎಣೆಕೆಯ ಪ್ರಥಮ ಸುತ್ತಿನಿಂದಲೇ ಮುನ್ನಡೆಯನ್ನು ಕಾಯ್ದುಕೊಂಡ ಮಾಣಿ ಸಿ.ಕಾಪನ್‌ ಅಂತಿಮ ಮತ ಎಣಿಕೆಯ ವರೆಗೂ ಮುನ್ನಡೆಯನ್ನು ಕಾಯ್ದುಕೊಂಡಿದ್ದರು. ಪಾಲಾ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಐವತ್ತು ವರ್ಷಗಳಿಂದ ಯುಡಿಎಫ್‌ನ ಭದ್ರ ಹಾಗು ಅಭೇದ್ಯ ಕೋಟೆಯಾಗಿತ್ತು. ಕೇರಳ ಕಾಂಗ್ರೆಸ್‌(ಎಂ)ನ ಕೆ.ಎಂ.ಮಾಣಿ ಅವರು ಇಲ್ಲಿ ಸತತ ಐವತ್ತು ವರ್ಷಗಳಿಂದ ಸೋಲಿಲ್ಲದ ಸರದಾರನಾಗಿ ಗೆಲ್ಲುತ್ತಾ ಬಂದಿದ್ದರು. ಅವರ ನಿಧನದಿಂದ ಈ ಕ್ಷೇತ್ರ ತೆರವಾಗಿದ್ದು, ಈ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿತ್ತು.ಉಪಚುನಾವಣೆಯಲ್ಲಿ ಐಕ್ಯರಂಗದ ಎಲ್ಲಾ ಲೆಕ್ಕಾಚಾರಗಳನ್ನು ಬುಡಮೇಲುಗೊಳಿಸಿ ಎಡರಂಗ ಐತಿಹಾಸಿಕ ಗೆಲುವು ಸಾಧಿಸಿದೆ.

2016ರಲ್ಲಿ ನಡೆದ ವಿಧಾನಸಭಾ ಚುನಾವಣೆ ಯಲ್ಲಿ ಒಟ್ಟು 1,80,091 ಮತಗಳ ಪೈಕಿ 1,39,775 ಮತಗಳು ಚಲಾಯಿಸಲ್ಪಟ್ಟಿತ್ತು. ಅದರಲ್ಲಿ ಐÂಕರಂಗದ ಕೆ.ಎಂ.ಮಾಣಿ 58,884 ಮತಗಳನ್ನು ಪಡೆದಿದ್ದರು. ಎಡರಂಗದ ಮಾಣಿ ಸಿ.ಕಾಪನ್‌ ಅವರಿಗೆ 54,181 ಮತಗಳು ಲಭಿಸಿದ್ದವು. ಬಿಜೆಪಿಯ ಎನ್‌.ಹರಿ ಅವರು 24,821 ಮತಗಳನ್ನು ಪಡೆದಿದ್ದರು. ಅಂದು ಕೆ.ಎಂ.ಮಾಣಿ 4,703 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

2019ರಲ್ಲಿ ನಡೆದ ಲೋಕಸಭಾ ಚುನಾವಣೆ ಯಲ್ಲಿ ಪಾಲಾ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1,77,550 ಮತಗಳ ಪೈಕಿ 1,29,037 ಮತಗಳು ಚಲಾಯಿಸಲ್ಪಟ್ಟಿತ್ತು. ಯುಡಿಎಫ್ನ ಥೋಮಸ್‌ ಚಾಳಕಾಡನ್‌ ಅವರಿಗೆ 66,971 ಮತಗಳು ಲಭಿಸಿದ್ದರೆ, ಎಡರಂಗದ ಪಿ.ಎಸ್‌.ವಾಸವನ್‌ ಅವರಿಗೆ 33,499 ಮತಗಳು ಲಭಿಸಿತ್ತು. ಎನ್‌ಡಿಎಯ ಪಿ.ಸಿ. ಥೋಮಸ್‌ ಅವರಿಗೆ 26,533 ಮತಗಳು ಲಭಿಸಿತ್ತು.

2,943 ಮತಗಳ ಅಂತರ
ಎಡರಂಗದ ಎನ್‌.ಸಿ.ಪಿ. ಅಭ್ಯರ್ಥಿ ಮಾಣಿ ಸಿ. ಕಾಪನ್‌ 54,137 ಮತಗಳನ್ನು ಪಡೆದರೆ, ಐಕ್ಯರಂಗದ ಕೇರಳ ಕಾಂಗ್ರೆಸ್‌(ಎಂ) ಅಭ್ಯರ್ಥಿ ಜೋಸ್‌ ಟೋಮ್‌ 51,194 ಮತಗಳನ್ನು ಪಡೆದುಕೊಂಡಿದ್ದಾರೆ. ಎನ್‌ಡಿಎಯ ಅಭ್ಯರ್ಥಿ ಬಿಜೆಪಿಯ ಎನ್‌.ಹರಿ 18,044 ಮತಗಳನ್ನು ಪಡೆದು ತೃತೀಯ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. ಮಾಣಿ ಸಿ.ಕಾಪನ್‌ 2,943 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.