ಸಮರ್ಪಣ ಸೇವಾ ಮನೋಭಾವದಿಂದ ಯಶಸ್ಸು: ಆನೆಗುಂದಿ ಶ್ರೀ

15ನೇ ವರುಷದ ಚಾತುರ್ಮಾಸ್ಯ ವ್ರತಾಚರಣೆಯ ಆಹ್ವಾನ ಪತ್ರಿಕೆ ಬಿಡುಗಡೆ

Team Udayavani, Jun 21, 2019, 5:50 AM IST

20-KBL-2

ಕುಂಬಳೆ: ಸಮರ್ಪಣ ಸೇವಾ ಮನೋಭಾವನೆಯ ತೊಡಗಿಸಿಕ್ಕೊಳ್ಳುವಿಕೆಯಿಂದ ಕಾರ್ಯಕ್ರಮದ ಯಶಸ್ಸು ಸಾಧ್ಯ. ಚಾತುರ್ಮಾಸ್ಯದ ಯಶಸ್ಸಿಗೆ ಸಮಸ್ತ ಶಿಷ್ಯವೃಂದದವರು ಒಂದೇ ಮನಸ್ಸಿನಿಂದ ಸಂಘಟಿತರಾಗಿ ಕಾರ್ಯಪ್ರವೃತ್ತ ರಾಗಬೇಕೆಂದು ಕಟಪಾಡಿಯ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಸ್ವಾಮಿ ಕರೆ ನೀಡಿದರು.

ಪಡುಕುತ್ಯಾರಿನ ಆನೆಗುಂದಿ ಸಂಸ್ಥಾನದಲ್ಲಿ ಜು. 16ರಿಂದ ಸೆ. 14ರ ತನಕ ಜರಗಲಿರುವ 15ನೇ ವರುಷದ ಚಾತುರ್ಮಾಸ್ಯ ವ್ರತಾಚರಣೆಯ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಪೂಜ್ಯರು ಆಶೀರ್ವಚನ ನೀಡಿದರು.

ಸಮಸ್ತ ಶಿಷ್ಯವೃಂದದವರ ಮನೆ ಮನೆಗೆ ಆಮಂತ್ರಣ ಪತ್ರಿಕೆಯನ್ನು ತಲಪಿಸುವ ಮತ್ತು ಕಾರ್ಯ ಕ್ರಮದಲ್ಲಿ ಭಾಗಿಯಾಗಿಸುವ ಜವಾಬ್ದಾರಿ ಯನ್ನು ದೇವಸ್ಥಾನಗಳು, ಸಂಘಸಂಸ್ಥೆಗಳು, ವಲಯ ಸಮಿತಿ ಹಾಗೂ ಮಹಾಸಂಸ್ಥಾನದ ಗುರುಸೇವಾ ಪರಿಷತ್‌ ವಹಿಸಿ ಯಶಸ್ವಿಗೊಳಿಸಬೇಕು ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಚಾತುರ್ಮಾಸ್ಯ ವ್ರತ ನಿರ್ವಹಣ ಸಮಿತಿ ಹಾಗೂ ಪ್ರತಿಷ್ಠಾನದ ಅಧ್ಯಕ್ಷ ಬಿ. ಸೂರ್ಯಕುಮಾರ್‌ ಆಚಾರ್ಯ ಹಳೆಯಂಗಡಿ ವಿನಂತಿಸಿದರು.
ಶ್ರೀಗಳು ಚಾತುರ್ಮಾಸ್ಯ ವ್ರತಾಚರಣೆಯ ಪೂರ್ವಭಾವಿ ಯಾಗಿ ಕರಾವಳಿಯ 15 ದೇವಸ್ಥಾನ ಗಳಿಗೆ ಹಾಗೂ ಮುಂಬಯಿಗೆ ಸಂದರ್ಶನ ನೀಡುವ ದಿನಗಳನ್ನು ತೀರ್ಮಾನಿಸಲಾಯಿತು. ಸಭೆಯಲ್ಲಿ ಚಾತುರ್ಮಾಸ್ಯ ದಿನಗಳಂದು ನಡೆಯುವ ವಿವಿಧ ಕಾರ್ಯಕ್ರಮಗಳ ಸಿದ್ಧತೆಯ ಬಗ್ಗೆ ಚರ್ಚಿಸಲಾಯಿತು.ಎ. 29 ಮತ್ತು ಆ. 4ರಂದು ನಡೆಯುವ ಜಗದ್ಗುರುಗಳ‌ ಜನ್ಮ ವರ್ಧಂತಿ ಪ್ರಯುಕ್ತ ಕಾರ್ಯಕ್ರಮಗಳು, ಆ. 25ರಂದು ವೈದಿಕ ಸಮಾವೇಶ, ಸೆ. 1ರಂದು ಮಹಿಳಾ ಸಮಾವೇಶ ಮತ್ತು ಸೆ. 8ರಂದು ಯುವ ಸಮಾವೇಶ ಹಾಗೂ ಪ್ರತಿ ದಿನ ಭಜನೆ, ಸತ್ಸಂಗ, ಸಾಂಸ್ಕೃತಿಕ ಕಾರ್ಯಕ್ರಮಗಳು, ಮಹಾಸಂಸ್ಥಾನದ ಎಜುಕೇಶನಲ್‌ ಟ್ರಸ್ಟ್‌ ಮತ್ತು ಗೋಶಾಲಾ ಟ್ರಸ್ಟ್‌ ಇವುಗಳ‌ ಉದ್ಘಾಟನೆಯೂ ನಡೆಯಲಿವೆ.

