ರಸ್ತೆಬದಿ ಅನಧಿಕೃತ ಜಾಹೀರಾತು ಫಲಕಗಳ ತೆರವು ಆರಂಭ


Team Udayavani, Oct 27, 2018, 6:00 AM IST

27-ad.jpg

ಕಾಸರಗೋಡು: ರಾಜ್ಯದಲ್ಲಿ ರಸ್ತೆ ಬದಿಗಳ ಅನಧಿಕೃತ ಫ್ಲೆಕ್ಸ್‌ ಬೋರ್ಡ್‌ಗಳು, ಜಾಹೀರಾತು ಫಲಕಗಳು ಮತ್ತು  ಬ್ಯಾನರ್‌ ಇತ್ಯಾದಿಗಳನ್ನು  ಅ.30ರೊಳಗಾಗಿ ತೆರವುಗೊಳಿಸುವಂತೆ ಕೇರಳ ಹೈಕೋರ್ಟ್‌ ಎಲ್ಲ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಜಿಲ್ಲಾಡಳಿತೆ ನೇತೃತ್ವದಲ್ಲಿ ಜಾಹೀರಾತು ಫಲಕ ತೆರವುಗೊಳಿಸುವ ಪ್ರಕ್ರಿಯೆ ಆರಂಭಗೊಂಡಿತು.

