ಕಳೆಂಜನ ಗುಂಡಿಯಲ್ಲಿ ನೀರಿಲ್ಲ ಬರಲಿದೆಯೇ ಬರಗಾಲ: ಜನರಲ್ಲಿ ಆತಂಕ


Team Udayavani, May 17, 2019, 6:10 AM IST

kelenjana

ಬದಿಯಡ್ಕ: ನಮ್ಮ ನಂಬಿಕೆ, ವಿಶ್ವಾಸಗಳನ್ನು ಜೀವಂತವಾಗಿರಿಸುವ ಹಲವಾರು ವೈಚಿತ್ರಗಳು ಪ್ರಕೃತಿಯಲ್ಲಿ ಸದಾ ಜೀವಂತವಾಗಿವೆ.

ಅವುಗಳಿಗೊಂದು ಜ್ವಲಂತ ಉದಾಹರಣೆ ಚೆಂಡೆತ್ತಡ್ಕ. ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಇತಿಹಾಸ ಪ್ರಸಿದ್ಧ ಜಾಂಬ್ರಿ ಗುಹಾ ಪ್ರವೇಶ, ವರ್ಷ ಪೂರ್ತಿ ನೀರು ನೀಡುವ ಕಳಂಜನ ಗುಂಡಿಗಳು ಚೆಂಡೆತ್ತಡ್ಕದಲ್ಲಿವೆ.

ಕೇರಳ, ಕರ್ನಾಟಕ ಗಡಿ, ಉಭಯ ರಾಜ್ಯಗಳ ರಕ್ಷಿತಾರಣ್ಯ ವಲಯದಲ್ಲಿರುವ ಈ ಪ್ರದೇಶವು ಹಲವು ಪ್ರಾಕೃತಿಕ ವೈಶಿಷ್ಟéತೆಗಳಿಂದ ಮತ್ತು ಐತಿಹಾಸಿಕ ಹಿನ್ನಲೆಗಳಿಂದ ಕೂಡಿ ಪ್ರಕೃತಿ ರಮಣೀಯವಾಗಿದ್ದು ಕಣ ಕಣದಲ್ಲೂ ನಂಬಿಕೆಗೆ ಇಂಬು ಕೊಡುವ ಒಂದೊಂದು ಕಥೆಯನ್ನು ಒಡಲಲ್ಲಿ ಬಚ್ಚಿಟ್ಟುಕೊಂಡಿದೆ.

ಬತ್ತದ ಗುಂಡಿಯಲ್ಲಿ ನೀರಿಲ್ಲ
ಸದಾ ಹಸಿರು ಗಿಡ ಮರ, ಹುಲ್ಲುಗಾವಲು, ಬೆಟ್ಟ ಗುಡ್ಡ, ಬಂಡೆ ಕಲ್ಲುಗಳಿಂದ ಕೂಡಿದ ಪ್ರದೇಶ ಚೆಂಡೆತ್ತಡ್ಕ ಬಳಿಯ ಕಳೆಂಜನ ಗುಂಡಿ ವರ್ಷ ಪೂರ್ತಿ ನೀರಿನ ಒರತೆ ಹೊಂದಿರುವ ಹಾಗೂ ಬತ್ತಿದ ಇತಿಹಾಸವಿಲ್ಲದ ಒಂದೂವರೆ ಅಡಿ ಆಳದ ನೀರಿನ ಸಣ್ಣ ಕೂಪ. ಹಿಂದೆ ಹಳ್ಳಿ ಪ್ರದೇಶಗಳಲ್ಲಿ ಮುಳಿಹುಲ್ಲು ಹಾಸಿನ ಮನೆಗಳಿದ್ದವು. ಆಸು ಪಾಸಿನ ಸ್ಥಳೀಯರ ಬಾಯಾರಿಕೆ ತಣಿಸಲು ಕಳೆಂಜನ ಗುಂಡಿಯನ್ನು ಆಶ್ರಯಿಸಿದ್ದರು. ಮಳೆ ಸುರಿದು ಜಾಂಬ್ರಿ ಕೆರೆ ತುಂಬಿದಲ್ಲಿ ಕಳೆಂಜನ ಗುಂಡಿ ತುಂಬುತ್ತಿತ್ತು. ಹಾವು, ಮುಂಗುಸಿ ಇತರ ಸಣ್ಣ ಪುಟ್ಟ ಪ್ರಾಣಿ, ಪಕ್ಷಿಗಳಿಗೆ ಜೀವಜಲವಾಗಿದ್ದ ಕಳೆಂಜನ ಗುಂಡಿ ಇದೀಗ ಒರತೆಯನ್ನು ನಿಲ್ಲಿಸಿದ್ದು ಜೀವರಾಶಿಗಳ ಉಳಿವಿಗೆ ಸಂಚಕಾರ ಉಂಟಾಗಿದೆ. ಕಳೆಂಜನ ಗುಂಡಿಯಲ್ಲಿ ಅಭೂತಪೂರ್ವ ಎಂಬಂತೆ ನೀರಿಲ್ಲದಾಗಿದೆ.

