ವ್ಯಾಕ್ಸಿನ್‌ ಚಾಲೆಂಜ್‌: ಜಿ.ಪಂ.ನಿಂದ 50 ಲಕ್ಷ ರೂ. ದೇಣಿಗೆ


Team Udayavani, Apr 30, 2021, 3:40 AM IST

ವ್ಯಾಕ್ಸಿನ್‌ ಚಾಲೆಂಜ್‌: ಜಿ.ಪಂ.ನಿಂದ  50 ಲಕ್ಷ ರೂ. ದೇಣಿಗೆ

ಕಾಸರಗೋಡು: ವ್ಯಾಕ್ಸಿನ್‌ ಚಾಲೆಂಜ್‌ ಅಂಗವಾಗಿ ಕಾಸರಗೋಡು ಜಿಲ್ಲಾ ಪಂಚಾಯತ್‌ನಿಂದ ಮುಖ್ಯಮಂತ್ರಿ ದುರಂತ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ ನೀಡಲು ಜಿಲ್ಲಾ ಪಂಚಾಯತ್‌ ಸಭೆ ತೀರ್ಮಾನಿಸಿದೆ.

ಬುಧವಾರ ನಡೆದ ಸಭೆಯಲ್ಲಿ ಜಿ.ಪಂ. ಅಧ್ಯಕ್ಷೆ ಬೇಬಿ ಬಾಲಕೃಷ್ಣನ್‌ ಅವರ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯರು ತಮ್ಮ ಒಂದು ತಿಂಗಳ ಗೌರವ ಧನವನ್ನು ಈ ನಿಟ್ಟಿನಲ್ಲಿ ವ್ಯಾಕ್ಸಿನ್‌ ಚಾಲೆಂಜ್‌ಗೆ ನೀಡಲಿದ್ದಾರೆ.

ಚಟ್ಟಂಚಾಲಿನ ಉದ್ದಿಮೆ ಉದ್ಯಾನದಲ್ಲಿ ತ್ರಿಸ್ತರ ಪಂಚಾಯತ್‌ಗಳು ಮತ್ತು ನಗರ ಸಭೆಗಳು ಜಂಟಿ ವತಿಯಿಂದ ಆಕ್ಸಿಜನ್‌ ಪ್ಲಾಂಟ್‌ ಸ್ಥಾಪಿಸಲಿವೆ. ಈ ನಿಟ್ಟಿನಲ್ಲಿ ಅಗತ್ಯ ವಿರುವ ಜಾಗ ಮತ್ತು 50 ಲಕ್ಷ ರೂ.ವನ್ನು ಜಿಲ್ಲಾ ಪಂಚಾಯತ್‌ ಮಂಜೂರು ಮಾಡಲಿದೆ ಎಂದು ಸಭೆ ತಿಳಿಸಿದೆ. ಗ್ರಾಮ ಪಂಚಾಯತ್‌ಗಳು ತಲಾ 3 ಲಕ್ಷ ರೂ., ಬ್ಲಾಕ್‌ ಪಂಚಾಯತ್‌ಗಳು ಮತ್ತು ನಗರಸಭೆಗಳು ತಲಾ 5 ಲಕ್ಷ ರೂ. ಈ ನಿಟ್ಟಿನಲ್ಲಿ ಮೀಸಲಿರಿಸಲಿವೆ. ಇದರಲ್ಲಿ ಜಿಲ್ಲಾ ಯೋಜನೆ ಸಮಿತಿಯ ತೀರ್ಮಾನ ಅಂತಿಮವಾಗಿರುವುದು.

ಮೇ 1ರಿಂದ ಹಾಸಿಗೆ ಹಿಡಿದಿರುವ ರೋಗಿಗಳಿಗೆ ಮನೆಗಳಿಗೆ ತೆರಳಿ ಕೋವಿಡ್‌ ವ್ಯಾಕ್ಸಿನ್‌ ನೀಡುವ ಯೋಜನೆಯನ್ನು ಜಿಲ್ಲಾ ಆರೋಗ್ಯ ವಿಭಾಗ, ರಾಷ್ಟ್ರೀಯ ಆರೋಗ್ಯ ದೌತ್ಯಗಳೊಂದಿಗೆ ಸೇರಿ ಜಿಲ್ಲಾ ಪಂಚಾಯತ್‌ ಜಾರಿಗೊಳಿಸಲಿದೆ. ತದನಂತರ ಅಂಗವಿಕಲರಿಗೆ ವ್ಯಾಕ್ಸಿನ್‌ ಸೌಲಭ್ಯ ಒದಗಿಸಲಾಗುವುದು ಎಂದು ಸಭೆ ತಿಳಿಸಿದೆ.