ರಸ್ತೆ ಬದಿಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಸಾರಿಗೆ ತಡೆ ಉಂಟಾಗುವ ರೀತಿಯಲ್ಲಿ ಹಾಗೂ ಅನಧಿಕೃತವಾಗಿ ಸ್ಥಾಪಿಸಿರುವ ಜಾಹೀರಾತು ಫಲಕ ಗಳನ್ನು, ಹೋರ್ಡಿಂಗ್‌, ಫ್ಲೆಕ್ಸ್‌ಗಳನ್ನು ಜಿಲ್ಲಾಧಿಕಾರಿ ಡಾ| ಡಿ.ಸಜಿತ್‌ಬಾಬು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಎ.ಶ್ರೀನಿವಾಸ್‌ ನೇತೃತ್ವದಲ್ಲಿ ಹಳೆಯ ಪ್ರಸ್‌ ಕ್ಲಬ್‌ ಜಂಕ್ಷನ್‌ನಲ್ಲಿ ತೆರವುಗೊಳಿಸಲು ಚಾಲನೆ ನೀಡಿದರು. ಜಿಲ್ಲೆಯ ಎಲ್ಲೆಡೆ ಏಕ ಸಮಯದಲ್ಲಿ ಜಾಹೀರಾತು ಫಲಕ ತೆರವುಗೊಳಿಸುವ ಕಾರ್ಯ ಆರಂಭಿಸಲಾಗಿದೆ. ಪೊಲೀಸರು, ಲೋಕೋಪಯೋಗಿ ಮೊದಲಾದ ಇಲಾಖೆಗಳು ಪ್ರಕ್ರಿಯೆ ಆರಂಭಿಸಿವೆ.
ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸಲು ಸ್ಥಳೀಯಾಡಳಿತ ಸಂಸ್ಥೆಗಳ ಕಾರ್ಯದರ್ಶಿಗಳಿಗೆ ಈ ಮೊದಲು ಆದೇಶ ನೀಡಲಾಗಿತ್ತು. ಜಿಲ್ಲಾಯೋಜನಾ ಸಮಿತಿ ಸಭೆ ಹಾಗೂ ಜಿಲ್ಲಾ ಅಭಿವೃದ್ಧಿ ಸಮಿತಿ ಸಭೆಗಳಲ್ಲೂ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದರು. ಜಾಹೀರಾತು ಫಲಕಗಳನ್ನು ಸ್ಥಾಪಿಸಿದವರಿಗೆ ಈ ಮೊದಲು ತೆರವುಗೊಳಿಸುವಂತೆ ಸೂಚನೆ ನೀಡಲಾಗಿತ್ತು. ಜಾಹೀರಾತು ಫಲಕಗಳನ್ನು ತೆರವುಗೊಳಿಸುವ ವೆಚ್ಚವನ್ನು ಆಯಾಯ ಸಂಸ್ಥೆಗಳಿಂದ ವಸೂಲು ಮಾಡಲಾಗುವುದು. ಆರಾಧನಾಲಯಗಳು ಸ್ಥಾಪಿಸಿರುವ ಫಲಕಗಳನ್ನು 24 ಗಂಟೆಗಳೊಳಗೆ ತೆರವುಗೊಳಿಸಬೇಕು  ಇಲ್ಲದಿದ್ದಲ್ಲಿ ಜಿಲ್ಲಾಡಳಿತ ತೆರವುಗೊಳಿಸಲಿದೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಎಡಿಎಂ ದೇವಿದಾಸ್‌, ಕಾಂಞಂಗಾಡ್‌ ಸಬ್‌ ಕಲೆಕ್ಟರ್‌ ಅರುಣ್‌ ಕೆ.ವಿಜಯನ್‌, ಡೆಪ್ಯೂಟಿ ಕಲೆಕ್ಟರ್‌ಗಳಾದ ಕೆ.ರವಿ ಕುಮಾರ್‌,ಮಚಂದ್ರನ್‌, ವಿಹಾಗೂ ಅಧಿಕಾರಿಗಳು ಜಾಹೀರಾತು ಫಲಕ ತೆರವುಗೊಳಿಸಲು ನೇತೃತ್ವ ನೀಡಿದ್ದಾರೆ. ಇದೇ ವೇಳೆ ರಸ್ತೆ  ಬದಿಯ ಬೋರ್ಡ್‌ಗಳು ಮತ್ತು ಅನಧಿಕೃತ ಜಾಹೀರಾತು ಫಲಕ ಗಳನ್ನು  ತೆರವುಗೊಳಿಸುವ ಕ್ರಮಕ್ಕೆ ಕೆಲವು ಸ್ಥಳೀಯಾಡಳಿತ ಸಂಸ್ಥೆಗಳು ಈಗಾಗಲೇ ಚಾಲನೆ ನೀಡಿವೆ. ಈ ಕಾರ್ಯಾಚರಣೆಯನ್ನು ಅ.30 ರೊಳಗಾಗಿ ಪೂರ್ತಿಗೊಳಿಸಲಾಗುವುದು ಎಂದು ರಾಜ್ಯ ಸರಕಾರದ ಪರ ಸ್ಟೇಟ್‌ ಅಟರ್ನಿ ಜನರಲ್‌ ಕೆ.ವಿ.ಸೋಹನ್‌ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ನ್ಯಾಯಾಲಯದ ಆದೇಶದಲ್ಲಿ ಏನಿದೆ?
ಆದೇಶವನ್ನು  ಪಾಲಿಸುವಲ್ಲಿ  ವಿಳಂಬ ನೀತಿ ಅನುಸರಿಸಿದಲ್ಲಿ  ಅದರಿಂದ ಸರಕಾರಕ್ಕೆ ಉಂಟಾಗುವ ನಷ್ಟ  ಹಾಗೂ ಅಂತಹ ಜಾಹೀರಾತು ಮತ್ತಿತರ ಬೋರ್ಡ್‌ ಗಳನ್ನು  ತೆರವುಗೊಳಿಸಲು ತಗಲುವ ಸಂಪೂರ್ಣ ವೆಚ್ಚ ವನ್ನು  ಸಂಬಂಧಪಟ್ಟಡಳಿತ ಸಂಸ್ಥೆಗಳ ಕಾರ್ಯದರ್ಶಿಯವರಿಂದ ವಸೂಲು ಮಾಡಬೇಕೆಂದು ಉತ್ಛ ನ್ಯಾಯಾಲಯವು ಆದೇಶದಲ್ಲಿ  ಸ್ಪಷ್ಟವಾಗಿ ತಿಳಿಸಿದೆ.ರಸ್ತೆ  ಬದಿಯ ಬೋರ್ಡ್‌ಗಳು ಮತ್ತು ಜಾಹೀರಾತು ಫಲಕಗಳನ್ನು  ತೆರವುಗೊಳಿಸಬೇಕಾಗಿರುವುದು ಆಯಾ ಸ್ಥಳೀಯಾಡಳಿತ ಸಂಸ್ಥೆಗಳ ಕಾರ್ಯದರ್ಶಿಯವರ ಹೊಣೆಗಾರಿಕೆಯಾಗಿದೆ. ಅದನ್ನು ಅವರು ಸಮರ್ಪಕವಾದ ರೀತಿಯಲ್ಲಿ ನಿರ್ವಹಿಸಬೇಕೆಂದು ನ್ಯಾಯಾಲಯವು ಮನದಟ್ಟು ಮಾಡಿದೆ.

 ಅ.30ರೊಳಗೆ ತೆರವು
ಅ.30 ರ ಮುಂಚಿತವಾಗಿ ಅನಧಿಕೃತ ಜಾಹೀರಾತು ಫಲಕಗಳನ್ನು ತೆರವು ಗೊಳಿಸಬೇಕೆಂದು ಹೈಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಐದು ದಿನಗಳೊಳಗಾಗಿ ಜಿಲ್ಲೆಯ ಎಲ್ಲೆಡೆ ಸ್ಥಾಪಿಸಲಾಗಿರುವ ಜಾಹೀರಾತು ಸಹಿತ ಎಲ್ಲಾ ಫಲಕಗಳನ್ನು ತೆರವುಗೊಳಿಸಲಾಗುವುದು
ಡಾ| ಸಜಿತ್‌ಬಾಬು,ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.