ಐತಿಹ್ಯ
ತುಳುನಾಡಿನ ಕರ್ಕಾಟಕ ಮಾಸ (ಆಟಿ ತಿಂಗಳು) ಮನೆಗಳಿಗೆ ತೆರಳಿ ಕಷ್ಟಗಳನ್ನು ಕಳೆಯುವ (ಹೋಗಲಾಡಿಸುವ) ಆಟಿ ಕಳಂಜ ಕೈ ತುಂಬಾ ದಾನಧರ್ಮಗಳನ್ನು ಪಡೆದು ಆಟಿ ತಿಂಗಳು ಕಳೆದು ಸಿಂಹ ಸಂಕ್ರಾಂತಿ(ಸೋಣ ತಿಂಗಳು) ಬಂದರೂ ಅದರ ಪರಿವೇ ಇಲ್ಲದೆ ಯಾತ್ರೆ ಮುಂದುವರಿಸುತ್ತಾನೆ.

ಸಿಂಹ ಮಾಸದಲ್ಲಿ ಧರ್ಮ ಬೇಡುವುದು ನಿಷಿದ್ಧವಾದರೂ ಕಟ್ಟಳೆಯನ್ನು ಮೀರಿ ಸಿಂಹ ಮಾಸದ ಮೊದಲ ದಿನ ಚೆಂಡೆತ್ತಡ್ಕ ಜಾಂಬ್ರಿ ಗುಹೆ ಸಮೀಪ ಬಂದಾಗ ಅದೃಶ್ಯನಾಗುತ್ತಾನೆ. ಈ ಪ್ರದೇಶ ಕಳೆಂಜನ ಗುಂಡಿ ಎಂದು ಪ್ರಸಿದ್ಧಿ ಪಡೆದಿದೆ. ಕಳೆಂಜನ ಗುಂಡಿ ಸಮೀಪ, ಕಳೆಂಜ ತನ್ನ ಒಲಿಯ ಕೊಡೆಯನ್ನು ಊರಿದ ಸ್ಥಳವೆಂದು ನಂಬಲಾದ ಚಿಕ್ಕ ರಂಧ್ರವಿದೆ.

ಇದು ಅಪಾಯದ ಸೂಚನೆಯೇ?
ಇಲ್ಲಿನ ಜಲಾಶಯಗಳೆಲ್ಲವೂ ಬತ್ತಿಹೋದರೂ ಈ ತನಕ ಬತ್ತದ ಕಳೆಂಜನ ಬಾವಿಯೂ ನೀರಿಲ್ಲದೆ ಒಣಗಿ ಹೋಗಿರುವುದು ಮುಂದೆ ಎದುರಿಸಬೇಕಾದ ಬರ ಪರಿಸ್ಥಿತಿಯ ಸೂಚನೆಯಾಗಿದೆ ಎಂಬ ಆತಂಕ ಊರ ಜನರನ್ನು ಕಾಡಲಾರಂಭಿಸಿದೆ. ಎರಡು ವರ್ಷ ಹಿಂದಿನ ಮೇ 2 ರಂದು ಜಾಂಬ್ರಿ ಮಹೋತ್ಸವ ಜರುಗಿದ ಸಂದರ್ಭ ಕಳೆಂಜನ ಗುಂಡಿ ನೀರಿನಿಂದ ತುಂಬಿತ್ತು.

ಮುಂದೊಂದು ದಿನ ನೀರಿಗಾಗಿ ಹೋರಾಡುವ ಸ್ಥಿತಿ ಬರಬಹುದು.ಅತಿ ಆಸೆ ಗತಿ ಕೇಡು ಎನ್ನುವಂತೆ ಅಭಿವೃದ್ಧಿಯ ನೆಪದಲ್ಲಿ ಪ್ರಕೃತಿಯ ಮೇಲೆ ಎರಗುವ ದಬ್ಟಾಳಿಕೆಗೆ ಪ್ರಕೃತಿಯೇ ಉತ್ತರಿಸಲಾರಂಭಿಸಿದೆ.

ಬರಗಾಲದ ಸೂಚನೆ
ಹಲವಾರು ಪ್ರಕೃತಿ ವೈಶಿಷ್ಟéಗಳಲ್ಲಿ ಕಳೆಂಜನ ಗುಂಡಿಯೂ ಒಂದು. ಎರಡು ವರ್ಷಗಳ ಹಿಂದಿನ ಮೇ 2 ರಂದು ಜಾಂಬ್ರಿ ಮಹೋತ್ಸವ ಜರುಗಿದ ಸಂದರ್ಭ ಕಳೆಂಜನ ಗುಂಡಿ ನೀರಿನಿಂದ ತುಂಬಿತ್ತು. ಚಿಕ್ಕ ಪುಟ್ಟ ಜೀವ ಸಂಕುಲಗಳಿಗೆ ನೀರುಣಿಸುತ್ತಿದ್ದ ಕೂಪ ಇತಿಹಾಸದಲ್ಲಿ ಪ್ರಥಮ ಬಾರಿ ಎಂಬಂತೆ ಇಂದು ಬತ್ತಿರುವುದು ಪ್ರಕೃತಿ ನಮಗೆ ನೀಡುವ ಬರಗಾಲದ ಸೂಚನೆ. ಬೇಸಗೆ ಮಳೆ ಸುರಿಯದಿರುವುದು, ಎಲ್ಲೆಂದರಲ್ಲಿ ಕೊಳವೆ ಬಾವಿ ನಿರ್ಮಾಣ ಕಳೆಂಜನ ಗುಂಡಿ ಒರತೆ ನಿಲ್ಲಲು ಕಾರಣ.
– ಮಹಾಬಲೇಶ್ವರ ಭಟ್‌ ಗಿಳಿಯಾಲು, ಸ್ಥಳೀಯರು

ಟಾಪ್ ನ್ಯೂಸ್

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.