ಶುಕ್ರವಾರ ಪಾರೆಂಟಿಂಗ್‌ ಕ್ಲಿನಿಕ್‌ಗಳ ಸೇವೆ :

ವಾರಾಂತ್ಯ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಜಿಲ್ಲೆಯ 6 ಬ್ಲಾಕ್‌ಗಳ ಐ.ಸಿ.ಡಿ.ಎಸ್‌. ಕಚೇರಿ ಗಳಲ್ಲಿ ಪ್ರತಿ ಶನಿವಾರ ಬೆಳಗ್ಗೆ 9.30ರಿಂದ ಮಧ್ಯಾಹ್ನ 1.30 ವರೆಗೆ ನಡೆಸಲಾಗುತ್ತಿದ್ದ ಪಾರೆಂಟಿಂಗ್‌ ಕ್ಲಿನಿಕ್‌ಗಳ ಸೇವೆ ಈ ಬಾರಿ ಶುಕ್ರವಾರ ನಡೆಸಲಾಗುವುದು.

ಕೇರಳದಲ್ಲಿ  ಹೆಚ್ಚುತ್ತಿರುವ ಆಮ್ಲಜನಕ ಬೇಡಿಕೆ :

ಕೋವಿಡ್‌ ಹರಡುವಿಕೆ ತೀವ್ರಗೊಂಡಿರುವಾಗಲೇ ರಾಜ್ಯದಲ್ಲಿ ಆಮ್ಲಜನಕದ ಬೇಡಿಕೆ ಹೆಚ್ಚಿದೆ. ದಿನಂಪ್ರತಿ 2 ಟನ್‌ಗಳಷ್ಟು ಆಮ್ಲಜನಕವು ಹೆಚ್ಚುವರಿಯಾಗಿ ಬೇಕಾಗುತ್ತಿದೆ. ಒಂದು ವಾರದ ಹಿಂದಿನವರೆಗೆ ದಿನಂಪ್ರತಿ 76ರಿಂದ 86 ಟನ್‌ ಆಮ್ಲಜನಕ ಸಾಕಾಗುತ್ತಿತ್ತು. ಆದರೆ ಇದೀಗ ಅದರ ಬೇಡಿಕೆ 96 ಟನ್‌ಗೆàರಿದೆ. ಎಪ್ರಿಲ್‌ ತಿಂಗಳ ಕೊನೆಯ ವೇಳೆಗೆ 100 ಟನ್‌ಗಿಂತ ಹೆಚ್ಚು ಆಮ್ಲಜನಕ ಬೇಕಾಗಿ ಬರಬಹುದೆಂದು ಅಂದಾಜಿಸಲಾಗಿದೆ. ಆರಂಭದಲ್ಲಿ ಕೋವಿಡ್‌ ಸೋಂಕಿತರಿಗಾಗಿ ಪ್ರತೀ ದಿನ 30ರಿಂದ 35ಟನ್‌ ಆಮ್ಲಜನಕ ಬೇಕಾಗುತ್ತಿತ್ತು. ಕೋವಿಡೇತರ ಅಗತ್ಯಗಳಿಗೆ ದಿನಂಪ್ರತಿ 45 ಟನ್‌ ಆಮ್ಲಜನಕ ಬೇಕಾಗುತ್ತದೆ. ಎ. 24ರಿಂದ ಪ್ರತೀ ದಿನ 95 ಟನ್‌ ಆಮ್ಲಜನಕ ಬೇಕಾಗಿ ಬರುತ್ತಿದೆ. ಇದೇ ವೇಳೆ ದಿನಂಪ್ರತಿ 200 ಟನ್‌ಗಳಷ್ಟು ಆಮ್ಲಜನಕ ಉತ್ಪಾದಿಸುವ ಶಕ್ತಿ ಕೇರಳಕ್ಕಿದೆ.

ಶೀಘ್ರದಲ್ಲಿ  ಆಕ್ಸಿಜನ್‌ ಪ್ಲಾಂಟ್‌ ಸ್ಥಾಪನೆ  :

ಕಾಸರಗೋಡು ಜಿಲ್ಲೆಯಲ್ಲಿ ಶೀಘ್ರದಲ್ಲಿ ಆಕ್ಸಿಜನ್‌ ಪ್ಲಾಂಟ್‌ ಸ್ಥಾಪನೆಗೊಳ್ಳಲಿದೆ. ಜಿಲ್ಲಾ ಪಂಚಾಯತ್‌ ವ್ಯಾಪ್ತಿಯ ಚಟ್ಟಂಚಾಲ್‌ ಉದ್ದಿಮೆ ಉದ್ಯಾನದಲ್ಲಿ ಈ ಪ್ಲಾಂಟ್‌ ಸ್ಥಾಪನೆ ಗೊಳ್ಳಲಿದೆ. ಇದರ ಅಂಗವಾಗಿ ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್‌, ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು, ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್‌ ವಿಶೇಷ ಅಧಿಕಾರಿ ಇ.ಪಿ. ರಾಜ್‌ ಮೋಹನ್‌, ಹಣಕಾಸು ಅಧಿಕಾರಿ ಸತೀಶನ್‌, ಉದ್ದಿಮೆ ಕೇಂದ್ರ ಪ್ರಬಂಧಕ ಸಜಿತ್‌ ಅವರ ನೇತೃತ್ವದ ತಂಡ ಸದ್ರಿ ಜಾಗವನ್ನು ಪರಿಶೀಲಿಸಿತು.

