ಬಂದೂಕು ತೋರಿಸಿ ಬೆದರಿಕೆ ಪೊಲೀಸ್ ತನಿಖೆ ಆರಂಭ
Team Udayavani, Mar 16, 2017, 12:25 PM IST
ಕುಂಬಳೆ: ಕುಂಬಳೆ ಮುಟ್ಟಂ ನಿವಾಸಿ, ತಲಪಾಡಿಯಲ್ಲಿ ಬಾರ್ ನಡೆಸುತ್ತಿರುವ ಶ್ರೀಧರ ಶೆಟ್ಟ ಅವರಿಗೆ ಕೆಲವು ದಿನಗಳ ಹಿಂದೆ ಕೋಟಿ ರೂ. ನೀಡಬೇಕೆಂದು ದೂರವಾಣಿ ಕರೆಯ ಮೂಲಕ ಹಾಗೂ ನಾಲ್ವರ ತಂಡ ಮನೆಗೆ ಬಂದು ಬಂದೂಕು ತೋರಿಸಿ ಬೆದರಿಕೆಯೊಡ್ಡಿದ ಘಟನೆ ಸಂಬಂಧಿಸಿದಂತೆ ಕುಂಬಳೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕುಂಬಳೆ ಮುಟ್ಟಂ ನಿವಾಸಿ ಶ್ರೀಧರ ಶೆಟ್ಟಿ (67) ಅವರಿಗೆ ಭೂಗತ ತಂಡದಿಂದ ಬೆದರಿಕೆ ಬಂದಿದ್ದು, ಕಳೆದ ಒಂದು ತಿಂಗಳಿಂದ ಬ್ಯಾಂಕಾಕ್ನಿಂದ ಎಂದು ಹೇಳಿ ನಿರಂತರ ಫೋನ್ ಕರೆ ಬರುತ್ತಲೇ ಇದೆ. ಕೋಟಿ ರೂಪಾಯಿ ನೀಡಬೇಕೆಂದು ಬೇಡಿಕೆ ಇಟ್ಟಿರುವುದಾಗಿ ಪೊಲೀಸರಿಗೆ ತಿಳಿಸಿದ ದೂರಿನಲ್ಲಿ ತಿಳಿಸಲಾಗಿದೆ.
ಫೋನ್ ಕರೆಯ ಬೆನ್ನಿಗೆ ಮಾ. 3ರಂದು ಸ್ವಿಫ್ಟ್ ಕಾರಿನಲ್ಲಿ ಮನೆಗೆ ಬಂದ ನಾಲ್ವರ ತಂಡ ಬಂದೂಕು ತೋರಿಸಿ ಬೆದರಿಕೆ ನೀಡಿದ್ದಾಗಿ ಕುಂಬಳೆ ಪೊಲೀಸರಿಗೆ ದೂರು ನೀಡಿದ್ದಾರೆ.
ಕಾರಿನಲ್ಲಿ ಬಂದ ವ್ಯಕ್ತಿಗಳು ಕನ್ನಡ ಭಾಷೆಯಲ್ಲಿ ಮಾತನಾಡಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ಆರೋಪಿಗಳ ಫೋಟೋ ಮತ್ತು ಸಿಸಿಟಿವಿ ದೃಶ್ಯಗಳು ಪೊಲೀಸರಿಗೆ ಲಭಿಸಿವೆ. ಕೇರಳ ನೋಂದಣಿಯ ಸ್ವಿಫ್ಟ್ ಕಾರಿನಲ್ಲಿ ಈ ತಂಡ ಬಂದಿರುವುದಾಗಿ ಮಾಹಿತಿ ಲಭಿಸಿದೆ. ಕಾರನ್ನು ಬಾಡಿಗೆಗೆ ಪಡೆದುಕೊಂಡಿದ್ದಾಗಿ ತನಿಖೆಯಿಂದ ಪೊಲೀಸರಿಗೆ ಮಾಹಿತಿ ಲಭಿಸಿದೆ.
ಬೆದರಿಕೆಯ ಬಗ್ಗೆ ಮಂಗಳೂರು ಪೊಲೀಸರಿಗೂ ದೂರು ನೀಡಲಾಗಿದೆ. ಕುಂಬಳೆ ಸಿಐ ವಿ.ವಿ. ಮನೋಜ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ತಿಂಗಳ ಹಿಂದೆ ಕೊಲೆಗೀಡಾದ ಕಾಲಿಯಾ ರಫೀಕ್ ಹಣಕ್ಕಾಗಿ ಶ್ರೀಧರ ಶೆಟ್ಟಿ ಅವರಿಗೆ ಬೆದರಿಕೆಯೊಡ್ಡಿರುವುದಾಗಿ ಪೊಲೀಸರಿಗೆ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.