![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Sep 7, 2024, 12:44 AM IST
ಕುಂಬಳೆ: ಕರ್ನಾಟಕದ ಮಂಜನಾಡಿಯಲ್ಲಿ ಲಾರಿ ಢಿಕ್ಕಿ ಹೊಡೆದು ಬೈಕ್ ಸವಾರ, ಮೀಂಜ ಗ್ರಾಮ ಪಂಚಾಯತ್ನ ಕಲ್ಲೆಕಾರುಗುತ್ತು ನಿವಾಸಿ ಚಂದ್ರಹಾಸ ಶೆಟ್ಟಿ (68) ಅವರು ಮೃತಪಟ್ಟಿದ್ದಾರೆ.
ಅವರು ಪತ್ನಿ ಮನೆಗೆ ತೆರಳಿ ಮರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು, ಬಳಿಕ ಪಡೀಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಶುಕ್ರವಾರ ಸಾವನ್ನಪ್ಪಿದ್ದಾರೆ.
ಮೃತರು ಪತ್ನಿ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.ಇವರು ಕೃಷಿಕರಾಗಿದ್ದು ಪೈವಳಿಕೆ ಸಹಕಾರಿ ಬ್ಯಾಂಕಿನಲ್ಲಿ ಕಾರ್ಯದರ್ಶಿಯಾಗಿ, ನಿವೃತ್ತರಾಗಿದ್ದರು.
You seem to have an Ad Blocker on.
To continue reading, please turn it off or whitelist Udayavani.