Mumbai ರಸ್ತೆ ಅಪಘಾತ; ಚೇವಾರು ಬಳಿಯ ಯುವಕ ಸಾವು
Team Udayavani, Feb 24, 2024, 11:51 PM IST
ಕುಂಬಳೆ: ಮುಂಬಯಿಯಲ್ಲಿ ಶುಕ್ರವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಚೇವಾರು ಬಳಿಯ ಯುವಕ ಮೃತಪಟ್ಟಿದ್ದಾರೆ.
ಚನ್ನಿಕುಡೇಲು ಮಾರ್ಸಲ್ ಕ್ರಾಸ್ತಾ-ಲೀನಾ ಕಾಸ್ತಾ ದಂಪತಿಯ ಪುತ್ರ ರೂಬನ್ ಚಾರ್ಲ್ಸ್ ಕ್ರಾಸ್ತಾ (39) ಮೃತಪಟ್ಟವರು. ಅವರು 20 ವರ್ಷಗಳಿಂದ ಮುಂಬಯಿಯಲ್ಲಿ ಉದ್ಯಮಿಯಾಗಿದ್ದರು.
ಫೆ. 23ರಂದು ಅವರು ಸಂಚರಿಸುತ್ತಿದ್ದ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತತ್ಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸಲಿಲ್ಲ.ಅವರು ಮೂರು ತಿಂಗಳ ಹಿಂದೆಯಷ್ಟೆ ಊರಿಗೆ ಬಂದು ಮರಳಿದ್ದರು. ಮೃತರು ಪತ್ನಿ, ಪುತ್ರಿಯನ್ನು ಆಗಲಿದ್ದಾರೆ.
ಮೃದೇಹವನ್ನು ಶನಿವಾರ ಮಂಗಳೂರಿಗೆ ತಂದು ರವಿವಾರ ಸಂಜೆ 4ಕ್ಕೆ ಕಯ್ಯಾರು ಕ್ರಿಸ್ತರಾಜ ಚರ್ಚಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಬೋಟ್ ಮುಳುಗಡೆ; ನಾಪತ್ತೆಯಾಗಿದ್ದ ಮುಜೀಬ್ ಮೃತದೇಹ ಪತ್ತೆ
Kumbla: ಕುಸಿದು ಬೀಳುವ ಅಪಾಯದಲ್ಲಿದೆ ಉರ್ಮಿ-ಪಲ್ಲೆಕೂಡೆಲು ಕಿರು ಸೇತುವೆ
Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ
Kasaragod: ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ ಸರಕಾರ
Kasaragod: ಕೊಲೆ ಪ್ರಕರಣ: 8 ವರ್ಷ ಕಠಿಣ ಸಜೆ, ದಂಡ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.