ಸಂಸ್ಥಾನದ ಆಸ್ಥಾನ ವಿದ್ವಾಂಸ ಜೋತಿಷ ವಿದ್ವಾನ್‌ ಉಮೇಶ ಆಚಾರ್ಯ ಪಡೀಲು ಮಂಗಳೂರು, ಬ್ರಹ್ಮಶ್ರೀ ಪುರೋಹಿತ ಅಕ್ಷಯ ಶರ್ಮಾ ತಂತ್ರಿ, ಸಮಿತಿ ಗೌರವಾಧ್ಯಕ್ಷ ಪಿ.ವಿ. ಗಂಗಾಧರ ಆಚಾರ್ಯ ಉಡುಪಿ, ಸಮಿತಿಯ ಉಪಾಧ್ಯಕ್ಷ ರಾಗಿರುವ ಕರಾವಳಿ ಶ್ರೀ ಕಾಳಿಕಾಂಬಾ ದೇವಳಗಳ ಧರ್ಮದರ್ಶಿಗಳು ಭಾಗವಹಿಸಿ ಮಾತನಾಡಿದರು. ಆರಂಭದಲ್ಲಿ ವೇದ ಸಂಜೀವಿನಿ ಪಾಠ ಶಾಲೆಯ ವಿಧ್ಯಾರ್ಥಿಗಳಿಂದ ವೇದಘೋಷ ನಡೆಯಿತು. ಚಾತುರ್ಮಾಸ್ಯ ವ್ರತ ನಿರ್ವಹಣ ಸಮಿತಿ ಗೌರವ ಪ್ರಧಾನ ಕಾರ್ಯದರ್ಶಿ ಲೋಕೇಶ್‌ ಎಂ.ಬಿ. ಆಚಾರ್‌ ಕಂಬಾರು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಕಾಡಬೆಟ್ಟು ನಾಗರಾಜ ಆಚಾರ್ಯ ವಂದಿಸಿದರು.

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮುಂಬಯಿ, ಬೆಂಗಳೂರು, ಕೊಯಮತ್ತೂರು ಪ್ರದೇಶಗಳ ಕಾಳಿಕಾಂಬಾ ದೇಗುಲಗಳು ಒಟ್ಟಾಗಿ ಪಡುಕುತ್ಯಾರಿನ ಸಂಸ್ಥಾನದಲ್ಲಿ ಈ ಬಾರಿಯ ವಿಕಾರಿ ನಾಮ ಸಂವತ್ಸರದ ಚಾತುರ್ಮಾಸ್ಯ ವ್ರತಾಚರಣೆ ಯನ್ನು ಆಯೋಜಿಸಿವೆ. ಪ್ರಥಮವಾಗಿ ಕನ್ನಡ, ಮಲಯಾಳ ಮತ್ತು ಇಂಗ್ಲಿಷ್‌ ಭಾಷೆಯಲ್ಲಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಗಿದೆ.

ಟಾಪ್ ನ್ಯೂಸ್

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.