ಟಾಪ್ ನ್ಯೂಸ್

MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ವಿಶೇಷ ಕೋರ್ಟ್‌ ಆದೇಶ

MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ವಿಶೇಷ ಕೋರ್ಟ್‌ ಆದೇಶ

8-uv-fusion

School Memories: ತರಗತಿಯಲ್ಲಿ ಉಪ್ಪುಖಾರ

Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…

Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…

High court: ಕಲಿಯುಗ ಬಂದಂತೆ ತೋರುತ್ತಿದೆ…ವೃದ್ಧ ದಂಪತಿಯ ಜೀವನಾಂಶ ಕಾನೂನು ಹೋರಾಟ!

High court: ಕಲಿಯುಗ ಬಂದಂತೆ ತೋರುತ್ತಿದೆ…ವೃದ್ಧ ದಂಪತಿಯ ಜೀವನಾಂಶ ಕಾನೂನು ಹೋರಾಟ!

6-belthanagdy

ಬೆಳ್ತಂಗಡಿ:ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ‘ಕುತ್ಲೂರು ಗ್ರಾಮ’ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Jayam Ravi: ಜಯಂ ರವಿಯನ್ನು ಮನೆಯಿಂದ ಹೊರಹಾಕಿದ ಮಾಜಿ ಪತ್ನಿ; ಪೊಲೀಸರ ಮೊರೆ ಹೋದ ನಟ

Jayam Ravi: ಜಯಂ ರವಿಯನ್ನು ಮನೆಯಿಂದ ಹೊರಹಾಕಿದ ಮಾಜಿ ಪತ್ನಿ; ಪೊಲೀಸರ ಮೊರೆ ಹೋದ ನಟ

1-kangg

BJP; ಆಕ್ರೋಶದ ಬಳಿಕ ಹೇಳಿಕೆ ಹಿಂಪಡೆದುಕೊಂಡ ಕಂಗನಾ ರಣಾವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಅಮೀಬಿಕ್‌ ಎನ್ಸೆಫಾಲಿಟಿಸ್‌ ಬಗ್ಗೆ ಎಚ್ಚರದಿಂದಿರಿ’

Kasaragod: “ಅಮೀಬಿಕ್‌ ಎನ್ಸೆಫಾಲಿಟಿಸ್‌ ಬಗ್ಗೆ ಎಚ್ಚರದಿಂದಿರಿ’

Kasaragod: ಬಗೆದಷ್ಟು ಆಳವಾಗಿದೆ ಅಮಲು ಪದಾರ್ಥ ಜಾಲ

Kasaragod: ಬಗೆದಷ್ಟು ಆಳವಾಗಿದೆ ಅಮಲು ಪದಾರ್ಥ ಜಾಲ

Kasaragod ಇಲಿ ಜ್ವರ: ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Kasaragod ಇಲಿ ಜ್ವರ; ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Kasaragod ಮಿದುಳನ್ನು ತಿನ್ನುವ ಅಮೀಬಾ ಸೋಂಕು: ಚಟ್ಟಂಚಾಲ್‌ ಯುವಕ ಸಾವು

Kasaragod ಮಿದುಳನ್ನು ತಿನ್ನುವ ಅಮೀಬಾ ಸೋಂಕು: ಚಟ್ಟಂಚಾಲ್‌ ಯುವಕ ಸಾವು

8

Virajpete: ಮನೆಯಂಗಳದಲ್ಲಿ ಕಾಡಾನೆ; ಗ್ರಾಮಸ್ಥರಲ್ಲಿ ಆತಂಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ವಿಶೇಷ ಕೋರ್ಟ್‌ ಆದೇಶ

MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ವಿಶೇಷ ಕೋರ್ಟ್‌ ಆದೇಶ

8-uv-fusion

School Memories: ತರಗತಿಯಲ್ಲಿ ಉಪ್ಪುಖಾರ

Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…

Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…

2(2)

Vitla: ಟ್ರಾಫಿಕ್‌ ಜಾಮ್‌ ವಿಟ್ಲ ಪೇಟೆಯಲ್ಲಿ ನಿತ್ಯ ಸಂಕಟ

7-uv-fusion

Trip: ಕೊನೆಗೂ ಈಡೇರಿತು ತ್ರಿಮೂರ್ತಿಗಳ ಪ್ರವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.